ಸಂಸದ ಗಂಭೀರ್ ಕ್ಯಾಂಟೀನ್ ವಿಸ್ತರಣೆ, ಇನ್ನಷ್ಟು ಬಡವರಿಗೆ ಊಟ
ನವದೆಹಲಿ, ಫೆಬ್ರವರಿ 10: ಟೀಂ ಇಂಡಿಯಾದ ಒಂದು ಕಾಲದ ಭರವಸೆಯ ಆಟಗಾರ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಜಿ ನಾಯಕ, ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ಬಡವರಿಗೆ ಉಚಿತವಾಗಿ ಆಹಾರ ನೀಡುವ ಕಾಯಕವನ್ನು ವಿಸ್ತರಿಸಿದ್ದಾರೆ. ಪೂರ್ವ ದೆಹಲಿಯಲ್ಲಿ ಜನ್ ರಸೋಯಿ ಆರಂಭಿಸಿದ್ದಾರೆ. ಬಡವರು ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಪರಿಶುದ್ಧ ಆಹಾರ ಹಾಗೂ ಹೋಲ್ ಸೆಲ್ ದರದಲ್ಲಿ 1 ರುಗೆ ಊಟ ನೀಡುವುದು ಜನ್ ರಸೊಯಿ ಉದ್ದೇಶವಾಗಿದೆ.
ಮೊದಲ ಜನ್ ರಸೊಯಿಯನ್ನು ಪೂರ್ವ ದೆಹಲಿ ಕ್ಷೇತ್ರದ ಗಾಂಧಿ ನಗರ ಮಾರುಕಟ್ಟೆ ಪ್ರದೇಶದಲ್ಲಿ ಕಳೆದ ಡಿಸೆಂಬರ್ ತಿಂಗಳಲ್ಲಿ ಆರಂಭಿಸಿದ್ದರು. ಸುಮಾರು 50, 000 ಮಂದಿಗೆ ಊಟ ಒದಗಿಸಲಾಗಿದೆ ಎಂದು ಬಿಜೆಪಿ ಸಂಸದರ ಕಚೇರಿ ಹೇಳಿದೆ. 365 ದಿನಗಳ ಕಾಲ ಗಂಭೀರ್ ಫೌಂಡೇಶನ್ ಬಡವರಿಗೆ ಉಚಿತವಾಗಿ ಆಹಾರ ಪೂರೈಸಲಾಗುತ್ತಿದೆ.

ಅಶೋಕ್ ನಗರದಲ್ಲಿ ಆರಂಭವಾದ ಹೊಸ ಕ್ಯಾಂಟೀನ್ ಒಮ್ಮೆಗೆ 50 ವ್ಯಕ್ತಿಗಳಿಗೆ ಊಟ ಒದಗಿಸಬಹುದಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬೈಜಯಂತ್ ಪಾಂಡಾ ಹೇಳಿದರು. ಜನ್ ರಸೊಯಿ ಎಂಬುದು ಸಬ್ಸಿಡಿ ದರದ ಕ್ಯಾಂಟೀನ್ ಅಲ್ಲ ಇದೊಂದು ಅಭಿಯಾನ, ನಾನು ಡ್ರಾಮಾ, ಧರಣಿಯಲ್ಲಿ ತೊಡಗಿಕೊಳ್ಳಲು ರಾಜಕೀಯಕ್ಕೆ ಬಂದಿಲ್ಲ, ನೈಜ ಬದಲಾವಣೆ ನಮ್ಮಿಂದಲೇ ಆರಂಭವಾಗಬೇಕು, ನಿರ್ಗತಿಕರಿಗೆ ಆಹಾರ ಒದಗಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ಗಂಭೀರ್ ಹೇಳಿದ್ದಾರೆ.
India's one of major problem is hunger, and the leader like @GautamGambhir provided food supply to the needy just for ₹1, Great work, Great personality,
— D Humorous Soul (@youngly_sane) February 9, 2021
We need more heroes like Gautam Gambhir. #GambhirFightsHunger pic.twitter.com/C8edbdV1Vk
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications