ದೆಹಲಿಯಲ್ಲೂ ನೂರಾರು ಕಾಗೆಗಳ ಸಾವು: ಪಕ್ಷಿ ಜ್ವರ ದೃಢ!
ನವದೆಹಲಿ, ಜನವರಿ 11: ಸತ್ತ ಕಾಗೆಗಳು ಮತ್ತು ಬಾತುಕೋಳಿಗಳಿಂದ ಎಂಟು ಮಾದರಿಗಳನ್ನು ಪರೀಕ್ಷಿಸಿದ ನಂತರ ದೆಹಲಿಯಲ್ಲಿ ಪಕ್ಷಿ ಜ್ವರ ದೃಢವಾಗಿದೆ. ಏವಿಯನ್ ಜ್ವರಕ್ಕೆ ಧನಾತ್ಮಕವಾಗಿ ಪರೀಕ್ಷಿಸಿದ ಎಲ್ಲಾ ಮಾದರಿಗಳು ಪಕ್ಷಿ ಜ್ವರ ಎಂದು ಸಾಭೀತಾಗಿದೆ ಎಂದು ದೆಹಲಿಯ ಪಶುಸಂಗೋಪನಾ ಇಲಾಖೆ ತಿಳಿಸಿದೆ.
ಪಕ್ಷಿಗಳನ್ನು ಆಮದು ಮಾಡಿಕೊಳ್ಳುವುದು ಮತ್ತು ಕೇಜ್ಗಳು, ಸಗಟು ಕೋಳಿ ಮಾರುಕಟ್ಟೆಯನ್ನು ದೆಹಲಿಯಲ್ಲಿ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ಹಿಂದೆ, ಸಂಜಯ್ ಸರೋವರದಲ್ಲಿ 17 ಬಾತುಕೋಳಿಗಳು ಸತ್ತಿದ್ದು, ಇದನ್ನು ಎಚ್ಚರಿಕೆ ವಲಯ ಎಂದು ಘೋಷಿಸಲು ಅಧಿಕಾರಿಗಳನ್ನು ಪ್ರೇರೇಪಿಸಿತು. ಅಲ್ಲದೆ, ಕಳೆದ ಕೆಲವು ದಿನಗಳಲ್ಲಿ 14 ದೆಹಲಿಯ ಉದ್ಯಾನವನಗಳಲ್ಲಿ 91 ಕಾಗೆಗಳು ಮೃತಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದಕ್ಕೂ ಮೊದಲು ಮಹಾರಾಷ್ಟ್ರದ ಪರಭಾನಿ ಜಿಲ್ಲೆಯ ಮುರುಂಬಾ ಗ್ರಾಮದಲ್ಲಿ 800 ಕೋಳಿಗಳು ಜ್ವರದಿಂದ ಸಾವನ್ನಪ್ಪಿವೆ ಎಂದು ಪರೀಕ್ಷಾ ಫಲಿತಾಂಶಗಳೊಂದಿಗೆ ದೃಢವಾಗಿದೆ.

"ಮೂರು ದಿನಗಳ ಹಿಂದೆ ಮುರುಂಬಾ ಗ್ರಾಮದಲ್ಲಿ 800 ಕೋಳಿಗಳು ಪಕ್ಷಿ ಜ್ವರದಿಂದ ಸಾವನ್ನಪ್ಪಿವೆ. ಸತ್ತ ಕೋಳಿಗಳ ರಕ್ತದ ಮಾದರಿಗಳನ್ನು ಜಿಲ್ಲಾಡಳಿತ ರಾಷ್ಟ್ರೀಯ ಪ್ರಯೋಗಾಲಯಕ್ಕೆ ಕಳುಹಿಸಿತ್ತು. ಹಕ್ಕಿ ಜ್ವರದಿಂದ ಕೋಳಿಗಳು ಸಾವನ್ನಪ್ಪಿವೆ ಎಂದು ವರದಿಗಳು ಖಚಿತಪಡಿಸುತ್ತವೆ "ಎಂದು ಪರಭಾನಿಯ ಜಿಲ್ಲಾಧಿಕಾರಿ ದೀಪಕ್ ಮೊಘ್ಲಿಕರ್ ಸೋಮವಾರ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.
ಮುಂಬೈನ ಚೆಂಬೂರು ಪ್ರದೇಶದಲ್ಲಿ ಭಾನುವಾರ 11 ಕಾಗೆಗಳು ಸತ್ತುಬಿದ್ದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸತ್ತ ಕಾಗೆಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಏತನ್ಮಧ್ಯೆ, ಪಕ್ಷಿ ಜ್ವರ ಹರಡುವಿಕೆಯನ್ನು ಮೇಲ್ವಿಚಾರಣೆ ಮಾಡಲು ರಚಿಸಲಾದ ಕೇಂದ್ರ ತಂಡಗಳು ದೇಶಾದ್ಯಂತ ಏಳು ರಾಜ್ಯಗಳಲ್ಲಿ ಪೀಡಿತ ಸ್ಥಳಗಳಿಗೆ ಭೇಟಿ ನೀಡುತ್ತಿವೆ ಎಂದು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ಭಾನುವಾರ ತಿಳಿಸಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications