ಇನ್ಫಿ ಮೂರ್ತಿ ಸೆಳೆಯಲು ಅರವಿಂದ ಕೇಜ್ರಿವಾಲ್ ಯತ್ನ?
ಬೆಂಗಳೂರು, ಏ.4: ಇನ್ಫೋಸಿಸ್ ಸಂಸ್ಥೆ ಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿ ಅವರನ್ನು ಆಮ್ ಆದ್ಮಿ ಪಕ್ಷಕ್ಕೆ ಸೇರಿಸಿಕೊಳ್ಳಲು ದೆಹಲಿ ಮುಖ್ಯಮಂತ್ರಿ ಉತ್ಸುಕರಾಗಿದ್ದಾರೆ ಎಂಬ ಸುದ್ದಿ ಬಂದಿದೆ. ಅದರೆ, ರಾಜಕೀಯಕ್ಕೆ ಎಂಟ್ರಿ ಕೊಡಲು ನಾರಾಯಣ ಮೂರ್ತಿ ಅವರು ಇನ್ನೂ ಒಪ್ಪಿಗೆ ಕೊಟ್ಟಿಲ್ಲ.
ಆಮ್ ಆದ್ಮಿ ಪಕ್ಷದಲ್ಲಿರುವ ಐಟಿ ಗುರು ಆದರ್ಶ್ ಶಾಸ್ತ್ರಿ ಅವರ ಸಲಹೆ ಮೇರೆಗೆ ಅರವಿಂದ್ ಕೇಜ್ರಿವಾಲ್ ಅವರು ಇನ್ಫಿ ಮೂರ್ತಿ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದಾರೆ. ಕಳೆದ ಮಂಗಳವಾರ ಅರವಿಂದ್ ಕೇಜ್ರಿವಾಲ್ ಹಾಗೂ ಮನೀಶ್ ಸಿಸೋಡಿಯಾ ಜೊತೆ ಮಾತುಕತೆ ನಡೆಸಿಕೊಂಡು ಬಂದಿದ್ದಾರೆ ಎಂದು ಎಕಾನಾಮಿಕ್ಸ್ ಟೈಮ್ಸ್ ವರದಿ ಮಾಡಿದೆ.
ಅದರೆ, ಈ ಬಗ್ಗೆ ಹೆಚ್ಚಿಗೆ ಪ್ರತಿಕ್ರಿಯೆ ನೀಡದ ನಾರಾಯಣ ಮೂರ್ತಿ ಅವರು, ಅಕ್ಷಯ ಪಾತ್ರ ಎನ್ ಜಿಒ ಕಾರ್ಯಕ್ರಮಗಳ ಬಗ್ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ವಿವರಿಸಿದ್ದೇನೆ. ಸಾಮಾಜಿಕ ಕಾರ್ಯಕ್ರಮಗಳ ಸಾಕಷ್ಟು ಚರ್ಚೆ ನಡೆಸಿದ್ದೇವೆ. ರಾಜಕೀಯ ವಿಷಯದ ಬಗ್ಗೆ ಹೆಚ್ಚಿನ ಮಾತುಕತೆ ಏನೂ ನಡೆದಿಲ್ಲ ಎಂದಿದ್ದಾರೆ.

ಎಎಪಿ ಯೋಜನೆ ಏನು?: ದೆಹಲಿಯಲ್ಲಿರುವ ಸರ್ಕಾರಿ ಶಾಲೆಗಳ ನವೀಕರಣಕ್ಕೆ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಮುಂದಾಗಿದ್ದಾರೆ. ಇದಕ್ಕಾಗಿ ಎನ್.ಆರ್ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ನೆರವು ಕೋರಿದ್ದಾರೆ ಎಂದು ತಿಳಿದು ಬಂದಿದೆ. ಇದರಲ್ಲಿ ಅಕ್ಷಯ ಪಾತ್ರ ಮಧ್ಯಾಹ್ನದ ಬಿಸಿಯೂಟ ಯೋಜನೆಯೂ ಸೇರಿದೆ.
ಕಳೆದ ತಿಂಗಳು ಅರವಿಂದ್ ಕೇಜ್ರಿವಾಲ್ ಅವರು ಅಕ್ಷಯ ಪಾತ್ರ ಯೋಜನೆ ಬಗ್ಗೆ ತಿಳಿಯಲು ಬೆಂಗಳೂರಿಗೆ ಭೇಟಿ ನೀಡಿದ್ದರು ಎಂಬ ವಿಷಯವನ್ನು ಸಂಸ್ಥೆಯ ವಕ್ತಾರರು ಹೇಳಿದ್ದಾರೆ.2020ರ ವೇಳೆಗೆ ಸುಮಾರು 50 ಲಕ್ಷ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡುವ ಗುರಿ ಹೊಂದಿದೆ.
ದೆಹಲಿ ಸರ್ಕಾರದ ಶೈಕ್ಷಣಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ಇನ್ಫೋಸಿಸ್ ಫೌಂಡೇಷನ್ ಮೂಲಕ ನೆರವು ನೀಡಲು ಇನ್ಫಿ ಮೂರ್ತಿ ಮುಂದಾಗುವ ಸಾಧ್ಯತೆ ಹೆಚ್ಚಿದೆ. ಅದರೆ, ಆಮ್ ಆದ್ಮಿ ಪಕ್ಷದ ತಾಂತ್ರಿಕ ಮಂಡಳಿಗೆ ಸೇರ್ಪಡೆಯಾಗುವುದರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ರಾಜಕೀಯದಿಂದ ಸದಾ ಕಾಲ ದೂರು ಉಳಿಯಲು ಬಯಸುವ ನಾರಾಯಣ ಮೂರ್ತಿ ಅವರೇ ಈ ಬಗ್ಗೆ ಕೊನೆ ನಿರ್ಣಯ ಕೈಗೊಳ್ಳಬೇಕಿದೆ.
ಇನ್ಫೋಸಿಸ್ ನ ಮಾಜಿ ನಿರ್ದೇಶಕ ವಿ ಬಾಲಕೃಷ್ಣನ್ ಅವರು ಎಎಪಿ ಟಿಕೆಟ್ ಪಡೆದು ಬೆಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications