ಸಿಬಿಐ ಮುಖ್ಯಸ್ಥರು ಸೀಜರ್ನ ಪತ್ನಿಯಂತೆ, ಸಂಶಯಾತೀತರಾಗಿರಬೇಕು: ಅರುಣ್ ಜೇಟ್ಲಿ
ನವದೆಹಲಿ, ಅಕ್ಟೋಬರ್ 26: 'ಸಿಬಿಐನ ಎಲ್ಲ ಅಧಿಕಾರಿಗಳು, ಅದರಲ್ಲಿಯೂ ಮುಖ್ಯವಾಗಿ ಅತ್ಯುನ್ನತ ಸ್ಥಾನದ ಇಬ್ಬರು ಅಧಿಕಾರಿಗಳು ಸೀಜರ್ನ ಹೆಂಡತಿಯಂತೆ. ಅವರು ಎಲ್ಲ ಸಂಶಯಗಳಿಂದಲೂ ಹೊರತಾಗಿರಬೇಕು' ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ವಿರುದ್ಧ ಸೀಮಿತ ಅವಧಿಯಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸುಪ್ರೀಂಕೋರ್ಟ್ನ ಆದೇಶವನ್ನು ಸ್ವಾಗತಿಸಿದ ಅವರು, ಇದು ಸಕಾರಾತ್ಮಕ ಬೆಳವಣಿಗೆ. ದೇಶದ ಹಿತಾಸಕ್ತಿಗಾಗಿ ಸತ್ಯ ಹೊರಬರಲು ಇದು ಸಹಕಾರಿಯಾಗಲಿದೆ ಎಂದು ಹೇಳಿದರು.
ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನಾ ಅವರನ್ನು ಭ್ರಷ್ಟಾಚಾರದ ಆರೋಪದಡಿ ಕಡ್ಡಾಯ ರಜೆಯ ಮೇಲೆ ತೆರಳುವಂತೆ ಸೂಚಿಸಿದ ಸರ್ಕಾರದ ನಡೆಯನ್ನು ಸಮರ್ಥಿಸಿದರು.

ಇತ್ತೀಚಿನ ಬೆಳವಣಿಗೆಗಳು ಸಿಬಿಐನ ಪ್ರತಿಷ್ಠೆಗೆ ಹಾನಿ ಮಾಡಿವೆ. ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ ಎಂದರು.
The country couldn't afford to have two top officials of CBI that investigates corruption, being under inquiry or investigations themselves. The govt & CVC had firm intention to bring out the truth in an impartial & independent manner. The SC verdict has upheld that. @arunjaitley pic.twitter.com/CPhgdukKml
— BJP (@BJP4India) 26 October 2018
ಎರಡು ವಾರದಲ್ಲಿ ತನಿಖೆಗೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿರುವ ಸೂಚನೆ ತನಿಖೆಯನ್ನು ಬಲಗೊಳಿಸಲಿದೆ. ನಿವೃತ್ತ ನ್ಯಾಯಾಧೀಶರ ನೇಮಕ ನ್ಯಾಯಸಮ್ಮತ ತನಿಖೆಯ ಭರವಸೆ ಮೂಡಿಸಿದೆ ಎಂದು ಪ್ರತಿಕ್ರಿಯೆ ನೀಡಿದರು.
16ನೇ ಶತಮಾನದಲ್ಲಿ ಶೇಕ್ಸ್ಪಿಯರ್ ರಚಿಸಿದ ಜೂಲಿಯಸ್ ಸೀಜರ್ ನಾಟಕದಲ್ಲಿ ಬರುವ 'ಸೀಜರ್ನ ಪತ್ನಿ ಸಂಶಯಾತೀತಳಾಗಿರಬೇಕು' ವಾಕ್ಯವನ್ನು ಜೇಟ್ಲಿ ಇಲ್ಲಿ ಪ್ರಸ್ತಾಪಿಸಿದ್ದಾರೆ. ಉನ್ನತ ಸ್ಥಾನದಲ್ಲಿರುವ ವ್ಯಕ್ತಿಗಳು ಶುದ್ಧಹಸ್ತರಾಗಿರಬೇಕು ಮತ್ತು ಆರೋಪಗಳಿಂದ ಮುಕ್ತರಾಗಿರಬೇಕು ಎಂಬ ಅರ್ಥವನ್ನು ನೀಡುತ್ತದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications