ಅಜಂ ಖಾನ್ ತಲೆಯನ್ನು ಸಂಸತ್ತಿನ ಬಾಗಿಲಲ್ಲಿ ನೇತುಹಾಕುತ್ತೇನೆಂದ ಬಿಜೆಪಿ ನಾಯಕ!
ನವದೆಹಲಿ, ಜುಲೈ 26: ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಬಿಜೆಪಿ ಸಂಸದೆ ರಮಾ ದೇವಿ ಅವರ ಬಗ್ಗೆ ಅಸಭ್ಯವಾಗಿ ಮಾತನಾಡಿದ ಕುರಿತು ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡರೊಬ್ಬರು, 'ಅಜಂ ಖಾನ್ ತಲೆಯನ್ನು ಕಡಿದು, ಪಾರ್ಲಿಮೆಂಟಿನ ಬಾಗಿಲಿನಲ್ಲಿ ನೇತುಹಾಕಬೇಕು' ಎಂದಿದ್ದಾರೆ.
ಅಜಂ ಖಾನ್ ನೀಡಿದ ವಿವಾದಾತ್ಮಕ ಹೇಳಿಕೆಗೆ ವಿವಾದಾತ್ಮಕವಾಗಿಯೇ ಪ್ರತಿಕ್ರಿಯೆ ನೀಡಿದ ಬಿಜೆಪಿ ಮುಖಂಡ ಆಫ್ತಾಬ್ ಅಡ್ವಾಣಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
"ಮಹಿಳಾ ಸಂಸದರಾದ ರಮಾ ದೇವಿ ಅವರ ಬಗ್ಗೆ ಅಜಂ ಖಾನ್ ಆಡಿದ ಮಾತುಗಳು ಅಕ್ಷಮ್ಯ. ನಾವು ಅದನ್ನು ಕಟುವಾಗಿ ವಿರೋಧಿಸುತ್ತೇವೆ. ಆತನ ತಲೆಯನ್ನು ಕಡಿದು, ಸಂಸತ್ತಿನ ಬಾಗಿಲಿನಲ್ಲಿ ನೇತುಹಾಕುವಂತೆ ಭಾರತ ಸರ್ಕಾರವನ್ನು ನಾನು ಮನವಿ ಮಾಡುತ್ತೇನೆ. ಹೀಗೆ ಮಾಡುವುದರಿಂದ ಮಹಿಳೆಯರನ್ನು ಅಗೌರವದಿಂದ ಕಾಣುವವರಿಗೆ ಯಾವ ರೀತಿಯ ಶಿಕ್ಷೆ ಎಂಬುದು ಇಂಥವರಿಗೆ ತಿಳಿಯುತ್ತದೆ" ಎಂದು ಅಡ್ವಾಣಿ ಹೇಳಿದರು.

"ಮಹಿಳೆಯರನ್ನು ಅಗೌರವದಿಂದ ಕಾಣುವವರನ್ನು ಕ್ಷಮಿಸಬಾರದು. ಕ್ಷಮಿಸಿದರೆ ಅಂಥ ಘಟನೆಗಳು ನಿಲ್ಲುವುದಿಲ್ಲ. ಮೊದಲಿಗೆ ಜಯಪ್ರಧಾ ಅವರನ್ನು ಅಗೌರವದಿಂದ ನಡೆಸಿಕೊಂಡರು. ಈಗ ರಮಾ ದೇವಿ ಅವರ ಬಗ್ಗೆ ಮಾತನಾಡಿದರು. ಈ ಮುದುಕನಿಗೆ ಹುಚ್ಚು ಹಿಡಿದಿರುವಂತಿದೆ. ಆತನನ್ನು ಹುಚ್ಚು ನಾಯಿಯನ್ನು ಕೊಂದಂತೆ ಕೊಲ್ಲಬೇಕು. ನಮ್ಮ ದೇಶಕ್ಕೆ ಇಂಥವರು ಹಾನಿಕರ" ಎಂದು ಉದ್ವೇಗದಿಂದ ಅಡ್ವಾಣಿ ಹೇಳಿದ ಮಾತು ಇದೀಗ ವಿವಾದ ಸೃಷ್ಟಿಸಿದೆ. 'ನಾಲಿಗೆ ಬಿಗಿಯಾಗಿರಲಿ' ಎಂದು ಹಲವು ಬಾರಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಎಚ್ಚರಿಕೆ ನೀಡುತ್ತಲೇ ಇದ್ದರೂ ಬಿಜೆಪಿ ನಾಯಕರು ಇಂಥ ಹೇಳಿಕೆ ನೀಡುವುದು ಮಾತ್ರ ನಿಂತಿಲ್ಲ!
ಗುರುವಾರ ತ್ರಿವಳಿ ತಲಾಖ್ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದ್ದ ಸಮಯದಲ್ಲಿ ಅಜಂ ಖಾನ್, ಮುಕ್ತಾರ್ ಅಬ್ಬಾಸ್ ನಖ್ವಿ ಅವರನ್ನು ಚರ್ಚೆಗೆ ಎಳೆಯಲು ಪ್ರಯತ್ನಿಸಿದ್ದರು. ಆ ಸಂದರ್ಭದಲ್ಲಿ ಸ್ಪೀಕರ್ ಕುರ್ಚಿಯಲ್ಲಿದ್ದ ಬಿಹಾರದ ಶಿಯೋಹರ್ ಕ್ಷೇತ್ರದ ಬಿಜೆಪಿ ಸಂಸದೆ ರಮಾ ದೇವಿ, 'ಎಲ್ಲೆಲ್ಲೋ ನೋಡಬೇಡಿ, ಸ್ಪೀಕರ್ ಕುರ್ಚಿಯನ್ನು ನೋಡಿ ಮಾತನಾಡಿ ಎಂದರು.' ಆಗ ತಕ್ಷಣವೇ, 'ನೀವಂದ್ರೆ ನನಗೆ ಇಷ್ಟ, ನಿಮ್ಮ ಕಣ್ಣಲ್ಲಿ ಕಣ್ಣಿಟ್ಟು ನೋಡಬೇಕು ಎಂದು ನನಗೆ ಅನ್ನಿಸುತ್ತದೆ' ಎಂಬರ್ಥದಲ್ಲಿ ಅಜಂ ಖಾನ್ ಮಾತನಾಡಿದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಆದರೆ ಅಜಂ ಖಾನ್ ನೀಡಿದ ವಿವಾದಾತ್ಮಕ ಹೇಳಿಕೆ ಏನು ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications