ದೆಹಲಿ ವ್ಯಾಪಾರಿ ಬಲೆಗೆ, ಎರಡು ವರ್ಷದಲ್ಲಿ ಟನ್ ಗಟ್ಟಲೆ ಚಿನ್ನ ಕಳ್ಳಸಾಗಣೆ
ನವದೆಹಲಿ, ಮೇ 22: ಚಿನ್ನ ಕಳ್ಳಸಾಗಣೆ ಜಾಲದಲ್ಲೇ ಅತಿ ದೊಡ್ಡದು ಎನ್ನಬಹುದಾದ್ದನ್ನು ಕಂದಾಯ ಗುಪ್ತಚರ ನಿರ್ದೇಶನಾಲಯವು ಬಯಲು ಮಾಡಿದೆ. ಈ ಜಾಲವನ್ನು ದೆಹಲಿ ಮೂಲದ ವ್ಯಾಪಾರಿ ನಡೆಸುತ್ತಿದ್ದಾನೆ ಎಂಬ ಶಂಕೆಯನ್ನು ವ್ಯಕ್ತಪಡಿಸಲಾಗಿದೆ. ಈತ ದುಬೈನಿಂದ ಎರಡು ಟನ್ ಅಂದರೆ ಎರಡು ಸಾವಿರ ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿರುವ ಸಾಧ್ಯತೆ ಇದೆ.
ಕಂದಾಯ ಗುಪ್ತಚರ ಇಲಾಖೆ ಅಧಿಕಾರಿಗಳು ಹದಿನೈದು ಕೋಟಿ ಮೌಲ್ಯದ ಐವತ್ತೆರಡು ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಗುಜರಾತ್ ನ ಮುಂದ್ರಾ ಬಂದರಿನಲ್ಲಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಈ ಜಾಲದ ಸೂತ್ರಧಾರಿ ಹರ್ನೇಕ್ ಸಿಂಗ್ ನನ್ನು ಬಂಧಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಭಾರತದೊಳಕ್ಕೆ ಚಿನ್ನ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಇಲಾಖೆ ತಿಳಿಸಿದೆ.

ಮೇ ಹದಿಮೂರರಂದು ನಲವತ್ನಾಲ್ಕು ಕೆಜಿ ಚಿನ್ನವನ್ನು ವಶಕ್ಕೆ ಪಡೆಯಲಾಗಿತ್ತು. ಪೌಲ್ಟ್ರಿಗಳಲ್ಲಿ ಬಳಕೆಯಾಗುವ ಇನ್ ಕ್ಯುಬೇಟರ್ಸ್ ನಲ್ಲಿ ಚಿನ್ನವನ್ನು ತುಂಬಿ ಮುಂದ್ರಾ ಬಂದರಿನಿಂದ ದೆಹಲಿಯಲ್ಲಿರುವ ಸಿಂಗ್ ನ ಕಾರ್ಖಾನೆಗೆ ಸಾಗಿಸಲಾಗುತ್ತಿತ್ತು. ದುಬೈನಲ್ಲಿರುವ ಸಿಂಗ್ ನ ಭಾವಮೈದುನನ ಜತೆ ಸೇರಿ ಈ ದಂಧೆ ನಡೆಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹವಾಲಾ ಮೂಲಕ ಹಣ ವರ್ಗಾವಣೆ ಮಾಡುತ್ತಿದ್ದ. ದುಬೈನಲ್ಲಿರುವ ಭಾವಮೈದುನ ಸರಕು ಕಳಿಸುತ್ತಿದ್ದ. ಇನ್ ಕ್ಯುಬೇಟರ್ ಗಳಲ್ಲಿ ಐವತ್ತು ಕೆಜಿ ಚಿನ್ನದ ಗಟ್ಟಿಯನ್ನು ಮುಚ್ಚಿಟ್ಟು ಕಳಿಸುತ್ತಿದ್ದ. ಲೋಹ ತಗುಲಿ ಶಬ್ದ ಬರದಂತೆ ಅವುಗಳಿಗೆ ದಪ್ಪದಾದ ಪೇಪರ್ ಗಳನ್ನು ಮುಚ್ಚಿರಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
{promotion-urls}
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications