ಬಿಎಂಟಿಸಿಗೆ 2000 ಬಸ್ ನೀಡಿದ ಕೇಂದ್ರ ಸರ್ಕಾರ
ನವದೆಹಲಿ, ಸೆ.19 : ಕೇಂದ್ರ ಯುಪಿಎ ಸರ್ಕಾರ ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಭರ್ಜರಿ ಕೊಡುಗೆ ನೀಡಿದೆ. ನರ್ಮ್ ಯೋಜನೆಯಡಿ ಬೆಂಗಳೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗಾಗಿ 2,104 ಬಸ್ ಗಳನ್ನು ಕೊಡುಗೆಯಾಗಿ ನೀಡಿದೆ.
ಬುಧವಾರ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಸುಧೀರ್ ಕೃಷ್ಣ ನೇತೃತ್ವದ ಸಮಿತಿ, ಬೆಂಗಳೂರಿನ ಅಭಿವೃದ್ಧಿಗಾಗಿ 2,104 ಬಸ್ ಗಳನ್ನು ನೀಡಲು ಅನುಮತಿ ನೀಡಿದೆ. ಇದರಿಂದ ಬಿಎಂಟಿಸಿಗೆ ಹೊಸದಾಗಿ ಎರಡು ಸಾವಿರ ಬಸ್ ಗಳು ಸೇರ್ಪಡೆಯಾಗಲಿವೆ.

ಕರ್ನಾಟಕ ಮೊದಲು ಕೇಂದ್ರ ನಗರಾಭಿವೃದ್ಧಿ ಇಲಾಖೆಗೆ 2000 ಬಸ್ ಗಳನ್ನು ನೀಡುವಂತೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಯ ಆಧಾರದ ಮೇಲೆಯೇ ಬಸ್ ಗಳನ್ನು ನಗರಾಭಿವೃದ್ಧಿ ಇಲಾಖೆ ನೀಡಿದೆ. ದೇಶದ ಉಳಿದ ರಾಜ್ಯಗಳಿಗಿಂತ ಹೆಚ್ಚಿನ ಬಸ್ ಗಳು ಕರ್ನಾಟಕಕ್ಕೆ ದೊರಕಿವೆ.
ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸಿರುವ ಕರ್ನಾಟಕ ರಾಜ್ಯದ ಕಾರ್ಯವನ್ನು ಶ್ಲಾಘಿಸಿರುವ ಕೇಂದ್ರ ನಗರಾಭಿವೃದ್ಧಿ ಇಲಾಖೆ, ನರ್ಮ್ ಯೋಜನೆಯಡಿ ಬಸ್ ನಿಲ್ದಾಣ, ಡಿಪೋಗಳನ್ನು ನಿರ್ಮಿಸಲು ಅನುದಾನ ನೀಡುವುದಾಗಿ ಭರವಸೆ ನೀಡಿದೆ.
2000 ಬಸ್ ಗಳನ್ನು ಉಪಯೋಗಿಸಿಕೊಂಡು ಬೆಂಗಳೂರಿನ ನಗರಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಅಭಿವೃದ್ದಿಗೊಳಿಸಲಾಗುವುದು ಬಿಎಂಟಿಸಿ ಯೋಜನೆ ರೂಪಿಸುತ್ತಿದೆ. ಎಲ್ಲಾ ಬಸ್ ಗಳು ಎಲ್ ಇಡಿ ಡಿಪ್ಲೇ ಬೋರ್ಡ್ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆಯನ್ನು ಹೊಂದಿರಲಿವೆ.
ಆ.16ರಂದು ನವದೆಹಲಿಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಜವಾಹರಲಾಲ್ ನೆಹರು ರಾಷ್ಟ್ರೀಯ ನಗರ ನವೀಕರಣ ಯೋಜನೆ ಅಡಿ (ನರ್ಮ್) 10,000 ಬಸ್ ಖರೀದಿಗೆ ಅನುಮೋದನೆ ನೀಡಲಾಗಿತ್ತು. ಇದರ ಅನ್ವಯ ರಾಜ್ಯಕ್ಕೆ ಹೆಚ್ಚು ಬಸ್ ಗಳು ದೊರಕಿವೆ.
ನೆರೆಯ ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಿಗೂ ಯೋಜನೆಯಡಿ ಬಸ್ ಗಳನ್ನು ಕೇಂದ್ರ ಸರ್ಕಾರ ನೀಡಿದೆ. ಹೈದರಾಬಾದ್ ನಗರಕ್ಕೆ 918, ವಿಶಾಖಪಟ್ಟಣಂ ಗೆ 202 ಮತ್ತು ವಿಜಯವಾಡಕ್ಕೆ 151 ಬಸ್ ಗಳು ದೊರೆಯಲಿವೆ. ತಮಿಳುನಾಡು ರಾಜ್ಯಕ್ಕೆ 1,064 ಬಸ್ ಗಳನ್ನು ನೀಡಲು ಕೇಂದ್ರ ಒಪ್ಪಿಗೆ ನೀಡಿದೆ. (ಬೆಂಗಳೂರಿಗೆ ಬರಲಿವೆ 2000 ಹೊಸ ಬಸ್)
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications