ಮತದಾನ: ಕಾಶ್ಮೀರ - ಶೇ. 72.3, ಜಾರ್ಖಂಡ್ - ಶೇ. 61.92
ನವದೆಹಲಿ, ನ. 25: ನಕ್ಸಲೀಯರ ದಾಳಿಯಿಂದ ನಲುಗಿರುವ ಜಾರ್ಖಂಡ್ ಹಾಗೂ ಭಯೋತ್ಪಾದಕರ ಕೆಂಗಣ್ಣಿಗೆ ಗುರಿಯಾಗಿರುವ ಕಾಶ್ಮೀರದಲ್ಲಿ ವಿಧಾನಸಭೆಗೆ ಮಂಗಳವಾರ ನಡೆದ ಪ್ರಥಮ ಹಂತದ ಚುನಾವಣೆಯಲ್ಲಿ ಶೇಕಡಾವಾರು ಮತದಾನ ಅತ್ಯುತ್ತಮವಾಗಿದೆ.
ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರದ 15 ಕ್ಷೇತ್ರಗಳಲ್ಲಿ ಶೇ. 72.3ರಷ್ಟು ಮತದಾನವಾಗಿದೆ. ಪ್ರತ್ಯೇಕವಾದಿಗಳು ಚುನಾವಣೆ ಬಹಿಷ್ಕರಿಸಿದ್ದರೂ ಇದು ಹಿಂದಿನ ಚುನಾವಣೆಗಿಂತ ಶೇ. 9ರಷ್ಟು ಹೆಚ್ಚು ಎಂಬುದು ಗಮನಾರ್ಹ. ಇಲ್ಲಿ 7 ಸಚಿವರು ಸೇರಿದಂತೆ 12 ಹಾಲಿ ಶಾಸಕರ ಸಹಿತ 123 ಅಭ್ಯರ್ಥಿಗಳು ಕಣದಲ್ಲಿದ್ದಾರೆ. [ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್ ಚುನಾವಣೆ ವೇಳಾಪಟ್ಟಿ]

ಸಂಜೆ 4 ಗಂಟೆಗೇ ಚುನಾವಣೆ ಮುಕ್ತಾಯಗೊಳ್ಳಬೇಕೆಂದು ಸೂಚಿಸಿದ್ದರೂ ಕೆಲವೆಡೆ ಮುಂದುವರಿಯುತ್ತಿದ್ದುದು ಕಂಡುಬಂತು. ಈ ಹಿನ್ನೆಲೆಯಲ್ಲಿ ಶೇಕಡಾವಾರು ಮತದಾನ ಇನ್ನೂ 2-3ರಷ್ಟು ಹೆಚ್ಚುವ ನಿರೀಕ್ಷೆ ಇದೆ ಎಂದು ಚುನಾವಣೆ ಆಯೋಗದ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಉಪ ಚುನಾವಣಾ ಆಯುಕ್ತ ವಿನೋದ ಜುಟ್ಶಿ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. "ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಮೊದಲ ಹಂತವು ಶಾಂತಿಯುತವಾಗಿ ಮುಗಿದಿದೆ. ಇದು ಶೇ. 100ರಷ್ಟು ದೋಷರಹಿತ ಚುನಾವಣೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. [ಚಿತ್ರಗಳಲ್ಲಿ ಜಮ್ಮು ಕಾಶ್ಮೀರ ಚುನಾವಣೆ]
ಪ್ರತ್ಯೇಕತಾವಾದಿಗಳಾದ ಹುರಿಯತ್ ಕಾನ್ಫರೆನ್ಸ್ ಹಾಗೂ ಜೆಕೆಎಲ್ಎಫ್ ಸಂಘಟನೆಗಳು ಚುನಾವಣೆ ಬಹಿಷ್ಕರಿಸುವಂತೆ ಕರೆ ನೀಡಿದ್ದವು. ಆದರೂ ಮತದಾನದ ಪ್ರಮಾಣದಲ್ಲಿ ಗಣನೀಯ ಹೆಚ್ಚಳ ಕಂಡುಬಂದಿರುವುದರಿಂದ ಪ್ರತ್ಯೇಕತಾವಾದಿಗಳಿಗೆ ಮುಖಭಂಗವಾದಂತಾಗಿದೆ.
ಜಾರ್ಖಂಡ್: ಈ ರಾಜ್ಯದ 13 ಕ್ಷೇತ್ರಗಳಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ಶೇ. 61.92 ರಷ್ಟು ಮತದಾನವಾಗಿದೆ. ಕೆಲವೆಡೆ ಮತಯಂತ್ರ ಹಾನಿ ಸಂಭವಿಸಿದ್ದು ಬಿಟ್ಟರೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಮತದಾನದ ಪ್ರಮಾಣ ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಚುನಾವಣೆ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. [ಕಾಶ್ಮೀರಿ ನಿರಾಶ್ರಿತರ ಸಮಸ್ಯೆ ಬಗೆಹರಿಸ್ತೇವೆ]

ಚುನಾವಣೆ ನಡೆದ ಹೆಚ್ಚಿನವು ದಲಿತ ಮೀಸಲು ಕ್ಷೇತ್ರಗಳಾಗಿದ್ದವು. 191 ಹಾಗೂ 192ನೇ ಸಂಖ್ಯೆಯ ಚುನಾವಣೆ ಬೂತ್ನಲ್ಲಿ ಮತಯಂತ್ರ ಹಾನಿಗೊಳಗಾಗಿದ್ದವು. ಈ ಹಿನ್ನೆಲೆಯಲ್ಲಿ ಇಲ್ಲಿ ಚುನಾವಣೆಯನ್ನು ರದ್ದುಪಡಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications