ಪತಂಜಲಿಯ ಕೊರೊನಿಲ್ಗೆ ಅನುಮತಿ ನೀಡಿದ ಆಯುಷ್ ಸಚಿವಾಲಯ
ದೆಹಲಿ, ಜುಲೈ 1: ಕೊರೊನಾ ವೈರಸ್ಗೆ ಔಷಧ ಎಂದು ಪ್ರಚಾರ ಪಡೆದುಕೊಂಡಿದ್ದ ಪತಂಜಲಿಯ ಕೊರೊನಿಲ್ ಔಷಧ ಮಾರಾಟಕ್ಕೆ ಕೇಂದ್ರ ಆಯುಷ್ ಸಚಿವಾಲಯ ಅಂತಿಮವಾಗಿ ಅನುಮತಿ ನೀಡಿದೆ. ಆದರೆ, ಕೊರೊನಾ ಔಷಧಿ ಎಂದಲ್ಲ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧ ಎಂದು ಗುರುತಿಸಿದೆ.
Recommended Video
ಈ ಕುರಿತು ಬುಧವಾರ ಒಪ್ಪಿಗೆ ಸೂಚಿಸಿದ್ದು, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧ ಎಂದು ಪ್ರಚಾರ ಮಾಡಿ ಮಾರಾಟ ಮಾಡಬಹುದು ಎಂದಿದೆ. ಯಾವುದೇ ಕಾರಣಕ್ಕೂ ಕೊವಿಡ್ಗೆ ಔಷಧಿ ಎನ್ನುಂವತಿಲ್ಲ ಎಂದು ಹೇಳಿದೆ.
ಯೋಗಗುರು ಬಾಬಾ ರಾಮದೇವ್ ಸಹ ಬುಧವಾರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಕೊರೊನಿಲ್ ಬಗ್ಗೆ ಈಗ ಯಾವುದೇ ವಿವಾದ ಇಲ್ಲ, ಆಯುಷ್ ಸಚಿವಾಲಯ ಅನುಮತಿ ನೀಡಿದೆ. ಕೊರೊನಿಲ್ ವಿಚಾರವಾಗಿ ಪತಂಜಲಿ ಕಾರ್ಯವನ್ನು ಶ್ಲಾಘಿಸಿದೆ ಎಂದು ಹೇಳಿದ್ದಾರೆ.

ಈ ಮೂಲಕ ದೇಶಾದ್ಯಂತ ಪತಂಜಲಿ ಕೊರೊನಿಲ್ ಔಷಧ ಲಭ್ಯವಾಗಲಿದೆ. ಇದಕ್ಕೆ ಯಾವುದೇ ಮಿತಿಯಿಲ್ಲ ಎಂದು ಬಾಬಾ ರಾಮದೇವ್ ಸ್ಪಷ್ಟಪಡಿಸಿದ್ದಾರೆ. ಇದಕ್ಕೂ ಮುಂಚೆ ಕೊರೊನಿಲ್ ಬಿಡುಗಡೆ ಮಾಡಿದಾಗ ಕೊರೊನಾ ವೈರಸ್ ರೋಗವನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿದೆ ಎಂದು ಬಾಬಾ ರಾಮದೇವ್ ಹೇಳಿಕೊಂಡಿದ್ದರು.
ಮತ್ತೊಂದೆಡೆ ಉತ್ತರಾಖಂಡ್ ಹೈ ಕೋರ್ಟ್ನಲ್ಲಿ ಪತಂಜಲಿ ಕೊರೊನಿಲ್ ಔಷಧಿಯನ್ನು ನಿಷೇಧಿಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ಸ್ವೀಕರಿಸಿರುವ ಉತ್ತರಾಖಂಡ್ ನ್ಯಾಯಾಲಯ ಪತಂಜಲಿ ಸಂಸ್ಥೆ ಮಾಲೀಕ ಯೋಗಗುರು ಬಾಬಾ ರಾಮದೇವ್, ದಿವ್ಯ ಫಾರ್ಮಸಿ, ನಿಮ್ಸ್ ವಿಶ್ವವಿದ್ಯಾಲಯ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ವಿವರಣೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications