ಸಂಸತ್ ಭದ್ರತಾ ಲೋಪ ವಿಡಿಯೋ: ಸಂಸದ ಮಾನ್ ಕ್ಷಮೆ
ನವದೆಹಲಿ, ಜುಲೈ 22: ಸಂಸತ್ತಿನಲ್ಲಿ ಭದ್ರತಾ ಲೋಪ ಎಂದು ತೋರಿಸಲು ವಿಡಿಯೋ ಚಿತ್ರೀಕರಿಸಿ ವಿವಾದಕ್ಕೆ ಗುರಿಯಾಗಿದ್ದ ಆಮ್ ಆದ್ಮಿ ಪಕ್ಷದ ಸಂಸದ ಭಗವಂತ ಮಾನ್ ಅವರು ಶುಕ್ರವಾರ ಬೇಷರತ್ ಕ್ಷಮೆಯಾಚಿಸಿದ್ದಾರೆ. ಅದರೆ, ಕ್ಷಮೆಯಿಂದ ತೃಪ್ತರಾಗದ ಸ್ಪೀಕರ್ ಸುಮಿತ್ರಾ ಮಹಾಜನ್, ಈ ಬಗ್ಗೆ ಪರಿಶೀಲಿಸಲಾಗುವುದು ಎಂದಿದ್ದಾರೆ.
2001ರಲ್ಲಿ ಉಗ್ರರ ದಾಳಿಗೆ ಸಂಸತ್ ಭವನದಲ್ಲಿ ತುತ್ತಾಗಿತ್ತು. ಈ ದುರ್ಘಟನೆಯಲ್ಲಿ 13ಜನ ಸಾವನ್ನಪ್ಪಿದ್ದರು. ಈಗ ಭದ್ರತಾ ತಪಾಸಣಾ ಪ್ರಕ್ರಿಯೆ ಹೇಗಿರುತ್ತದೆ ಎಂಬುದರ ಕುರಿತು ಮಾನ್ ಅವರು ವಿಡಿಯೋ ಶೂಟ್ ಮಾಡಿ ಸಾಮಾಜಿಕ ಜಾಲ ತಾಣದಲ್ಲಿ ಹಾಕಿ ಚರ್ಚೆ ಆರಂಭಿಸಿದ್ದರು. ಈ ಬಗ್ಗೆ ಶುಕ್ರವಾರ ಸಂಸತ್ ನ ಉಭಯ ಸದನಗಳಾಲ್ಲಿ ಭಾರಿ ಕೋಲಾಹಲ ಉಂಟಾಗಿತ್ತು.

ಸ್ಪೀಕರ್ ಸುಮಿತ್ರಾ ಮಹಾಜನ್ ಮುಂದೆ ಮಾನ್ ಅವರು ಕ್ಷಮೆಯಾಚಿಸಿ, ಸಂಸತ್ತಿನ ಭದ್ರತೆಯನ್ನು ಅಪಾಯಕ್ಕೆ ತಳ್ಳುವ ಉದ್ದೇಶ ನನಗೆ ಇರಲಿಲ್ಲ ಎಂದಿದ್ದಾರೆ. ಆದರೆ, ಎಎಪಿ ಸಂಸದ ಭಗವಂತ ಮಾನ್ ವಿರುದ್ಧ ಸಂಸತ್ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ವಿಷಯ ಗಂಭೀರವಾಗಿದ್ದು, ಮಾನ್ ಅವರ ಕ್ಷಮಾಯಾಚನೆಯಿಂದ ಇತ್ಯರ್ಥವಾಗುವಂಥದ್ದಲ್ಲ. ಸಂಸತ್ತಿನ ಎಲ್ಲಾ ಸದಸ್ಯರು ಸಿಟ್ಟಿನಲ್ಲಿದ್ದಾರೆ. ಇದು ಸಂಸತ್ತಿನ ಭದ್ರತೆಗೆ ಸಂಬಂಧಪಟ್ಟ ವಿಷಯ. ಸೂಕ್ತ ಕ್ರಮ ಕೈಗೊಳ್ಳಲೇಬೇಕಾಗುತ್ತದೆ. ಈ ಬಗ್ಗೆ ಎಲ್ಲಾ ಪಕ್ಷಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸ್ಪೀಕರ್ ಸುಮಿತ್ರಾ ಮಹಾಜನ್ ಹೇಳಿದ್ದಾರೆ. (ಪಿಟಿಐ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications