ಇನ್ನು ಮಾತುಕತೆ ಏನಿದ್ದರೂ ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ: ರಾಜ್ ನಾಥ್ ಸಿಂಗ್
ನವದೆಹಲಿ, ಆಗಸ್ಟ್ 18: "ಭಾರತ ಹಾಗೂ ಪಾಕಿಸ್ತಾನದ ಮಧ್ಯೆ ದ್ವಿಪಕ್ಷೀಯ ಮಾತುಕತೆ ಆಗಬೇಕಿದ್ದರೆ ಅದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಬಗ್ಗೆ" ಎಂದು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ. ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ 'ಜನ್ ಆಶೀರ್ವಾದ್ ಯಾತ್ರಾ'ದಲ್ಲಿ ಪಂಚ್ ಕುಲದಲ್ಲಿ ಅವರು ಮಾತನಾಡಿದ್ದಾರೆ.
ಎಲ್ಲಿಯ ತನಕ ಪಾಕಿಸ್ತಾನವು ತನ್ನ ನೆಲದಲ್ಲಿ ಭಯೋತ್ಪಾದನೆಯನ್ನು ಬೆಂಬಲಿಸುತ್ತದೋ ಅಲ್ಲಿಯ ತನಕ ಆ ದೇಶದ ಜತೆಗೆ ಮಾತುಕತೆ ಸಾಧ್ಯವಿಲ್ಲ. "ಪಾಕಿಸ್ತಾನದ ಜತೆ ಮಾತುಕತೆ ನಡೆಸಬೇಕು ಎಂದು ಕೆಲವರು ನಂಬುತ್ತಾರೆ. ಆದರೆ ಪಾಕಿಸ್ತಾನ ಎಲ್ಲಿಯ ತನಕ ಭಯೋತ್ಪಾದನೆಯನ್ನು ಬೆಂಬಲಿಸುತ್ತದೋ ಅಲ್ಲಿಯ ತನಕ ಯಾವುದೇ ಮಾತುಕತೆ ಇಲ್ಲ. ಒಂದು ವೇಳೆ ಮಾತುಕತೆಯಾದರೆ ಅದು ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ" ಎಂದು ಹೇಳಿದ್ದಾರೆ.
ಈ ವರ್ಷ ಅಕ್ಟೋಬರ್ ನಲ್ಲಿ ಹರಿಯಾಣದಲ್ಲಿ ಚುನಾವಣೆ ನಡೆಯಲಿದೆ. ಅಲ್ಲಿ ಮಾತನಾಡಿದ ಅವರು, ಜಮ್ಮು- ಕಾಶ್ಮೀರ, ಲಡಾಖ್ ನ ಯುವ ಜನಾಂಗದ ಭವಿಷ್ಯಕ್ಕಾಗಿ ವಿಶೇಷ ಸ್ಥಾನಮಾನ ರದ್ದು ಮಾಡುವ ತೀರ್ಮಾನ ಕೈಗೊಂಡಿದ್ದೇವೆ ಎಂದು ಅವರು ಭಾನುವಾರ ಹೇಳಿದ್ದಾರೆ.

ಜಮ್ಮು- ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಭಾರತ ಸರಕಾರದ ತೀರ್ಮಾನವನ್ನು ಪಾಕಿಸ್ತಾನವು ಪ್ರಬಲವಾಗಿ ವಿರೋಧಿಸಿದೆ. ಇದು ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ನಿರ್ಣಯಕ್ಕೆ ವಿರುದ್ಧವಾದದ್ದು ಎಂದು ಪಾಕ್ ಹೇಳಿದೆ. ಇನ್ನು ಭಾರತದ ಜತೆಗಿನ ರಾಜತಾಂತ್ರಿಕ ಸಂಬಂಧವನ್ನು ಕಡಿತಗೊಳಿಸುವ ತೀರ್ಮಾನದ ಭಾಗವಾಗಿ ಭಾರತದ ಹೈಕಮಿಷನ್ ಅನ್ನು ಇಸ್ಲಾಮಾಬಾದ್ ನಿಂದ ಉಚ್ಚಾಟಿಸಿದೆ.
ಪರಿಚ್ಛೇದ 370 ಅನ್ನು ರದ್ದು ಮಾಡುವುದು ಭಾರತದ 'ಆಂತರಿಕ ವಿಚಾರ' ಎಂದು ಜಾಗತಿಕ ಸಮುದಾಯಕ್ಕೆ ತಿಳಿಸಲಾಗಿದ್ದು, ಪಾಕಿಸ್ತಾನವು 'ವಾಸ್ತವವನ್ನು ಒಪ್ಪಿಕೊಳ್ಳಬೇಕು' ಎಂದು ಹೇಳಲಾಗಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications