ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭೆಯಲ್ಲಿ ಭೀಮ ಕೊರೆಗಾಂವ್ ಗಲಭೆ ಚರ್ಚೆ, ಗದ್ದಲ

By Manjunatha
|
Google Oneindia Kannada News

ನವದೆಹಲಿ, ಜನವರಿ 03: ಭೀಮ ಕೊರೆಗಾಂವ್ ಹಿಂಸಾಚಾರ ಇಂದು ಲೋಕಸಭೆಯಲ್ಲಿ ಆಡಳಿತ ಪ್ರತಿಪಕ್ಷದ ನಡುವೆ ಕೋಲಾಹಲ ಉಂಟುಮಾಡಿದೆ.

ಭೀಮ ಕೊರೆಗಾಂವ್ ಗಲಭೆಯಲ್ಲಿ ಆರ್ಎಸ್ಎಸ್ ಕೈವಾಡವಿದೆ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಗಂಭಿರ ಆರೋಪ ಮಾಡಿದ್ದು, ಮರಾಠಾ ಹಾಗೂ ಮಹರ್ ಸಮುದಾಯದವರ ನಡುವೆ ವೈಷಮ್ಯ ಹುಟ್ಟುಹಾಕಲು ಆರ್ಎಸ್ಎಸ್ ಪ್ರಯತ್ನಿಸುತ್ತಿದೆ ಎಂದಿದ್ದಾರೆ.

LIVE: ಕರ್ನಾಟಕಕ್ಕೂ ತಟ್ಟಿದ ಮುಂಬೈ ಬಂದ್ ಬಿಸಿ: ಬಸ್ ಸೇವೆ ಸ್ಥಗಿತLIVE: ಕರ್ನಾಟಕಕ್ಕೂ ತಟ್ಟಿದ ಮುಂಬೈ ಬಂದ್ ಬಿಸಿ: ಬಸ್ ಸೇವೆ ಸ್ಥಗಿತ

ಮಹಾರಾಷ್ಟ್ರ ಸರ್ಕಾರವೇ ಗಲಭೆಗೆ ನೇರ ಹೊಣೆ ಎಂದ ಮಲ್ಲಿಕಾರ್ಜುನ್ ಖರ್ಗೆ ಅವರು ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ನೇತೃತ್ವದ ಸಮಿತಿ ರಚಿಸಿ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

Bhima Koregaon issue discused in Parliment today

ಭಾರತದಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದ ಅವರು ಪ್ರಧಾನಿ ಮೋದಿ ಅವರು ಇದಕ್ಕೆ ಉತ್ತರ ನೀಡಬೇಕು ಎಂದರು.

ವಿಡಿಯೋಗಳಲ್ಲಿ ನೋಡಿ ಮಹಾರಾಷ್ಟ್ರ ಬಂದ್ ಅಬ್ಬರ!ವಿಡಿಯೋಗಳಲ್ಲಿ ನೋಡಿ ಮಹಾರಾಷ್ಟ್ರ ಬಂದ್ ಅಬ್ಬರ!

ಲೋಕಸಭೆಯಲ್ಲಿ ಉತ್ತರ ನೀಡಿದ ಕೇಂದ್ರ ಸಚಿವ ಅನಂತ್‌ಕುಮಾರ್ ಅವರು ಭೀಮ ಕೊರೆಗಾಂವ್ ಗಲಭೆಯಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಪ್ರತಿ ಆರೋಪ ಮಾಡಿದ್ದಾರೆ. ಅನಂತ್ ಕುಮಾರ್ ಹೇಳಿಕೆಯಿಂದ ಕಾಂಗ್ರೆಸ್ ಸದಸ್ಯರು ಕೆರಳಿದ್ದು, ಲೋಕಸಭೆ ಗದ್ದಲದ ಗೂಡಾಯಿತು.

ಭೀಮಾ-ಕೊರೆಗಾಂವ್ ದಾಳಿಯ ಹಿಂದೆ ರಾಜಕೀಯ ದುರುದ್ದೇಶ: ಶಿವಸೇನೆಭೀಮಾ-ಕೊರೆಗಾಂವ್ ದಾಳಿಯ ಹಿಂದೆ ರಾಜಕೀಯ ದುರುದ್ದೇಶ: ಶಿವಸೇನೆ

ಗದ್ದಲ ಹೆಚ್ಚಾದ ಕಾರಣ ಸಭಾಧ್ಯಕ್ಷೆ ಸುಮಿತ್ರಾ ಮಹಾಜನ್ ಅವರು ಕಲಪವನ್ನು 15 ನಿಮಿಷ ಮುಂದೂಡಿದರು. ನಂತರ ಕಲಾಪ ಪ್ರಾರಂಭವಾದಾಗಲೂ ಕಾಂಗ್ರೆಸ್ ಸದಸ್ಯರು ಮೋದಿ ಅವರು ಕಲಾಪಕ್ಕೆ ಹಾಜರಾಗಬೇಕೆಂದು ಪಟ್ಟು ಹಿಡಿದು ಗದ್ದಲ ಎಬ್ಬಿಸಿದರು.

English summary
Congress leader Malikarjun Kharge said RSS is behind the Bhima Koregaon riots. RSS is trying to devide Maratha and Mehars. BJP MP Ananthkumar says Congress making politics in Bhima Koregaon issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X