ಜಾತಿ ಆಧಾರಿತ ಜನಗಣತಿಗಾಗಿ ಪ್ರಧಾನಿ ಮೋದಿಯನ್ನು ಒತ್ತಾಯಿಸಿದ ನಿತೀಶ್, ತೇಜಸ್ವಿ
ನವದೆಹಲಿ, ಆಗಸ್ಟ್ 23: ಬಿಹಾರದಲ್ಲಿ ಜಾತಿ ಆಧಾರಿತ ಜನಗಣತಿ ಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ನಿಯೋಗವು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಆರ್ಜೆಡಿ ಪಕ್ಷದ ನಾಯಕ ತೇಜಸ್ವಿ ಯಾದವ್, ಎಚ್ಎಎಮ್ನ ಜಿತನ್ ರಾಮ್ ಮಾಂಝಿ ಮತ್ತು ವಿಐಪಿಯ ಮುಖೇಶ್ ಸಹಾನಿ ಸೇರಿದಂತೆ ಬಿಹಾರದ 10 ರಾಜಕೀಯ ಪಕ್ಷಗಳ ನಾಯಕರ ನಿಯೋಗವು ನವದೆಹಲಿಯಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಜಾತಿ ಆಧಾರಿತ ಜನಗಣತಿ ನಡೆಸುವ ಕುರಿತು ಚರ್ಚಿಸಿದೆ.
"ನಿಯೋಗದ ಎಲ್ಲ ಸದಸ್ಯರ ಮಾತನ್ನು ಪ್ರಧಾನಿ ನರೇಂದ್ರ ಮೋದಿ ಆಲಿಸಿದ್ದಾರೆ. ನಾವು ಅದರ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಪ್ರಧಾನಮಂತ್ರಿಯನ್ನು ಒತ್ತಾಯಿಸಿದ್ದೇವೆ ಮತ್ತು ಜಾತಿ ಗಣತಿ ಕುರಿತು ರಾಜ್ಯ ವಿಧಾನಸಭೆಯಲ್ಲಿ ಎರಡು ಬಾರಿ ನಿರ್ಣಯಗಳನ್ನು ಹೇಗೆ ಅಂಗೀಕರಿಸಲಾಗಿದೆ ಎಂಬುದರ ಕುರಿತು ನಾವು ಅವರಿಗೆ ತಿಳಿಸಿದ್ದೇವೆ," ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಸಭೆಯ ನಂತರ ಮಾತನಾಡಿದ ಆರ್ಜೆಡಿ ನಾಯಕ ತೇಜಸ್ವಿ ಯಾದವ್, "ನಮ್ಮ ನಿಯೋಗವು ಸೋಮವಾರ ಪ್ರಧಾನಿಯವರನ್ನು ಭೇಟಿಯಾಗಿ, ಬಿಹಾರ ರಾಜ್ಯದಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಜಾತಿ ಆಧಾರಿತ ಜನಗಣತಿಗಾಗಿ ಮನವಿ ಮಾಡಿದ್ದೇವೆ. ನಾವು ಈಗ ಕೇಂದ್ರ ಸರ್ಕಾರದ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ," ಎಂದು ಹೇಳಿದರು.
ಬಿಜೆಪಿ ಹೊರತುಪಡಿಸಿ ಬಿಹಾರದ ಎಲ್ಲಾ ಪಕ್ಷಗಳು 2021ರ ಜನಗಣತಿಯಲ್ಲಿ ಜಾತಿ ಸಂಖ್ಯೆಗಳ ಎಣಿಕೆಗೆ ಬೇಡಿಕೆ ಇಟ್ಟಿವೆ. ಈ ಬೇಡಿಕೆಯನ್ನು ಪಾಲಿಸಲು ಕೇಂದ್ರ ಸರ್ಕಾರ ಇಲ್ಲಿಯವರೆಗೆ ನಿರಾಕರಿಸಿದ್ದರೆ, ಬಿಹಾರ ಉಪ ಮುಖ್ಯಮಂತ್ರಿ ರೇಣುದೇವಿ ಸೇರಿದಂತೆ ಕೆಲವು ಬಿಜೆಪಿ ಸದಸ್ಯರು ಜಾತಿ ಆಧಾರಿತ ಜನಗಣತಿಗೆ ಬೆಂಬಲ ನೀಡಿದ್ದಾರೆ.
ಈ ವಿಷಯವನ್ನು ಮತ್ತಷ್ಟು ಚರ್ಚಿಸಲು ನಿತೀಶ್ ಕುಮಾರ್ ಬಿಹಾರದಿಂದ 11 ಸದಸ್ಯರ ನಿಯೋಗದ ನೇತೃತ್ವ ವಹಿಸಿಕೊಂಡಿದ್ದಾರೆ. ರಾಜಕೀಯ ವೈಷಮ್ಯ ಮರೆತು ಇದೇ ಮೊದಲ ಬಾರಿಗೆ ಸಿಎಂ ನಿತೀಶ್ ಕುಮಾರ್ ಮತ್ತು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

ಸಂವಿಧಾನ ತಿದ್ದುಪಡಿ ವಿಧೇಯಕದ ಮೇಲಿನ ಚರ್ಚೆಯಲ್ಲಿ ಜಾತಿ ಜನಗಣತಿ ಮತ್ತು ಶೇಕಡಾ 50ಕ್ಕಿಂತ ಹೆಚ್ಚಿನ ಮೀಸಲಾತಿಗಳನ್ನು ತೆಗೆದುಕೊಳ್ಳುವ ಶಾಸನಗಳು ಸುಪ್ರೀಂ ಕೋರ್ಟ್ ತೀರ್ಪನ್ನು ಅತಿಕ್ರಮಿಸಲು ಮತ್ತು ರಾಜ್ಯಗಳಿಗೆ ತಮ್ಮದೇ ಆದ ಒಬಿಸಿ ಪಟ್ಟಿಗಳನ್ನು ರಚಿಸುವ ಹಕ್ಕನ್ನು ಮರುಸ್ಥಾಪಿಸಲು ಪ್ರಯತ್ನಿಸಿವೆ.
ಜಾತಿ ಆಧಾರಿತ ಜನಗಣತಿ ಬೇಡಿಕೆ ತೀವ್ರಗೊಳ್ಳುತ್ತಿದ್ದು, ಈ ವಿಷಯದ ಬಗ್ಗೆ ಬಿಜೆಪಿ ಪಕ್ಷ ಮಾತ್ರ ಸಂದಿಗ್ಧ ಸ್ಥಿತಿಯಲ್ಲಿದೆ. ಕೇಂದ್ರ ಸಚಿವ ಭೂಪೇಂದರ್ ಯಾದವ್ 'ದಿ ಇಂಡಿಯನ್ ಎಕ್ಸ್ಪ್ರೆಸ್'ಗೆ ನೀಡಿದ ಸಂದರ್ಶನದಲ್ಲಿ "ಸರ್ಕಾರವು ಈ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ," ಎಂದು ಹೇಳಿದ್ದಾರೆ.
"ಜಾತಿ ಆಧಾರಿತ ಜನಗಣತಿಯನ್ನು ನಡೆಸುವುದು ಬಿಹಾರದ ಬಹುಕಾಲದ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ನಾವು ಇಂದು ಪ್ರಧಾನಿಯನ್ನು ಭೇಟಿ ಮಾಡುತ್ತಿದ್ದೇವೆ," ಎಂದು ಎಚ್ಎಎಂ ಅಧ್ಯಕ್ಷ ಮತ್ತು ಮಾಜಿ ಬಿಹಾರ ಸಿಎಂ ಜಿತನ್ ರಾಮ್ ಮಾಂಝಿ ಹೇಳಿದ್ದಾರೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications