ಬಿಲ್ಕಿಸ್ ಬಾನೊಗೆ 50 ಲಕ್ಷ ಪರಿಹಾರ ನೀಡಲು ಗುಜರಾತ್ ಸರಕಾರಕ್ಕೆ ಸುಪ್ರೀಂ ಆದೇಶ
ನವದೆಹಲಿ, ಏಪ್ರಿಲ್ 23: 2002ನೇ ಇಸವಿಯಲ್ಲಿ ಗುಜರಾತ್ ಹಿಂಸಾಚಾರ ನಡೆದ ವೇಳೆ 21 ವರ್ಷದ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರಕ್ಕೆ ಈಡಾಗಿದ್ದರು. ಅವರಿಗೆ ಗುಜರಾತ್ ಸರಕಾರ 50 ಲಕ್ಷ ರುಪಾಯಿ ಪರಿಹಾರ ನೀಡಬೇಕು ಎಂದು ಮಂಗಳವಾರದಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ವಾಸಿಸಲು ನೆಲೆಯಿಲ್ಲದೆ 2002ರಿಂದ ಆಕೆ ಅಲೆಮಾರಿ ಜೀವನ ನಡೆಸುತ್ತಿರುವುದನ್ನು ಕೋರ್ಟ್ ಗಣನೆಗೆ ತೆಗೆದುಕೊಂಡಿದೆ.
ಬಿಲ್ಕಿಸ್ ಬಾನೊಗೆ ಸರಕಾರಿ ಉದ್ಯೋಗ ಹಾಗೂ ವಸತಿಯನ್ನು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶ ನೀಡಿದೆ. ದಾಹೋದ್ ಎಂಬ ಹಳ್ಳಿಯ ನಿವಾಸಿಯಾದ ಬಿಲ್ಕಿಸ್ ಯಾಕೂಬ್ ರಸೂಲ್ ಗೋಧ್ರೋತ್ತರ ಹಿಂಸಾಚಾರದಲ್ಲಿ ಅತ್ಯಾಚಾರಕ್ಕೆ ಗುರಿಯಾಗಿದ್ದರು. ಆಕೆಯ ಮೂರು ವರ್ಷದ ಮಗುವನ್ನು ಕೊಲ್ಲಲಾಗಿತ್ತು. ಅತ್ಯಾಚಾರ ಪ್ರಕರಣದಲ್ಲಿ 2008ರಲ್ಲಿ 11 ಮಂದಿಗೆ ಶಿಕ್ಷೆಯಾಗಿತ್ತು.
ಕಳೆದ ಮಾರ್ಚ್ ನಲ್ಲಿ ಆಕೆಗೆ ಐದು ಲಕ್ಷ ರುಪಾಯಿ ಪರಿಹಾರ ನೀಡಲು ಗುಜರಾತ್ ಸರಕಾರ ಮುಂದಾಗಿತ್ತು. ಅದನ್ನು ಆಕೆ ನಿರಾಕರಿಸಿದ್ದರು. "ಸರಕಾರದಿಂದ ಅಪರಾಧಿಗಳಿಗೆ ಶಿಕ್ಷೆಯಾಗಿದೆ. ಆದರೆ ಸಂತ್ರಸ್ತೆ ಮೇಲೆ ನಡೆದ ಮಾನವನ ಕ್ರೌರ್ಯಕ್ಕೆ ಕುಗ್ಗಿ ಹೋಗಿದ್ದಾರೆ" ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಆಕೆ ಮೆಲೆ ಇಪ್ಪತ್ತೆರಡು ಸಲ ಅತ್ಯಾಚಾರ ಆಗಿರುವುದಷ್ಟೇ ಅಲ್ಲ. ಬಿಲ್ಕಿಸ್ ಬಾನೊರ ಮೂರು ವರ್ಷದ ಮಗಳನ್ನು ಕೊಲ್ಲಲಾಗಿದೆ. ಆ ನಂತರ ಆಕೆ ಅಲೆಮಾರಿ ಜೀವನ ನಡೆಸುತ್ತಿದ್ದಾರೆ. ಎನ್ ಜಿಒಗಳ ದಾನದಿಂದ ಬದುಕುತ್ತಿದ್ದಾರೆ. ಆಕೆಗೆ ಈಗ ನಲವತ್ತು ವರ್ಷ ವಯಸ್ಸು. ಶಿಕ್ಷಣ ಕೂಡ ಇಲ್ಲ. ತನ್ನ ಇಡೀ ಕುಟುಂಬವನ್ನು ಕಳೆದುಕೊಂಡಿದ್ದಾರೆ ಎಂದು ಸಹ ಹೇಳಿದೆ.
ಸಂತ್ರಸ್ತೆಗೆ ಪರಿಹಾರ ಸಿಗಬೇಕು ಎಂಬ ವಿಚಾರದಲ್ಲಿ ನಾವು ಕಾನೂನಿನ ನಿಯಮ- ಸಿದ್ಧಾಂತಗಳನ್ನು ಹುಡುಕುವ ಅಗತ್ಯವಿಲ್ಲ. ಸಂತ್ರಸ್ತೆ ಅನುಭವಿಸಿದ ನಷ್ಟವನ್ನು ಗಮನದಲ್ಲಿ ಇಟ್ಟುಕೊಂಡು ಪರಿಹಾರದ ಪ್ರಮಾಣ ಘೋಷಿಸಬೇಕಿದೆ ಎಂದಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications