ತೀರ್ಥಯಾತ್ರೆ ಯೋಜನೆಯಲ್ಲಿ ಅಯೋಧ್ಯೆ ಸೇರ್ಪಡೆ ಮಾಡಿದ ದೆಹಲಿ ಸರ್ಕಾರ
ಈ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ.
ಇದೀಗ ಅಯೋಧ್ಯೆಯ ರಾಮಲಲ್ಲಾ ದರ್ಶನವನ್ನೂ ತೀರ್ಥಯಾತ್ರೆಗೆ ಸೇರಿಸಲಾಗಿದೆ. ಹಿರಿಯ ನಾಗರಿಕರಿಗೆ ಉಚಿತ ದರ್ಶನ ಭಾಗ್ಯವನ್ನು ಕಲ್ಪಿಸಲಾಗಿದೆ. ಯಾತ್ರೆ ಕೈಗೊಳ್ಳುವ ಹಿರಿಯರ ನಾಗರಿಕರು ಸಹಾಯಕ್ಕೆ ತಮ್ಮ ಜೊತೆಯಲ್ಲಿ ಒಬ್ಬರನ್ನು ಕರೆದುಕೊಂಡು ಹೋಗಬಹುದು ಎಂದು ಹೇಳಿದರು.
ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಿ ವಾಪಸ್ ಆದ ಮರುದಿನವೇ ಸಿಎಂ ಈ ನಿರ್ಧಾರ ಪ್ರಕಟಿಸಿದರು. ದೆಹಲಿಯ ಜನರು ಕೂಡ ಅಯೋಧ್ಯೆ ನೋಡಬೇಕೆಂದು ಬಯಸುತ್ತಿರುವುದಾಗಿ ಹೇಳುತ್ತಾರೆ. ಹೀಗಾಗಿ ತೀರ್ಥಯಾತ್ರೆ ಯೋಜನೆಯನ್ನು 1 ತಿಂಗಳೊಳಗೆ ಪುನರಾರಂಭಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.

ದೆಹಲಿ ಸರ್ಕಾರವು 2018ರಲ್ಲಿ ಮುಖ್ಯಮಂತ್ರಿ ತೀರ್ಥಯಾತ್ರೆ ಯೋಜನೆಯನ್ನು ಪ್ರಾರಂಭಿಸಿತು. ಇದರಲ್ಲಿ ದೆಹಲಿಯ ಹಿರಿಯ ನಾಗರಿಕರಿಗೆ ಉಚಿತ ಪ್ರಯಾಣ ಪ್ಯಾಕೇಜ್ಗಳನ್ನು ನೀಡುತ್ತದೆ.
ಜಗನ್ನಾಥ ಪುರಿ, ರಾಮೇಶ್ವರಂ, ಶಿರಡಿ, ಮಥುರಾ, ಹರಿದ್ವಾರ, ತಿರುಪತಿ ಮುಂತಾದ ಸ್ಥಳಗಳಿಗೆ ಹಿರಿಯ ನಾಗರಿಕರ ಉಚಿತ ತೀರ್ಥಯಾತ್ರೆಗೆ ಸರ್ಕಾರವು ಸಂಪೂರ್ಣ ವೆಚ್ಚವನ್ನು ಭರಿಸುತ್ತದೆ.
ಭಾಗವಹಿಸುವ ಎಲ್ಲಾ ನಾಗರಿಕರಿಗೆ ವಸತಿ, ಊಟ ಹಾಗೂ ವಿಮೆಯನ್ನು ನೀಡುತ್ತದೆ. ಈ ಯೋಜನೆಯಲ್ಲಿ 35 ಸಾವಿರಕ್ಕೂ ಹೆಚ್ಚು ಹಿರಿಯ ನಾಗರಿಕರು ತೀರ್ಥಯಾತ್ರೆ ಕೈಗೊಂಡಿದ್ದಾರೆ.
ಯೋಜನೆ ಪ್ರಕಾರ ಅರ್ಜಿದಾರರು 60 ವರ್ಷಗಳನ್ನು ಪೂರ್ಣಗೊಳಿಸಿರಬೇಕು, ಈ ಹಿಂದೆ ಯೋಜನೆಯ ಲಾಭವನ್ನು ಪಡೆದಿರಬಾರದು, ಈ ಯೋಜನೆಯು ಕೇಂದ್ರ/ರಾಜ್ಯ ಸರ್ಕಾರಗಳು ಅಥವಾ ಸ್ಥಳೀಯ/ಸ್ವಾಯತ್ತ ಸಂಸ್ಥೆಗಳಲ್ಲಿ ಉದ್ಯೋಗದಲ್ಲಿರುವ ಹಿರಿಯ ನಾಗರಿಕರಿಗೆ ಅನ್ವಯವಾಗುವುದಿಲ್ಲ.
2019ರಲ್ಲಿ ಹಿರಿಯ ನಾಗರಿಕರಿಗಾಗಿ ಉಚಿತ ಯಾತ್ರಾ ಯೋಜನೆಯಲ್ಲಿ ಕರ್ತಾರ್ಪುರ್ ಸಾಹಿಬ್ ಗುರುದ್ವಾರವನ್ನು ಸೇರಿಸಲು ದೆಹಲಿ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ದೆಹಲಿ ಕ್ಯಾಬಿನೆಟ್ ಸಭೆಯಲ್ಲಿ ಇದಕ್ಕೆ ತಾತ್ವಿಕವಾಗಿ ಅನುಮೋದನೆ ನೀಡಿತ್ತು.
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರೋವಾಲ್ ಜಿಲ್ಲೆಯ ಕರ್ತಾರ್ಪುರ್ ಸಾಹಿಬ್ ಗುರುದ್ವಾರ ಭಾರತದ ಗಡಿಯಿಂದ 4.5 ಕಿ.ಮೀ ದೂರದಲ್ಲಿದೆ. ಈ ದೇವಾಲಯಕ್ಕೆ ವರ್ಷಪೂರ್ತಿ ಭಾರತೀಯ ಯಾತ್ರಾರ್ಥಿಗಳಿಗೆ ಕಾರಿಡಾರ್ ಮೂಲಕ ಪ್ರವೇಶಿಸಲು ಅವಕಾಶ ಸಿಗಲಿದೆ.
ವಿಶೇಷವೆಂದರೆ, ದೆಹಲಿ ಮುಖ್ಯಮಂತ್ರಿ ತೀರ್ಥ ಯಾತ್ರೆ ಯೋಜನೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಿಂದ ವರ್ಷಕ್ಕೆ 1,100 ಹಿರಿಯ ನಾಗರಿಕರಿಗೆ ಉಚಿತ ತೀರ್ಥಯಾತ್ರೆ ಕೈಗೊಳ್ಳಲು ಅನುವು ಮಾಡಿಕೊಡುತ್ತದೆ. ಇದರ ವೆಚ್ಚವನ್ನು ದೆಹಲಿ ಸರ್ಕಾರವೇ ಭರಿಸಲಿದೆ.
'ಮುಖಮಂತ್ರಿ ತೀರ್ಥ ಯಾತ್ರೆ ಯೋಜನೆ' ಎಂಬ ಹೆಸರಿನ ಯೋಜನೆ ದೆಹಲಿಯ 60 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಮಾತ್ರ ಲಭ್ಯವಿರುತ್ತದೆ. ಹಿರಿಯ ನಾಗರಿಕರು ಈ ಯೋಜನೆಯ ಲಾಭವನ್ನು ಪಡೆಯಬಹುದು. 70 ವರ್ಷಕ್ಕಿಂತ ಮೇಲ್ಪಟ್ಟ ಜನರು ಸಹ ಅವರೊಂದಿಗೆ ಅಟೆಂಡೆಂಟ್ ಜೊತೆಗೆ ಹೋಗಬಹುದು.
ದೆಹಲಿ-ಮಥುರಾ-ವೃಂದಾವನ್-ಆಗ್ರಾ-ಫತೇಪುರ್ ಸಿಕ್ರಿ-ದೆಹಲಿ, ದೆಹಲಿ-ವೈಷ್ಣೋ ದೇವಿ-ಜಮ್ಮು-ದೆಹಲಿ, ದೆಹಲಿ-ಹರಿದ್ವಾರ-ರಿಷಿಕೇಶ-ನೀಲಕಂಠ-ದೆಹಲಿ, ಮತ್ತು ದೆಹಲಿ-ಅಜ್ಮೀರ್-ಪುಷ್ಕರ್-ದೆಹಲಿ ಈ ಯೋಜನೆಯ ವ್ಯಾಪ್ತಿಗೆ ಬರುವ ಇತರ ಮಾರ್ಗಗಳು
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications