ಪೊರಕೆ ನೆಲಕ್ಕೆ ತಾಗಿಸದೆಯೇ 'ಕಸಗುಡಿಸಿದ' ಹೇಮಾಮಾಲಿನಿ!
ನವದೆಹಲಿ, ಜುಲೈ 13: ಲೋಕಸಭೆ ಚುನಾವಣೆಗೂ ಮುನ್ನ ಹೊಲದಲ್ಲಿ ಟ್ರ್ಯಾಕ್ಟರ್ ಏರಿ ಕಾಣಿಸಿಕೊಂಡು ವಿಪರೀತ ಟ್ರಾಲ್ಗೆ ಒಳಗಾಗಿದ್ದ ಬಿಜೆಪಿ ಸಂಸದೆ ಹೇಮಾಮಾಲಿನಿ ಅವರು ಸಾಮಾಜಿಕ ಜಾಲತಾಣದ ಟೀಕಾಕಾರರಿಗೆ ಮತ್ತೆ ಆಹಾರವಾಗಿದ್ದಾರೆ.
ಸಂಸತ್ನ ಹೊರಭಾಗದ ಆವರಣದಲ್ಲಿ ಶನಿವಾರ ಸ್ವಚ್ಛವಾಗಿರುವ ನೆಲವನ್ನು ಗುಡಿಸಲು ಪೊರಕೆ ಹಿಡಿದುಬಂದು ಪೋಸ್ ನೀಡಿದ ಹೇಮಾಮಾಲಿನಿ ಅವರನ್ನು ಟ್ರೋಲಿಗರು ಹಿಗ್ಗಾಮುಗ್ಗಾ ಕಾಲೆಳೆದಿದ್ದಾರೆ.
ಶನಿವಾರ ಬೆಳಿಗ್ಗೆ ಹೇಮಾಮಾಲಿನಿ ಅವರು ಪೊರಕೆ ಹಿಡಿದು ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಸೇರಿದಂತೆ ಬಿಜೆಪಿ ಸಂಸದರ ಜತೆ ಸಂಸತ್ ಹೊರಭಾಗದ ಆವರಣದ ರಸ್ತೆಯಲ್ಲಿ ಕಾಣಿಸಿಕೊಂಡರು. ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ 'ಸ್ವಚ್ಛ ಭಾರತ ಅಭಿಯಾನ'ದಡಿ ಸಂಸದರು ಮತ್ತು ಸಚಿವರು ಸ್ವಚ್ಛತಾ ಕಾರ್ಯ ನಡೆಸಿದರು.

ಆದರೆ, ಹೇಮಾ ಮಾಲಿನಿ ಅವರು ಕಸಗುಡಿಸಿ ಸ್ವಚ್ಛಗೊಳಿಸಿದ ಪರಿ ಕಂಡು ಸಾಮಾಜಿಕ ಜಾಲತಾಣದ ಬಳಕೆದಾರರು ದಂಗಾಗಿದ್ದಾರೆ. ಕಪ್ಪು ಕನ್ನಡಕ ಧರಿಸಿ ಟಿಪ್ ಟಾಪ್ಆಗಿ ಬಂದಿದ್ದ ಹೇಮಾಮಾಲಿನಿ ಅವರು ಪೊರಕೆಯಿಂದ ಜೋರಾಗಿ ಗುಡಿಸಿದರೆ ನೆಲಕ್ಕೆ ನೋವಾಗುತ್ತದೆಯೇನೋ ಎಂಬಂತೆ ಕೆಲವು ಬಾರಿ ಪೊರಕೆಯನ್ನು ನಿಧಾನವಾಗಿ ಅತ್ತಿತ್ತ ಬೀಸಿದ್ದರು. ಅವರ ಪೊರಕೆಯಿಂದ ಸ್ವಲ್ಪವೂ ಕಸ ಆಚೆ ಬರಲಿಲ್ಲ.
ಇತರೆ ಸಂಸದರು ಪೊರಕೆಯಲ್ಲಿ ಕಸವನ್ನು ಸ್ವಚ್ಛಗೊಳಿಸುತ್ತಿದ್ದರೆ ಹೇಮಾಮಾಲಿನಿ ನಗುತ್ತಾ ಕ್ಯಾಮೆರಾಗಳಿಗೆ ಪೋಸ್ ನೀಡುವುದಕ್ಕಷ್ಟೇ ಸೀಮಿತರಾದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದಂತೆಯೇ ನೆಟ್ಟಿಗರು ಅವರನ್ನು ಟ್ರಾಲ್ ಮಾಡಲು ಆರಂಭಿಸಿದರು.
'ಹೇಮಾ ಮಾಲಿನಿ ಅವರು ಸ್ವಚ್ಛತಾ ಅಭಿಯಾನಕ್ಕೆ ನಿಡಿದ ಕೊಡುಗೆಯು ಸಚಿನ್ ತೆಂಡೂಲ್ಕರ್ ಭಾರತೀಯ ಸಿನಿಮಾಕ್ಕೆ ನೀಡಿದ ಕೊಡುಗೆಗೆ ಸಮ' ಎಂದು ಒಬ್ಬರು ತಮಾಷೆ ಮಾಡಿದ್ದಾರೆ,
'ಪೊರಕೆಯು ರಸ್ತೆಯನ್ನು ಮುಟ್ಟುತ್ತಿಲ್ಲ ಕೂಡ. ಕ್ಯಾಮೆರಾಕ್ಕೆ ಅದ್ಭುತವಾದ ಅಭಿನಯ ನೀಡಿದ್ದಾರೆ' ಎಂದು ಮತ್ತೊಬ್ಬರು ಟ್ರಾಲ್ ಮಾಡಿದ್ದಾರೆ.
'ಹೇಮಾಮಾಲಿನಿ ಒಬ್ಬ ಲೆಜೆಂಡ್. ಇಷ್ಟು ವರ್ಷ ನೀರು ಶುದ್ಧೀಕರಿಸಿದ ಅವರು ಈಗ ಗಾಳಿಯನ್ನು ಸ್ವಚ್ಛಗೊಳಿಸುತ್ತಿದ್ದಾರೆ' ಎಂದು ಕಾಲೆಳೆದಿದ್ದಾರೆ.
'ಹೇಮಾಮಾಲಿನಿ ಅವರಿಗೆ ಅತ್ಯುತ್ತಮ ಪೋಷಕ ನಟಿ ಎಂಬ ಆಸ್ಕರ್ ಪ್ರಶಸ್ತಿ ಕೊಡಬೇಕು' ಎಂದು ವ್ಯಂಗ್ಯವಾಡಿದ್ದಾರೆ.
ಹೇಮಾಮಾಲಿನಿ ರಸ್ತೆ ಸ್ವಚ್ಛಗೊಳಿಸಿದ ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications