ಪಿಓಕೆ ಇರುವುದು ಉಗ್ರರ ಹಿಡಿತದಲ್ಲಿ, ಪಾಕ್ ನಿಯಂತ್ರಣದಲ್ಲಲ್ಲ: ರಾವತ್
ನವದೆಹಲಿ, ಅಕ್ಟೋಬರ್ 25: ಪಾಕಿಸ್ತಾನವು ಆಕ್ರಮಿಸಿಕೊಂಡಿರುವ ಜಮ್ಮು ಮತ್ತು ಕಾಶ್ಮೀರದ ಭಾಗವು (ಪಿಓಕೆ) ಭಯೋತ್ಪಾದಕರ ನಿಯಂತ್ರಣದಲ್ಲಿಯೇ ಹೊರತು ಪಾಕ್ ಸರ್ಕಾರದ ಹಿಡಿತದಲ್ಲಿ ಅಲ್ಲ ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದರು.
ನವದೆಹಲಿಯಲ್ಲಿ ಶುಕ್ರವಾರ ಸೇನಾ ಕಮಾಂಡರ್ಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಪಾಕಿಸ್ತಾನವು ಅಕ್ರಮವಾಗಿ ವಶಪಡಿಸಿಕೊಂಡಿರುವ ಪ್ರದೇಶದಲ್ಲಿ ವಾಸ್ತವವಾಗಿ ಉಗ್ರರ ನಿಯಂತ್ರಣವಿದೆ ಎಂದರು.
'ನಾವು ಜಮ್ಮು ಮತ್ತು ಕಾಶ್ಮೀರ ಎಂದಾಗ ಅದರಲ್ಲಿ ಪಿಓಕೆ ಮತ್ತು ಗಿಲ್ಗಿಟ್ ಬಲ್ಟಿಸ್ತಾನ್ ಒಳಗೊಂಡ ಸಂಪೂರ್ಣ ಜಮ್ಮು ಮತ್ತು ಕಾಶ್ಮೀರ ರಾಜ್ಯವಿರುತ್ತದೆ. ಹಾಗಾಗಿ ಪಿಓಕೆ ಮತ್ತು ಗಿಲ್ಗಿಟ್ ಬಲ್ಟಿಸ್ತಾನಗಳು ಆಕ್ರಮಿತ ಪ್ರದೇಶಗಳಾಗಿದ್ದು, ನಮ್ಮ ಪಶ್ಚಿಮದಲ್ಲಿರುವ ನೆರೆಯ ದೇಶವು ಅಕ್ರಮವಾಗಿ ಆಕ್ರಮಿಸಿರುವ ಪ್ರದೇಶವಾಗಿದೆ' ಎಂದು ಹೇಳಿದರು.

370ನೇ ವಿಧಿಯನ್ನು ತಾತ್ಕಾಲಿಕ ಕ್ರಮವನ್ನಾಗಿ ತರಲಾಗಿತ್ತು. 370ನೇ ವಿಧಿಯನ್ನು ತಾತ್ಕಾಲಿಕ ಎಂಬ ಪದದೊಂದಿಗೆ ಪರಿಚಯಿಸಿದಾಗ ಅದಕ್ಕೆ ಆಕ್ಷೇಪಗಳಿರಲಿಲ್ಲ. ಪಾಕಿಸ್ತಾನ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿರಲಿಲ್ಲ. ಹೀಗಿರುವಾಗ 370ನೇ ವಿಧಿಯ ಬಗ್ಗೆ ಪಾಕಿಸ್ತಾನ ಇದ್ದಕ್ಕಿದ್ದಂತೆ ಮಾತನಾಡಲು ಶುರುಮಾಡಿದ್ದು ಏಕೆ? ಎಂದು ಪ್ರಶ್ನಿಸಿದರು.
ಏಕೆಂದರೆ ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶವು ವಾಸ್ತವವಾಗಿ ಪಾಕಿಸ್ತಾನದ ಸರ್ಕಾರದ ನಿಯಂತ್ರಣದಲ್ಲಿ ಇಲ್ಲ, ಅದನ್ನು ನಿಯಂತ್ರಿಸುತ್ತಿರುವುದು ಭಯೋತ್ಪಾದಕರು. ಪಿಓಕೆಯು ಭಯೋತ್ಪಾದಕರ ಹಿಡಿತದಲ್ಲಿರುವ ದೇಶದ ನಿಯಂತ್ರಣದಲ್ಲಿದೆ ಎಂದರು.
ಜಗತ್ತಿನಲ್ಲಿ ಲಭ್ಯವಿರುವ ಅತ್ಯುತ್ತಮ ರೈಫಲ್ ಸಿಗ್ ಸಾಯುರ್ ಅಮೆರಿಕದಿಂದ ಈ ವರ್ಷದ ಅಂತ್ಯದೊಳಗೆ ನಮ್ಮ ಇನ್ಫೆಂಟ್ರಿ ಸೈನಿಕರಿಗೆ ಲಭ್ಯವಾಗಲಿದೆ ಎಂಬ ಭರವಸೆ ನೀಡುತ್ತೇನೆ ಎಂದು ಹೇಳಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications