ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮನೋಜ್ ತಿವಾರಿ ಸೇರಿ 7 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಜೆಪಿ

|
Google Oneindia Kannada News

ನವದೆಹಲಿ, ಏಪ್ರಿಲ್ 22: ದೆಹಲಿ, ಪಂಜಾಬ್, ಮಧ್ಯಪ್ರದೇಶ ಹಾಗೂ ಉತ್ತರಪ್ರದೇಶ ರಾಜ್ಯಗಳ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಭಾರತೀಯ ಜನತಾ ಪಕ್ಷ(ಬಿಜೆಪಿ) ಹೆಸರಿಸಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಭಾನುವಾರದಂದು ಪ್ರಕಟವಾದ ಬಿಜೆಪಿಯ 23ನೇ ಪಟ್ಟಿಯಲ್ಲಿ 7 ಅಭ್ಯರ್ಥಿಗಳನ್ನು ಹೆಸರಿಸಲಾಗಿದೆ. ಪ್ರಮುಖವಾಗಿ ಕೇಂದ್ರ ಸಚಿವ ಡಾ. ಹರ್ಷ್ ವರ್ಧನ್, ನಟ ಮನೋಜ್ ತಿವಾರಿ ಅವರ ಹೆಸರು ಘೋಷಿಸುವ ಮೂಲಕ ದೆಹಲಿಯ ಎಲ್ಲಾ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿ ಕಣಕ್ಕಿಳಿಸಿದೆ. ದೆಹಲಿಯಲ್ಲಿ ಆಡಳಿತಾರೂಢ ಎಎಪಿ ಏಕಾಂಗಿಯಾಗಿ ಕಣಕ್ಕಿಳಿದಿದ್ದು, ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಹೆಸರಿಸಿದೆ. ಕಾಂಗ್ರೆಸ್ ಇನ್ನು ತನ್ನ ಅಧಿಕೃತ ಪಟ್ಟಿಯನ್ನು ಪ್ರಕಟಿಸಿಲ್ಲ.

ಇಂದೋರ್ : ಸುಮಿತ್ರಾ ಮಹಾಜನ್ ಬದಲಿಗೆ ಲಾಲ್ವಾನಿಗೆ ಟಿಕೆಟ್ಇಂದೋರ್ : ಸುಮಿತ್ರಾ ಮಹಾಜನ್ ಬದಲಿಗೆ ಲಾಲ್ವಾನಿಗೆ ಟಿಕೆಟ್

ದೆಹಲಿಯ ಐತಿಹಾಸಿಕ ಚಾಂದಿನಿ ಚೌಕ್ ಕ್ಷೇತ್ರದಿಂದ ಡಾ. ಹರ್ಷ್ ವರ್ಧನ್, ಈಶಾನ್ಯ ದೆಹಲಿಯಿಂದ ದೆಹಲಿ ಬಿಜೆಪಿ ಮುಖ್ಯಸ್ಥ, ಭೋಜ್ ಪುರಿ ನಟ, ಗಾಯಕ ಮನೋಜ್ ತಿವಾರಿ, ಪಶ್ಚಿಮ ದೆಹಲಿಯಿಂದ ಪ್ರವೇಶ್ ವರ್ಮಾ, ದಕ್ಷಿಣ ದೆಹಲಿಯಿಂದ ರಮೇಶ್ ಬಿಧುರಿ ಅವರಿಗೆ ಟಿಕೆಟ್ ನೀಡಲಾಗಿದೆ. ದೆಹಲಿಯಲ್ಲಿ ಮೇ 12ರಂದು ಮತದಾನ ನಡೆಯಲಿದೆ.

BJP announces seven candidates including Harsh Vardhan, Manoj Tiwari in Delhi

ಇನ್ನು ಅಮೃತಸರ್ ಕ್ಷೇತ್ರದಲ್ಲಿ ಮೇ 19ರಂದು ಮತದಾನ ನಡೆಯಲಿದ್ದು, ರಾಜ್ಯಸಭಾ ಸದಸ್ಯ, ಕೇಂದ್ರ ಸಚಿವ ಹರ್ದೀಪ್ ಪುರಿ ಅವರಿಗೆ ಟಿಕೆಟ್ ಸಿಕ್ಕಿದೆ.

ಸಾಧ್ವಿ ಪ್ರಗ್ಯಾಗೆ ಟಿಕೆಟ್ ಕೊಟ್ಟಿದ್ದು ಏಕೆ?: ಪ್ರಧಾನಿ ಮೋದಿ ನೀಡಿದ ವಿವರಣೆಸಾಧ್ವಿ ಪ್ರಗ್ಯಾಗೆ ಟಿಕೆಟ್ ಕೊಟ್ಟಿದ್ದು ಏಕೆ?: ಪ್ರಧಾನಿ ಮೋದಿ ನೀಡಿದ ವಿವರಣೆ

ಉತ್ತರಪ್ರದೇಶದ ಘೋಸಿ ಲೋಕಸಭಾ ಕ್ಷೇತ್ರದಲ್ಲಿ ಕೂಡಾ ಮೇ 19ರಂದು ಮತದಾನ ನಡೆಯಲಿದ್ದು, ಈ ಕ್ಷೇತ್ರದಲ್ಲಿ ಹಾಲಿ ಸಂಸದ ಹರಿನಾರಾಯಣ್ ರಾಜ್ ಭರ್ ಅವರು ಸ್ಪರ್ಧಿಸುತ್ತಿದ್ದಾರೆ.

ಸ್ಪೀಕರ್​ ಸುಮಿತ್ರಾ ಮಹಾಜನ್​ ಅವರ ಬದಲಿಗೆ ಇಂದೋರ್​ನಿಂದ ಈ ಬಾರಿ ಶಂಕರ್​ಲಾಲ್ವಾನಿ ಅವರನ್ನು ಲೋಕಸಭಾ ಅಭ್ಯರ್ಥಿಯಾಗಿ ಬಿಜೆಪಿ ಘೋಷಿಸಿದೆ. ಮೇ 19ರಂದು ಇಲ್ಲಿ ಮತದಾನ ನಡೆಯಲಿದೆ.

English summary
The Bharatiya Janata Party on Sunday released its 23rd list, naming candidates for Delhi, Punjab, Madhya Pradesh and Uttar Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X