ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಯೋಧ್ಯೆ ಪ್ರಕರಣ: ಆ 6 ರಿಂದ ಸುಪ್ರೀಂ ಕೋರ್ಟ್ ನಲ್ಲಿ ಪ್ರತಿದಿನ ವಿಚಾರಣೆ

|
Google Oneindia Kannada News

ನವದೆಹಲಿ, ಆಗಸ್ಟ್ 02: ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸಂಧಾನ ವಿಫಲವಾದ ಹಿನ್ನೆಲೆಯಲ್ಲಿ ಆಗಸ್ಟ್ 6 ರಿಂದ ಪ್ರತಿದಿನ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ವಿವಾದಿತ ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನದ ಮೂಲಕ ಸಮಸ್ಯೆ ಬಗೆ ಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಈ ಮೊದಲು ತಿಳಿಸಿತ್ತು.

ಆ ಹಿನ್ನೆಲೆಯಲ್ಲಿ ಮೂವರು ಸಂಧಾನಕಾರರನ್ನು ಸುಪ್ರೀಂ ಕೋರ್ಟ್ ನೇಮಿಸಿತ್ತು. ಈ ತ್ರಿಸದಸ್ಯ ಸಮಿತಿಯಲ್ಲಿ ನ್ಯಾ.ಇಬ್ರಾಹಿಂ ಖಾಲಿಫುಲ್ಲಾ, ಶ್ರೀ ರವಿಶಂಕರ್ ಗುರೂಜಿ ಮತ್ತು ಶ್ರೀರಾಮ್ ಕಂಚು ಇದ್ದರು.

Ayodhya Case: Supreme Court Says Daily Hearing From August 6

ಈ ಮೂವರ ಸಮಿತಿ ಜುಲೈ 18 ರಂದೇ ಮೊದಲ ಹಂತದ ವರದಿಯನ್ನು ನೀಡಿತ್ತು. ಆದರೆ ಸಂಧಾನ ನಿರೀಕ್ಷಿಸಿದ ಮಟ್ಟಿಗೆ ನಡದೆದಿಲ್ಲ ಎಂದು ಆಗಲೇ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ನಂತರ ಆಸಗ್ಟ್ 1 ರಂದು ತನ್ನ ಅಂತಿಮ ವರದಿಯನ್ನು ಈ ಸಮಿತಿ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್ ಮುಂದಿರಿಸಿತ್ತು. ಆದರೆ ಸಂಧಾನ ವೈಫಲ್ಯವಾದ ಹಿನ್ನೆಲೆಯಲ್ಲಿ ಇದೀಗ ಕಾಣೂನುನ ಮೂಲಕವೇ ಈ ವಿವಾದವನ್ನು ಬಗೆಹರಿಸುವುದು ಅನಿವಾರ್ಯವಾಗಿದೆ.

English summary
Ayodhya case: Supreme Court says daily hearing from August 6 after mediation fails
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X