ಕಿವುಡನಿಗೆ ಉತ್ತರ ಕೇಳಿಸುವುದಿಲ್ಲ: ರಾಹುಲ್ ವಿರುದ್ಧ ಜೇಟ್ಲಿ ವ್ಯಂಗ್ಯ
Recommended Video
ನವದೆಹಲಿ, ಡಿಸೆಂಬರ್ 14: ಸುಪ್ರೀಂಕೋರ್ಟ್ ತೀರ್ಪಿನ ಬಳಿಕವೂ ರಫೇಲ್ ಒಪ್ಪಂದದ ಬಗ್ಗೆ ಜಂಟಿ ಸಂಸದೀಯ ಸಮಿತಿ ಸಭೆ ತನಿಖೆಗೆ ಒತ್ತಾಯಿಸುತ್ತಿರುವ ಕಾಂಗ್ರೆಸ್ ವಿರುದ್ಧ ಅರುಣ್ ಜೇಟ್ಲಿ ಕಿಡಿಕಾರಿದ್ದಾರೆ.
ರಫೇಲ್ ಒಪ್ಪಂದದಲ್ಲಿ ಅವ್ಯವಹಾರ ನಡೆದಿದ್ದು, ಅದರ ಬಗ್ಗೆ ತನಿಖೆ ನಡೆಸಬೇಕು ಎಂದಿರುವ ಕಾಂಗ್ರೆಸ್ಅನ್ನು 'ಕಿವುಡನಿಗೆ ಹೇಳಿದ ಉತ್ತರ ಕೇಳಿಸುವುದಿಲ್ಲ' ಎಂದು ವ್ಯಂಗ್ಯವಾಡಿದ್ದಾರೆ.
ರಾಹುಲ್ ಗಾಂಧಿ ಭಾಷಣವೂ ಮತ್ತು ರಫೇಲ್ ಫೈಟರ್ ಜೆಟ್ ಮೌಲ್ಯವೂ!
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಜೇಟ್ಲಿ, 'ರಫೇಲ್ನಂತಹ ಒಪ್ಪಂದಗಳನ್ನು ಸಂಸದೀಯ ಸಮಿತಿಯ ತನಿಖೆಗೆ ಒಳಪಡಿಸಲು ಸಾಧ್ಯವಿಲ್ಲ. ಇದು ಕಾನೂನಿನ ಅಡಿಯಲ್ಲಿ ಕೋರ್ಟ್ನಿಂದ ಮಾತ್ರ ಸಾಧ್ಯ ಎಂದು ಹೇಳಿದರು.
ಕೇಂದ್ರ ಸರ್ಕಾರದ ಪರ ರಫೇಲ್ ತೀರ್ಪು: ಗಣ್ಯರೇನಂತಾರೆ?
ರಫೇಲ್ ವಿಚಾರದಲ್ಲಿ ಗದ್ದಲ ಎಬ್ಬಿಸಿದವರೆಲ್ಲರೂ ಸೋತಿದ್ದಾರೆ. ಕಾಂಗ್ರೆಸ್ ಮಾಡಿರುವ ಆರೋಪವು ರಾಷ್ಟ್ರೀಯ ಭದ್ರತೆಗೆ ರಾಜಿಯಾಗುವಂತಹದ್ದಾಗಿದೆ ಎಂದು ತಿಳಿಸಿದರು.
ರಾಹುಲ್ ಸುಳ್ಳಿಗೆ ಸುಪ್ರೀಂ ಛೀಮಾರಿ: ಅಮಿತ್ ಶಾ ಲೇವಡಿ
ಸರ್ಕಾರ ನೀಡಿರುವ ಎಲ್ಲ ಅಂಕಿ ಅಂಶಗಳೂ ನಿಖರವಾಗಿವೆ ಮತ್ತು ಕಾಂಗ್ರೆಸ್ ಸುಳ್ಳು ಮಾಹಿತಿಗಳನ್ನು ನೀಡುತ್ತಿದ್ದಾರೆ. ಸತ್ಯಕ್ಕೆ ಒಂದೇ ದೃಷ್ಟಿ ಇರುತ್ತದೆ, ಆದರೆ ಸುಳ್ಳಿಗೆ ನೂರಾರು ಕಣ್ಣುಗಳು. ಈ ಕಾರಣದಿಂದಲೇ ರಾಹುಲ್ ಗಾಂಧಿ ಅನೇಕ ಅಂಕಿ ಅಂಶಗಳನ್ನು ನಮೂದಿಸಿದ್ದಾರೆ ಎಂದು ಲೇವಡಿ ಮಾಡಿದರು.