ಸುಪ್ರೀಂ ಕೋರ್ಟ್ ನಿಂದ ಅನರ್ಹ ಶಾಸಕರಿಗೆ ಬಿಗ್ ರಿಲೀಫ್
ನವದೆಹಲಿ, ಸೆಪ್ಟೆಂಬರ್ 26: ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ತಲೆಕೆಡಿಸಿಕೊಂಡಿದ್ದ ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.ಅಕ್ಟೋಬರ್ 21 ರಂದು ಘೋಷಿಸಲಾಗಿದ್ದ ಉಪಚುನಾವಣೆಗೆ ಇಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಇತ್ತೀಚೆಗಷ್ಟೇ ಚುನಾವಣಾ ಆಯೋಗ ಕರ್ನಾಟಕದ 15 ಕ್ಷೇತ್ರಗಳಿಗೆ ಚುನಾವಣೆ ಘೋಷಿಸಿತ್ತು. ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ಗೊಂದಲ ಎದ್ದಿತ್ತು. ಸುಪ್ರೀಂ ಕೋರ್ಟಿನಲ್ಲಿ ಅನರ್ಹತೆಯ ಕುರಿತು ವಿಚಾರಣೆ ಮುಗಿಯುವವರೆಗೂ ಚುನಾವಣೆಯನ್ನು ತಡೆ ಹಿಡಿಯುವಂತೆ ಮನವಿ ಮಾಡಿ ಅನರ್ಹ ಶಾಸಕರು ಸುಪ್ರೀಂ ಮೊರೆ ಹೋಗಿದ್ದರು.

ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ, ಚುನಾವಣೆಗೆ ತಡೆ ನೀಡಿದ್ದು, ವಿಚಾರಣೆಯನ್ನು ಅಕ್ಟೋಬರ್ 22 ಕ್ಕೆ ಮುಂದೂಡಿದೆ. ಆದ್ದರಿಂದ ಒಂದು ತಿಂಗಳ ಕಾಲ ಉಪಚುನಾವಣೆಯನ್ನು ತಡೆಹಿಡಿಯಲಾಗಿದೆ.












Click it and Unblock the Notifications