ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾಯಿತ ನಾಯಕರದ್ದೇ ಈ ಸ್ಥಿತಿಯಾದರೆ, ರಾಜ್ಯದಲ್ಲಿ ಕಾನೂನಿನ ಕಥೆಯೇನು; ಖರ್ಗೆ

|
Google Oneindia Kannada News

ನವದೆಹಲಿ, ಮಾರ್ಚ್ 24: ವಿಶೇಷ ಸಶಸ್ತ್ರ ಪೊಲೀಸ್ ಮಸೂದೆ ವಿಚಾರವಾಗಿ ಬಿಹಾರ ವಿಧಾನಸಭೆಯಲ್ಲಿ ಉಂಟಾದ ಗದ್ದಲದ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ಮಲ್ಲಿಕಾರ್ಜುನ ಖರ್ಗೆ ಬಿಜೆಪಿಯನ್ನು ಟೀಕಿಸಿದ್ದಾರೆ.

ಬಿಜೆಪಿ ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿದೆ ಎಂದು ದೂರಿರುವ ಅವರು, ಚುನಾಯಿತ ನಾಯಕರದ್ದೇ ಈ ಸ್ಥಿತಿಯಾದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕಥೆಯೇನು ಎಂದು ಪ್ರಶ್ನಿಸಿದ್ದಾರೆ.

ಬಿಹಾರ ವಿಧಾನಸಭೆಯೊಳಗೆ ಗದ್ದಲ: ಮಹಿಳಾ ಶಾಸಕಿಯನ್ನು ಹೊರಹಾಕಿದ ಭದ್ರತಾ ಸಿಬ್ಬಂದಿಬಿಹಾರ ವಿಧಾನಸಭೆಯೊಳಗೆ ಗದ್ದಲ: ಮಹಿಳಾ ಶಾಸಕಿಯನ್ನು ಹೊರಹಾಕಿದ ಭದ್ರತಾ ಸಿಬ್ಬಂದಿ

ಮಂಗಳವಾರ ಬಿಹಾರದ ವಿಧಾನಸಭೆಯಲ್ಲಿ ಬಿಹಾರ ವಿಶೇಷ ಸಶಸ್ತ್ರ ಪೊಲೀಸ್ ಮಸೂದೆ 2021 ಕುರಿತಂತೆ ಗದ್ದಲ ಏರ್ಪಟ್ಟಿತ್ತು. ಈ ಸಂದರ್ಭ ಪ್ರತಿಪಕ್ಷದ ಶಾಸಕಿಯೊಬ್ಬರನ್ನು ಭದ್ರತಾ ಸಿಬ್ಬಂದಿ ಹೊರಹಾಕಿರುವ ಘಟನೆ ನಡೆದಿತ್ತು. ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರು ಸದನದ ತಮ್ಮ ಕೊಠಡಿಯಿಂದ ಹೊರಹೋಗುವುದನ್ನು ವಿರೋಧ ಪಕ್ಷದವರು ತಡೆಯಲು ಮುಂದಾದಾಗ ಈ ಸಂಗತಿ ಜರುಗಿತ್ತು.

Bjp Is Killing Democracy Alleges Mallikarjun Kharge Over Ruckus In Bihar Assembly

"ಬಿಹಾರದಲ್ಲಿ ನಡೆದ ಈ ಸಂಗತಿ ಖಂಡನಾರ್ಹವಾಗಿದೆ. ಶಾಸಕಿಯೊಬ್ಬರನ್ನು ಭದ್ರತಾ ಸಿಬ್ಬಂದಿ ಹೀಗೆ ನಡೆಸಿಕೊಳ್ಳುವುದನ್ನು ನಾನು ನೋಡಿರಲಿಲ್ಲ. ಬಿಜೆಪಿ ಪ್ರಜಾಪ್ರಭುತ್ವವನ್ನೇ ಕೊಲ್ಲುತ್ತಿದೆ" ಎಂದು ದೂರಿದ್ದಾರೆ.

English summary
BJP is killing democracy. If this is happening with elected leaders, then what about the law & order situation in the state questions Congress MP Mallikarjun Kharge over Ruckus in Bihar assembly,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X