ಆತ್ಮಹತ್ಯೆಗೆ ಯತ್ನಿಸಿದ "ಬಾಬಾ ಕಾ ಡಾಬಾ" ಖ್ಯಾತಿಯ ಕಾಂತಪ್ರಸಾದ್
ನವದೆಹಲಿ, ಜೂನ್ 18: ಯೂಟ್ಯೂಬ್ ವಿಡಿಯೋದಿಂದಾಗಿ ದೇಶಾದ್ಯಂತ ಏಕಾಏಕಿ ಖ್ಯಾತಿಯಾಗಿದ್ದ, "ಬಾಬಾ ಕಾ ಡಾಬಾ"ದ ಕಾಂತ ಪ್ರಸಾದ್ (80) ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಸಣ್ಣ ಪೆಟ್ಟಿಗೆ ಹೋಟೆಲ್ ಇಟ್ಟುಕೊಂಡಿದ್ದ ಕಾಂತ ಪ್ರಸಾದ್ ಯೂಟೂಬ್ನಿಂದಾಗಿ ಪ್ರಸಿದ್ಧಿ ಪಡೆದು, ನಂತರ ಹಣಕಾಸಿನ ಸಹಾಯ ದೊರೆತು ದೊಡ್ಡ ರೆಸ್ಟೋರೆಂಟ್ ತೆರೆದಿದ್ದರು. ಆದರೆ ಈಚೆಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಹೋಟೆಲ್ ಮುಚ್ಚಿದ್ದರು.
ಸದ್ಯ ಸಫ್ಸರ್ ಜಂಗ್ ಆಸ್ಪತ್ರೆಯಲ್ಲಿ ಕಾಂತ ಪ್ರಸಾದ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ಆಸ್ಪತ್ರೆಯಿಂದ ಕರೆ ಬಂದಿದ್ದು, ಓರ್ವ ವ್ಯಕ್ತಿ ಆತ್ಮಹತ್ಯೆಗೆ ಪ್ರಯತ್ನಿಸಿರುವ ವಿಷಯ ತಿಳಿಯಿತು. ಆಸ್ಪತ್ರೆಗೆ ಹೋದ ಮೇಲೆ ಅದು ಕಾಂತ ಪ್ರಸಾದ್ ಎಂದು ತಿಳಿಯಿತು. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೆಟ್ಟಿ ಹೋಟೆಲ್ನ ಕಾಂತ ಪ್ರಸಾದ್ ಯೂಟೂಬ್ನಿಂದಾಗಿ ಒಂದೇ ರಾತ್ರಿಯಲ್ಲಿ ಫೇಮಸ್ ಆಗಿದ್ದರು. ದೇಶದ ಹಲವು ಕಡೆಗಳಿಂದ ಬಾಬಾ ಕಾ ಡಾಬಾ ಕಾಂತ ಪ್ರಸಾದ್ಗೆ ನೆರವು ಬಂದಿತ್ತು. ತಮಗೆ ಬಂದ ಹಣದಿಂದ ಚೈನೀಸ್ ರೆಸ್ಟೊರೆಂಟ್ ತೆರೆದಿದ್ದರು. ಆದರೆ ಹೋಟೆಲ್ಗೆ ತಿಂಗಳಿಗೆ ಒಂದು ಲಕ್ಷ ರೂಪಾಯಿ ಖರ್ಚಾಗುತ್ತಿತ್ತು. ವ್ಯಾಪಾರ ಕಡಿಮೆಯಾಗಿತ್ತು. ಈ ಕಾರಣಕ್ಕೆ ರೆಸ್ಟೊರೆಂಟ್ ಮುಚ್ಚಿ ಮತ್ತೆ ಪೆಟ್ಟಿ ಹೋಟೆಲ್ಗೆ ಮರಳಿದ್ದರು.
ಈ ಸಂಗತಿಗಳಿಂದ ಕಾಂತಪ್ರಸಾದ್ ಮಾನಸಿಕವಾಗಿ ಕುಗ್ಗಿದ್ದರು. ಹೀಗಾಗಿ ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications