ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋಲಿನ ಆಘಾತ: ಸರಣಿ ಸಭೆಯ ಮೊರೆಹೋದ ಬಿಜೆಪಿ

|
Google Oneindia Kannada News

ನವದೆಹಲಿ, ಡಿಸೆಂಬರ್ 14: ತಾನು ಅಧಿಕಾರದಲ್ಲಿದ್ದ ಮೂರು ರಾಜ್ಯಗಳಲ್ಲಿ ಅಚ್ಚರಿಯ ಸೋಲುಕಂಡ ಬಿಜೆಪಿ ಇದೀಗ 2019 ರ ಲೋಕಸಭಾ ಚುನಾವಣೆಯಲ್ಲಿ ಕಾರ್ಯತಂತ್ರ ಬದಲಿಸುವ ಅಗತ್ಯವನ್ನು ಅರಿತುಕೊಂಡಂತಿದೆ.

ಹಣದುಬ್ಬರದ ಎರಡು ಅಲುಗಿನ ಕತ್ತಿಗೆ ಸಿಕ್ಕು ಅಧಿಕಾರ ಕಳ್ಕೊಂಡ ಬಿಜೆಪಿ ಹಣದುಬ್ಬರದ ಎರಡು ಅಲುಗಿನ ಕತ್ತಿಗೆ ಸಿಕ್ಕು ಅಧಿಕಾರ ಕಳ್ಕೊಂಡ ಬಿಜೆಪಿ

ಅದಕ್ಕೆಂದೇ ಜನವರಿ 11 ಮತ್ತು 12 ರಂದು ಬಿಜೆಪಿ ಕಾರ್ಯಕಾರಿಣಿ ಸಭೆ ಸೇರಿದಂತೆ ಒಂದಿಲ್ಲೊಂದು ಸಭೆಯನ್ನು ನಡೆಸುತ್ತಲೇ ಇರಲು ಬಿಜೆಪಿ ನಿರ್ಧರಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಿ ಕಾರ್ಯದರ್ಶಿ ಭುಪೇಂದರ್ ಯಾದವ್ ಹೇಳಿದ್ದಾರೆ.

ಪಂಚ ರಾಜ್ಯ ಚುನಾವಣೆ ಫಲಿತಾಂಶ: ಎಚ್ಚೆತ್ತ ಬಿಎಸ್‌ವೈ, ಸಭೆಗೆ ನಿರ್ಧಾರ ಪಂಚ ರಾಜ್ಯ ಚುನಾವಣೆ ಫಲಿತಾಂಶ: ಎಚ್ಚೆತ್ತ ಬಿಎಸ್‌ವೈ, ಸಭೆಗೆ ನಿರ್ಧಾರ

2019 ರ ಲೋಕಸಭಾ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಸಮಾಜದ ವಿವಿಧ ವಿಭಾಗಗಳ ಮೇಲೆ ಗಮನ ಹರಿಸಲಿದೆ. ಕಾರ್ಯತಂತ್ರವನ್ನು ಬದಲಿಸಲಿದೆ ಎಂದು ಯಾದವ್ ಹೇಳಿದ್ದಾರೆ.ಡಿಸೆಂಬರ್ 15-16 ರಂದು ದೆಹಲಿಯಲ್ಲಿ ಬಿಜೆಪಿ ಯುವ ಮೋರ್ಚಾ ಸಭೆ ನಡೆಯಲಿದೆ. ಅದರ ಹಿಂದೆಯೇ ಡಿಸೆಂಬರ್ 21-22 ರಂದು ಮಹಿಳಾ ಮೋರ್ಚಾ ಸಭೆ ಅಹ್ಮದಾಬಾದಿನಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿಯವರೇ ಸಭೆಯಲ್ಲಿ ಮಾತನಾಡಲಿದ್ದಾರೆ.

ಬಿಜೆಪಿಗೆ ಶಾಕ್, ರಾಮಮಂದಿರ ವಿಚಾರಕ್ಕೆ ಇನ್ನು ಬ್ರೇಕ್; ಇನ್ನೇನಿದ್ದರೂ 'ಪ್ಲ್ಯಾನ್ ಬಿ'! ಬಿಜೆಪಿಗೆ ಶಾಕ್, ರಾಮಮಂದಿರ ವಿಚಾರಕ್ಕೆ ಇನ್ನು ಬ್ರೇಕ್; ಇನ್ನೇನಿದ್ದರೂ 'ಪ್ಲ್ಯಾನ್ ಬಿ'!

BJP announces series of party meetings before 2019 Lok Sabha elections

ನಂತರ ಜನವರಿ 19-20 ರಂದು ಪರಿಶಿಷ್ಟ ಜಾತಿ ಮೋರ್ಚಾ ಸಭೆ ನಾಗ್ಪುರದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ನಿತಿನ್ ಗಡ್ಕರಿ ಭಾಗವಹಿಸಲಿದ್ದಾರೆ.

English summary
Two days after it suffered defeat in three Hindi heartland states, the BJP on Monday announced a number of party meetings, including its national executive, in the run-up to the 2019 general elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X