ಅರುಣ್ ಜೇಟ್ಲಿ ಕೂಡಲೇ ರಾಜೀನಾಮೆ ನೀಡಲಿ: ರಾಹುಲ್ ಗಾಂಧಿ
ನವದೆಹಲಿ, ಸೆಪ್ಟೆಂಬರ್ 13: ಉದ್ದೇಶಪೂರ್ವಕ ಸುಸ್ತೀದಾರ ವಿಜಯ್ ಮಲ್ಯ ದೇಶಬಿಟ್ಟು ಹೋಗುವುದು ವಿತ್ತ ಸಚಿವ ಅರುಣ್ ಜೇಟ್ಲಿಗೆ ಗೊತ್ತಿದ್ದರೂ ಸಹಿತ ಯಾವುದೇ ಕ್ರಮಕೈಗೊಂಡಿರಲಿಲ್ಲ ಹಾಗಾಗಿ ಅರುಣ್ ಜೇಟ್ಲಿ ಕೂಡಲೇ ರಾಜಿನಾಮೆ ಕೊಡಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ದೇಶಬಿಟ್ಟು ಹೊರಡುವ ಮುನ್ನಾ ನಾನು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಆಗುವ ಯತ್ನ ಮಾಡಿದ್ದೆ. ನಾನು ಲಂಡನ್ಗೆ ತೆರಳುತ್ತಿರುವ ಬಗ್ಗೆಯೂ ಅವರಿಗೆ ತಿಳಿಸಿದ್ದೆ ಎಂದು ಮಲ್ಯ ನಿನ್ನೆ ಹೇಳಿದ್ದರು ಇದು ರಾಷ್ಟ್ರ ರಾಜಕಾರಣದಲ್ಲಿ ಕೋಲಾಹಲ ಸೃಷ್ಠಿಸಿತ್ತು.
2014ರ ನಂತರ ಮಲ್ಯ ಜತೆ ಮೀಟಿಂಗ್ ಮಾಡಿಲ್ಲ : ಜೇಟ್ಲಿ
ವಿಜಯ್ ಮಲ್ಯ ಪ್ರಕಣದ ಬಗ್ಗೆ ತನಿಖೆ ನಡೆಸಲು ಮೋದಿ ಅವರು ಕೂಡಲೇ ವಿಶೇಷ ತಂಡ ರಚಿಸಬೇಕು ಎಂದು ಒತ್ತಾಯಿಸಿರುವ ರಾಹುಲ್ ಗಾಂಧಿ, ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಕೂಡಲೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
Given Vijay Mallya’s extremely serious allegations in London today, the PM should immediately order an independent probe into the matter. Arun Jaitley should step down as FInance Minister while this probe is underway.
— Rahul Gandhi (@RahulGandhi) September 12, 2018
ಅರುಣ್ ಜೇಟ್ಲಿ ಭೇಟಿ ಹೇಳಿಕೆ: ವರಸೆ ಬದಲಿಸಿದ ವಿಜಯ್ ಮಲ್ಯ
ನಿನ್ನೆ ರಾತ್ರಿ ಟ್ವೀಟ್ ಮಾಡಿರುವ ಎಐಸಿಸಿ ಅಧ್ಯಕ್ಷ ತನಿಖೆ ಮುಗಿಯುವವರೆಗೆ ಜೇಟ್ಲಿ ತಮ್ಮ ಸ್ಥಾನದಿಂದ ಕೆಳಗಿಳಿಯಬೇಕು ಎಂದಿದ್ದಾರೆ.