ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಣಿವೆ ರಾಜ್ಯದಲ್ಲಿ ಕಲ್ಲು ತೂರಿದ್ದಕ್ಕೆ 765 ಮಂದಿ ಬಂಧನ!

|
Google Oneindia Kannada News

ದೆಹಲಿ, ನವೆಂಬರ್.19: ಕೇಂದ್ರ ಸರ್ಕಾರದ ಅದೊಂದು ತೀರ್ಮಾನ ಕಣಿವೆ ರಾಜ್ಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಸಿತ್ತು. ಜಮ್ಮು-ಕಾಶ್ಮೀರದಲ್ಲಿ ಜನರು ಮನೆಯಿಂದ ಹೊರ ಬರುವುದಕ್ಕೂ ಭಯ ಪಡುವಂತಾ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದಕ್ಕೆಲ್ಲ ಕಾರಣವಾಗಿದ್ದೇ 370ನೇ ವಿಧಿ ರದ್ದತಿ.

ಹೌದು, ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತ್ತು. ಈ ಸಂಬಂಧ ಸಂಸತ್ ಉಭಯ ಸದನಗಳಲ್ಲಿ ತಿದ್ದುಪಡಿ ಮಂಡನೆ ಮಾಡಲಾಗಿತ್ತು. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿ ಜಮ್ಮು-ಕಾಶ್ಮೀರದಲ್ಲಿ ಪೊಲೀಸರು ಹಾಗೂ ಸೇನಾ ಪಡೆ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದರು.

ಅಂತೂ-ಇಂತೂ ನಮ್ಮೂರಿಗೆ ರೈಲು ಬಂತು ಎಂದ ಕಣಿವೆ ಮಂದಿ! ಅಂತೂ-ಇಂತೂ ನಮ್ಮೂರಿಗೆ ರೈಲು ಬಂತು ಎಂದ ಕಣಿವೆ ಮಂದಿ!

ಆಗಸ್ಟ್.5 ರಿಂದ ನವೆಂಬರ್.15ರವರೆಗೆ ಜಮ್ಮು-ಕಾಶ್ಮೀರದಲ್ಲಿ ಕಲ್ಲು ತೂರಾಟ ಪ್ರಕರಣಗಳು ನಡೆದಿದ್ದವು. ಈ ಸಂಬಂಧ 765 ಜನರನ್ನು ಬಂಧಿಸಲಾಗಿದೆ ಎಂದು ಕೇಂದ್ರ ಗೃಹಖಾತೆಯ ರಾಜ್ಯ ಸಚಿವ ಜಿ.ಕಿಶಿನ್ ರೆಡ್ಡಿ ಮಾಹಿತಿ ನೀಡಿದ್ದಾರೆ.

Artical 370: Stonepelting In Jammu-Kashmir. 765 persons Arrested

ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹಖಾತೆಯ ರಾಜ್ಯ ಸಚಿವ ಜಿ.ಕಿಶಿನ್ ರೆಡ್ಡಿ ಕಲ್ಲು ತೂರಾಟ ಹಿನ್ನೆಲೆ 190 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, 765 ಜನರನ್ನು ಬಂಧಿಸಲಾಗಿತ್ತು ಎಂದು ಮಾಹಿತಿ ನೀಡಿದರು. ಇನ್ನು, ಜಮ್ಮು-ಕಾಶ್ಮೀರದಲ್ಲಿ ಕಾನೂನು ಉಲ್ಲಂಘಿಸಿದ್ದಕ್ಕಾಗಿ ಜನವರಿ.1ರಿಂದ ಆಗಸ್ಟ್.4ರ ಅವಧಿಯಲ್ಲಿ 361 ಪ್ರಕರಣಗಳು ದಾಖಲಾಗಿವೆ ಎಂದರು.

ಕಾಶ್ಮೀರದ ಕುರಿತು ವಿಶ್ವಸಂಸ್ಥೆಗೆ ಪಾಕಿಸ್ತಾನದ 6ನೇ ಪತ್ರಕಾಶ್ಮೀರದ ಕುರಿತು ವಿಶ್ವಸಂಸ್ಥೆಗೆ ಪಾಕಿಸ್ತಾನದ 6ನೇ ಪತ್ರ

ಕಳೆದ ಆರು ತಿಂಗಳ ಅವಧಿಯಲ್ಲಿ ಜಮ್ಮು-ಕಾಶ್ಮೀರಕ್ಕೆ 34, ಲಕ್ಷ 10 ಸಾವಿರ 219 ಪ್ರವಾಸಿಗರು ಭೇಟಿ ನೀಡಿದ್ದಾರೆ. ಈ ಪೈಕಿ 12 ಸಾವಿರದ 934 ಮಂದಿ ವಿದೇಶಿಗರಾಗಿದ್ದಾರೆ. ಪ್ರವಾಸಿಗರ ಭೇಟಿಯಿಂದ ಕಳೆದ ಆರು ತಿಂಗಳ ಅವಧಿಯಲ್ಲಿ 25.12 ಕೋಟಿ ರೂಪಾಯಿ ಆದಾಯ ಬಂದಿದೆ ಎಂದು ಅವರು ತಿಳಿಸಿದ್ದಾರೆ.

English summary
Clashes In Jammu-Kashmir: 190 Cases Registered, 765 persones Arrested.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X