ಮನೋಜ್ ತಿವಾರಿ ಸೇರಿ 7 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಜೆಪಿ
ನವದೆಹಲಿ, ಏಪ್ರಿಲ್ 22: ದೆಹಲಿ, ಪಂಜಾಬ್, ಮಧ್ಯಪ್ರದೇಶ ಹಾಗೂ ಉತ್ತರಪ್ರದೇಶ ರಾಜ್ಯಗಳ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಭಾರತೀಯ ಜನತಾ ಪಕ್ಷ(ಬಿಜೆಪಿ) ಹೆಸರಿಸಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಭಾನುವಾರದಂದು ಪ್ರಕಟವಾದ ಬಿಜೆಪಿಯ 23ನೇ ಪಟ್ಟಿಯಲ್ಲಿ 7 ಅಭ್ಯರ್ಥಿಗಳನ್ನು ಹೆಸರಿಸಲಾಗಿದೆ. ಪ್ರಮುಖವಾಗಿ ಕೇಂದ್ರ ಸಚಿವ ಡಾ. ಹರ್ಷ್ ವರ್ಧನ್, ನಟ ಮನೋಜ್ ತಿವಾರಿ ಅವರ ಹೆಸರು ಘೋಷಿಸುವ ಮೂಲಕ ದೆಹಲಿಯ ಎಲ್ಲಾ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿ ಕಣಕ್ಕಿಳಿಸಿದೆ. ದೆಹಲಿಯಲ್ಲಿ ಆಡಳಿತಾರೂಢ ಎಎಪಿ ಏಕಾಂಗಿಯಾಗಿ ಕಣಕ್ಕಿಳಿದಿದ್ದು, ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಹೆಸರಿಸಿದೆ. ಕಾಂಗ್ರೆಸ್ ಇನ್ನು ತನ್ನ ಅಧಿಕೃತ ಪಟ್ಟಿಯನ್ನು ಪ್ರಕಟಿಸಿಲ್ಲ.
ಇಂದೋರ್ : ಸುಮಿತ್ರಾ ಮಹಾಜನ್ ಬದಲಿಗೆ ಲಾಲ್ವಾನಿಗೆ ಟಿಕೆಟ್
ದೆಹಲಿಯ ಐತಿಹಾಸಿಕ ಚಾಂದಿನಿ ಚೌಕ್ ಕ್ಷೇತ್ರದಿಂದ ಡಾ. ಹರ್ಷ್ ವರ್ಧನ್, ಈಶಾನ್ಯ ದೆಹಲಿಯಿಂದ ದೆಹಲಿ ಬಿಜೆಪಿ ಮುಖ್ಯಸ್ಥ, ಭೋಜ್ ಪುರಿ ನಟ, ಗಾಯಕ ಮನೋಜ್ ತಿವಾರಿ, ಪಶ್ಚಿಮ ದೆಹಲಿಯಿಂದ ಪ್ರವೇಶ್ ವರ್ಮಾ, ದಕ್ಷಿಣ ದೆಹಲಿಯಿಂದ ರಮೇಶ್ ಬಿಧುರಿ ಅವರಿಗೆ ಟಿಕೆಟ್ ನೀಡಲಾಗಿದೆ. ದೆಹಲಿಯಲ್ಲಿ ಮೇ 12ರಂದು ಮತದಾನ ನಡೆಯಲಿದೆ.
ಇನ್ನು ಅಮೃತಸರ್ ಕ್ಷೇತ್ರದಲ್ಲಿ ಮೇ 19ರಂದು ಮತದಾನ ನಡೆಯಲಿದ್ದು, ರಾಜ್ಯಸಭಾ ಸದಸ್ಯ, ಕೇಂದ್ರ ಸಚಿವ ಹರ್ದೀಪ್ ಪುರಿ ಅವರಿಗೆ ಟಿಕೆಟ್ ಸಿಕ್ಕಿದೆ.
ಸಾಧ್ವಿ ಪ್ರಗ್ಯಾಗೆ ಟಿಕೆಟ್ ಕೊಟ್ಟಿದ್ದು ಏಕೆ?: ಪ್ರಧಾನಿ ಮೋದಿ ನೀಡಿದ ವಿವರಣೆ
ಉತ್ತರಪ್ರದೇಶದ ಘೋಸಿ ಲೋಕಸಭಾ ಕ್ಷೇತ್ರದಲ್ಲಿ ಕೂಡಾ ಮೇ 19ರಂದು ಮತದಾನ ನಡೆಯಲಿದ್ದು, ಈ ಕ್ಷೇತ್ರದಲ್ಲಿ ಹಾಲಿ ಸಂಸದ ಹರಿನಾರಾಯಣ್ ರಾಜ್ ಭರ್ ಅವರು ಸ್ಪರ್ಧಿಸುತ್ತಿದ್ದಾರೆ.
Bharatiya Janata Party releases list of candidates for Delhi, Punjab, Madhya Pradesh and UP; Dr Harsh Vardhan to contest from Delhi's Chandni Chowk, Manoj Tiwari- North East Delhi, Pravesh Verma- West Delhi, Ramesh Bidhuri -South Delhi and Hardeep Puri from Amritsar pic.twitter.com/VDaivg0A7n
— ANI (@ANI) April 21, 2019
ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಬದಲಿಗೆ ಇಂದೋರ್ನಿಂದ ಈ ಬಾರಿ ಶಂಕರ್ಲಾಲ್ವಾನಿ ಅವರನ್ನು ಲೋಕಸಭಾ ಅಭ್ಯರ್ಥಿಯಾಗಿ ಬಿಜೆಪಿ ಘೋಷಿಸಿದೆ. ಮೇ 19ರಂದು ಇಲ್ಲಿ ಮತದಾನ ನಡೆಯಲಿದೆ.