ಬಾಬ್ರಿ ಧ್ವಂಸ ಪ್ರಕರಣ: ಪದ್ಮವಿಭೂಷಣ ಅಡ್ವಾಣಿಗೆ ನೋಟಿಸ್
ನವದೆಹಲಿ, ,ಆ.31: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಬಿಜೆಪಿ ನಾಯಕ ಪದ್ಮ ವಿಭೂಷಣ ಎಲ್ ಕೆ ಅಡ್ವಾಣಿ ಜೊತೆಗೆ ಇತರೆ ಆರೋಪಿಗಳಾದ ಕರ ಸೇವಕರಿಗೆ ಸುಪ್ರೀಂಕೋರ್ಟ್ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಪಡೆಯಲಿರುವ 20 ಮಂದಿ, ಇದಕ್ಕೆ ಉತ್ತರಿಸಲು ನಾಲ್ಕು ವಾರಗಳ ಕಾಲಾವಕಾಶ ಪಡೆದುಕೊಂಡಿದ್ದಾರೆ.
ಬಾಬ್ರಿ ಮಸೀದಿ ಪ್ರಕರಣದಲ್ಲಿ ನೇರ ಆರೋಪಿಗಳಾಗಿಲ್ಲ ಎಂದು ಹಲವರನ್ನು ಕೈ ಬಿಡಲ್ಲ ಸಾಧ್ಯವಿಲ್ಲ. ಮಸೀದಿ ಸಂಚು, ಪ್ರಚೋದನಕಾರಿ ಭಾಷಣ ಮಾಡಿದ ಎಲ್ಲರೂ ಪ್ರಕರಣದ ಆರೋಪಿಗಳಾಗಿ ಪರಿಗಣಿಸಬೇಕು ಎಂದು ಸಿಬಿಐ ತನ್ನ ಅಫಿಡವಿಟ್ ನಲ್ಲಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು. [ಬಾಬ್ರಿ ಮಸೀದಿ ಧ್ವಂಸ: ಟೈಮ್ ಲೈನ್]
ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಅನೇಕರ ಕೈವಾಡವಿದೆ ಎಂಬ ಶಂಕೆ ವ್ಯಕ್ತಪಡಿಸಿ ಹಾಜಿ ಮೆಹಮೂದ್ ಎಂಬುವರು ಸುಪ್ರೀಂಕೋರ್ಟಿಗೆ ಅರ್ಜಿ ಹಾಕಿದ್ದರು.

ಅಡ್ವಾಣಿ ಸೇರಿ 20 ಮಂದಿ ವಿರುದ್ಧದ ಸಂಚಿನ ಆರೋಪವನ್ನು ಅಲಹಾಬಾದ್ ಹೈಕೋರ್ಟ್ ಕೈಬಿಟ್ಟ ಕ್ರಮವನ್ನು ಹಾಜಿ ಮೆಹಮೂದ್ ಪ್ರಶ್ನಿಸಿದ್ದರು. ಮೇ.20, 2010ರಂದು ಅಡ್ವಾಣಿ ಸೇರಿದಂತೆ ಹಿರಿಯ ನಾಯಕರನ್ನು ಆರೋಪ ಮುಕ್ತಗೊಳಿಸಲಾಗಿತ್ತು. [ಮಸೀದಿ ಧ್ವಂಸವಾದಾಗ ಅಂದಿನ ಪ್ರಧಾನಿ ಏನ್ಮಾಡ್ತಿದ್ರು?]
ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಿಬಿಐ ಕೂಡಾ ಮೇಲ್ಮನವಿ ಸಲ್ಲಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಅಡ್ವಾಣಿ ಸೇರಿದಂತೆ 19 ಮಂದಿಗೆ ನೋಟಿಸ್ ಜಾರಿಗೊಳಿಸಿದೆ. ಈ ಬಗ್ಗೆ ಪ್ರಶ್ನಿಸಲು ವಿಳಂಬ ಮಾಡಿದ್ದೇಕೆ? ವಿವರಣೆ ನೀಡಿ ಎಂದು ಸಿಬಿಐಗೂ ನೋಟಿಸ್ ನೀಡಲಾಗಿದೆ. [ಅಡ್ವಾಣಿಗೆ ಪದ್ಮ ವಿಭೂಷಣ ಪ್ರದಾನ]
ಸಿಬಿಐ ಎಫ್ ಐಆರ್ : FIR ಸಂಖ್ಯೆ 198/92 ನಲ್ಲಿ ಎಲ್ ಕೆ ಅಡ್ವಾಣಿ, ಉಮಾ ಭಾರತಿ, ಮುರಳಿ ಮನೋಹರ್ ಜೋಶಿ, ಸಾಧ್ವಿ ರಿತಾಂಬರ, ಗಿರಿರಾಜ್ ಕಿಶೋರ್, ಅಶೋಕ್ ಸಿಂಘಾಲ್, ವಿನಯ್ ಕಟಿಯಾರ್, ವಿಷ್ಣು ಹರಿ ದಾಲ್ಮಿಯಾ ಅವರ ಹೆಸರು ಸೇರಿಸಲಾಗಿದೆ. ಎಲ್ಲರ ಮೇಲೂ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಹೊರೆಸಲಾಗಿದೆ. ['ಮಸೀದಿ ಧ್ವಂಸ, ಪೂರ್ವ ಯೋಜಿತ ಕೃತ್ಯವಲ್ಲ']
FIR ಸಂಖ್ಯೆ 197/92 ನಲ್ಲಿ ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಕರ ಸೇವಕರ ಹೆಸರುಗಳು ನಮೂದಾಗಿದೆ. 197/92 ಹಾಗೂ 198/92 ಎಫ್ ಐಆರ್ ಒಂದೇ ಪ್ರಕರಣಕ್ಕೆ ಸೇರಿದೆ. ಬಾಬ್ರಿ ಮಸೀದಿ ಸಂಚಿನ ಹಿಂದಿರುವ ಶಕ್ತಿಗಳಿಗೆ ಶಿಕ್ಷೆಯಾಗಬೇಕಿದೆ ಎಂದು ಸಿಬಿಐ ಹೇಳಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications