ಸೈಕಲ್ ದಿನ: ಫಿಟ್ ಇಂಡಿಯಾ ರ್ಯಾಲಿಗೆ ಚಾಲನೆ
ನವದೆಹಲಿ, ಜೂ. 3: ದೆಹಲಿಯಲ್ಲಿ ವಿಶ್ವ ಬೈಸಿಕಲ್ ದಿನ 2022 ರ ಅಂಗವಾಗಿ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಶುಕ್ರವಾರ ಮೇಜರ್ ಧ್ಯಾನ್ ಚಂದ್ ಕ್ರೀಡಾಂಗಣದಿಂದ ದೇಶಾದ್ಯಂತ ಸೈಕಲ್ ರ್ಯಾಲಿ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಸಚಿವ ಠಾಕೂರ್ ಜೊತೆ 750 ಯುವಕರು ರ್ಯಾಲಿಯಲ್ಲಿ ಭಾಗವಹಿಸಿದ್ದರು.
ಈ ಕಾರ್ಯಕ್ರಮದ ಭಾಗವಾಗಿ 1. 29 ಲಕ್ಷ ಯುವಕರು ಸೈಕ್ಲಿಂಗ್ ಮಾಡುವ ಮೂಲಕ ಒಂದು ದಿನದಲ್ಲಿ 9.68 ಲಕ್ಷ ಕಿ.ಮೀ ಕ್ರಮಿಸುವ ಗುರಿಯನ್ನು ಹೊಂದಲಾಗಿದೆ. ಕಾರ್ಯಕ್ರಮದ ಉದ್ದೇಶ ಜನರಲ್ಲಿ ಸೈಕ್ಲಿಂಗ್ ಬಗ್ಗೆ ಜಾಗೃತಿ ಮೂಡಿಸುವುದು, ಇದರಿಂದಾಗಿ ಜನರು ಸದೃಢವಾಗಿ ತಮ್ಮ ದೈನಂದಿನ ದಿನಚರಿಯಲ್ಲಿ ಸೈಕಲ್ ಅನ್ನು ಬಳಸುವ ಅಭ್ಯಾಸವನ್ನು ಉತ್ತೇಜಿಸುವುದಾಗಿದೆ.
ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ, ಸಂಸ್ಕೃತಿ ಮತ್ತು ಬಾಹ್ಯ ವ್ಯವಹಾರಗಳ ಸಚಿವ ಮೀನಾಕ್ಷಿ ಲೇಖಿ ಮತ್ತು ಸಂಸದರಾದ ಮನೋಜ್ ತಿವಾರಿ, ಹರ್ಷವರ್ಧನ್ ಮತ್ತು ರಮೇಶ್ ಬಿಧುರಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಶ್ವ ಬೈಸಿಕಲ್ ದಿನದಂದು ನಡೆಯುತ್ತಿರುವ ಈ ಉಪಕ್ರಮದ ಮೂಲಕ ಒಂದೇ ದಿನದಲ್ಲಿ 1.29 ಲಕ್ಷ ಯುವ ಸೈಕ್ಲಿಸ್ಟ್ಗಳು ಒಟ್ಟು 9.68 ಲಕ್ಷಕ್ಕೂ ಹೆಚ್ಚು ಕಿಲೋಮೀಟರ್ಗಳನ್ನು ಕ್ರಮಿಸಲಿದ್ದಾರೆ. ದೇಶದ 35 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿ ಮತ್ತು ದೇಶಾದ್ಯಂತ 75 ಐಕಾನಿಕ್ ಸ್ಥಳಗಳಲ್ಲಿ ಸೈಕಲ್ ರ್ಯಾಲಿಗಳನ್ನು ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಲಾಗಿದೆ.

ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ ಜೂನ್ 3 ಅನ್ನು ವಿಶ್ವ ಬೈಸಿಕಲ್ ದಿನವನ್ನಾಗಿ ಆಚರಿಸಲು ಘೋಷಿಸಿದೆ. ಇದನ್ನು ಜೂನ್ 3, 2018 ರಂದು ಮೊದಲ ಬಾರಿಗೆ ಆಚರಿಸಲಾಗಿದೆ. ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು 'ಭಾರತ@75', ಆಜಾದಿ ಕಾ ಅಮೃತ್ ಮಹೋತ್ಸವದ ಅಡಿಯಲ್ಲಿ ವಿಶ್ವ ಬೈಸಿಕಲ್ ದಿನವನ್ನು ಆಚರಿಸುತ್ತಿದೆ. ಸಚಿವಾಲಯವು ಎರಡು ಪ್ರಮುಖ ಯುವ ಸಂಘಟನೆಗಳಾದ ನೆಹರು ಯುವ ಕೇಂದ್ರ ಸಂಘಟನೆ (NYKS) ಮತ್ತು ರಾಷ್ಟ್ರೀಯ ಸೇವಾ ಯೋಜನೆ (NSS) ಸಹಯೋಗದೊಂದಿಗೆ ಏಕಕಾಲದಲ್ಲಿ ನಾಲ್ಕು ಚಟುವಟಿಕೆಗಳನ್ನು ಆಯೋಜಿಸುತ್ತಿದೆ. ಇವುಗಳಲ್ಲಿ ದೆಹಲಿಯಲ್ಲಿ ವಿಶ್ವ ಬೈಸಿಕಲ್ ದಿನದ ಪ್ರಾರಂಭ, 35 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ರಾಜಧಾನಿಗಳಲ್ಲಿ ಸೈಕಲ್ ರ್ಯಾಲಿಗಳು, ದೇಶದ 75 ಪ್ರಸಿದ್ಧ ಹೆಗ್ಗುರುತುಗಳು ಮತ್ತು ಎಲ್ಲಾ ಬ್ಲಾಕ್ಗಳು ಸೇರಿವೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಅನುರಾಗ್ ಠಾಕೂರ್, ಬೈಸಿಕಲ್ ದಿನದ ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರತಿಯೊಬ್ಬರಿಗೂ ಸಂದೇಶವಿದೆ. ಫಿಟ್ ಇಂಡಿಯಾ, ಖೇಲೋ ಇಂಡಿಯಾ, ಸ್ವಚ್ಛ ಇಂಡಿಯಾ, ಆರೋಗ್ಯ ಇಂಡಿಯಾ ಈ ಎಲ್ಲ ಕಾರ್ಯಕ್ರಮಗಳನ್ನು ಇಲ್ಲಿ ಒಳಗೊಂಡಿದೆ. ಅಲ್ಲದೆ ಇದು ಮಾಲಿನ್ಯ ತಡೆಗಟ್ಟಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ವಿಶ್ವ ಸೈಕಲ್ ದಿನದ ಅಂಗವಾಗಿ ದೇಶದ ವಿವಿಧ ಭಾಗಗಳಿಂದ ಸಾವಿರಾರು ಸೈಕ್ಲಿಸ್ಟ್ಗಳು ಕಾರ್ಯಕ್ರಮದ ಭಾಗವಾಗಿ ಪಾಲ್ಗೊಳ್ಳಲಿದ್ದಾರೆ. ಸೈಕಲ್ ಬಳಸುವ ಮೂಲಕ ವಾಯು ಮಾಲಿನ್ಯ ತಡೆಗಟ್ಟಬಹುದು. ಅಲ್ಲದೆ ಇದು ಸ್ವಚ್ಛ ಭಾರತ ಅಭಿಯಾನವನ್ನು ಉತ್ತೇಜಿಸುತ್ತದೆ ಎಂದು ಹೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications