ಮಹಾಘಟಬಂಧನಕ್ಕೆ ಭಾರೀ ಮುಖಭಂಗ: ಸಭೆಗೆ ಗೈರಾಗಲು ದೀದಿ, ಮಾಯ ನಿರ್ಧಾರ
ನವದೆಹಲಿ, ಮೇ 13: ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನ ಪ್ರಧಾನಿ ಅಭ್ಯರ್ಥಿ ಆಯ್ಕೆಗಾಗಿ ಸಭೆ ಸೇರಲಿರುವ ವಿಪಕ್ಷಗಳಿಗೆ ಭಾರೀ ಆಘಾತ ಎದುರಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ವಿಪಕ್ಷಗಳ ಮಹಾಘಟಬಂಧಕ್ಕೆ ಬೆಂಬಲ ಸೂಚಿಸಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂ ಸಿ ನಾಯಕಿ ಮಮತಾ ಬ್ಯಾನರ್ಜಿ ಈ ಸಭೆಗೆ ಗೈರಾಗುವ ಸಾಧ್ಯತೆ ಇದೆ.
ಅಷ್ಟೇ ಅಲ್ಲ, ಬಿಎಸ್ಪಿ ನಾಯಕಿ ಮಾಯಾವತಿ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರೂ ಈ ಸಭೆ ಬಗ್ಗೆ ಋಣಾತ್ಮಕ ಅಭಿಪ್ರಾಯ ನೀಡಿದ್ದು, ಅವರೂ ಹಾಜರಾಗುವುದಿಲ್ಲ ಎನ್ನಲಾಗಿದೆ.

ಈಗಾಗಲೇ ಕಾಂಗ್ರೆಸ್ ಜೊತೆ ಅಷ್ಟೊಂದು ಉತ್ತಮ ಬಾಂಧವ್ಯ ಹೊಂದಿಲ್ಲದ ಟಿಎಂಸಿ ಮತ್ತು ಬಿಎಸ್ಪಿ-ಎಸ್ಪಿ ಪಕ್ಷಗಳು ತಮ್ಮ ತಮ್ಮ ರಾಜ್ಯದಲ್ಲೂ ಕಾಂಗ್ರೆಸ್ ಜೊತೆ ಚುನಾವಣಾ ಪೂರ್ವ ಮೈತ್ರಿಗೆ ಒಲ್ಲೆ ಎಂದಿದ್ದವು.
ಕಾಂಗ್ರೆಸ್ ನೇತೃತ್ವದಲ್ಲಿ ಚುನಾವಣೆ ಫಲಿತಾಂಶಕ್ಕೂ ಮುನ್ನ ಮಹತ್ವದ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಅದಕ್ಕೆ ಬ್ಯಾನರ್ಜಿ, ಮಾಯಾವತಿ, ಅಖಿಲೇಶ್ ಹೀಗೆ ಮಹಾಮೈತ್ರಿಕೂಟದ ಎಲ್ಲ ಸದಸ್ಯರನ್ನೂ ಆಮಂತ್ರಿಸಲಾಗಿತ್ತು. ಪ್ರಧಾನಿ ಅಭ್ಯರ್ಥಿಯನ್ನು ಆರಿಸುವುದಕ್ಕೆಂದು ಆಯೋಜಿಸಿರುವ ಈ ಸಭೆಗೆ ಮಾಯಾವತಿ, ಮಮತಾ ಬ್ಯಾನರ್ಜಿ ಹಾಜರಾಗದೆ ಇರಲು ನಿರ್ಧರಿಸುವ ಮೂಲಕ ಮಹಾಘಟಬಂಧನಕ್ಕೆ ತಮ್ಮ ಬೆಂಬಲವಿಲ್ಲ ಎಂಬ ಸೂಚನೆ ನೀಡಿವೆ.
ಮಹತ್ವದ ಬೆಳವಣಿಗೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರೂ ಕಾಂಗ್ರೆಸ್ ನೇತೃತ್ವದ ಮಹಾಮೈತ್ರಿಕೂಟಕ್ಕೆ ತಮ್ಮ ಬೆಂಬಲ ಸೂಚಿಸುವ ಸಾಧ್ಯತೆಗಳಲಿದ್ದು, ಅವರೂ ಸಸಭೆಯಲ್ಲಿ ಭಾಗವಹಿಸಬಹುದು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications