ಅಯೋಧ್ಯೆ ವಿವಾದ: ಸಂಧಾನದ ಕುರಿತು ಸುಪ್ರೀಂ ತೀರ್ಪು ಪ್ರಕಟ
ನವದೆಹಲಿ, ಮಾರ್ಚ್ 08: ಅಯೋಧ್ಯೆಯಲ್ಲಿ ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಂಧಾನದ ಮೂಲಕ ಪರಿಹಾರ ಕಂಡುಕೊಳ್ಳುವ ಕುರಿತಂತೆ ತನ್ನ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು(ಮಾ.08) ಪ್ರಕಟಿಸಿದೆ
ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಈ ಕುರಿತು ಮಾ.6 ರಂದು ವಿಚಾರಣೆ ನಡೆಸಿ, ತೀರ್ಪನ್ನು ಕಾಯ್ದಿರಿಸಿತ್ತು. ಪೀಠದಲ್ಲಿ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾ ಎಸ್ ಎ ಬೊಬ್ದೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್, ಎಸ್ ಅಬ್ದುಲ್ ನಾಜೀರ್ ಇದ್ದಾರೆ.
'ಮಂದಿರ, ಮಸೀದಿ ಇತಿಹಾಸ ಬದಲಾಯಿಸಲು ಆಗಲ್ಲ, ಈಗಿನ ವಿವಾದ ಮುಖ್ಯ'
ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಂಧಾನದ ಮೂಲಕ ವಿವಾದ ಬಗೆಹರಿಸಿಕೊಳ್ಳುವ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್, ತನ್ನ ತೀರ್ಪಿನಲ್ಲಿ ಸಂಧಾನಕ್ಕೆ ಒಪ್ಪಿಗೆ ಸೂಚಿಸಿದೆ.
ಸಂಧಾನ ಪ್ರಕ್ರಿಯೆ, ತೀರ್ಪು ಬಂದ ನಾಲ್ಕು ವಾರದೊಳಗೆ ಆರಂಭವಾಗಿ, ಎಂಟು ವಾರದೊಳಗೆ ಮುಕ್ತಾಯವಾಗಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮುಸ್ಲಿಂ ಅರ್ಜಿದಾರರು ಸಂಧಾನಕ್ಕೆ ಒಪ್ಪಿದ್ದಾರೆ ಎಂದು ಮುಸ್ಲಿಂ ಪರ ವಕೀಲ ನ್ಯಾ. ರಾಜೀವ್ ಧವನ್ ಹೇಳಿದ್ದರು.. ಮಧ್ಯಸ್ಥಿಕೆ ವಹಿಸಲು ಯಾರಿಗೆ ಹೇಳಬೇಕು ಅಥವಾ ಯಾವ ಸಮಿತಿಗೆ ಹೇಳಬೇಕು ಎಂಬ ಬಗ್ಗೆ ಅರ್ಜಿದಾರರೇ ಒಮ್ಮತದ ನಿರ್ಧಾರಕ್ಕೆ ಬರಬೇಕು ಎಂದು ಮುಖ್ಯನ್ಯಾಯ ಮೂರ್ತಿ ರಂಜನ್ ಗೊಗೊಯ್ ಹೇಳಿದ್ದರು.
25 ವರ್ಷಗಳ ಬಾಬ್ರಿ ಮಸೀದಿ ವಿವಾದ, ಟೈಮ್ ಲೈನ್