ಪ್ರತಿನಿಧಿಯನ್ನು ನೇಮಿಸಿ ವಿವಾದ ಸೃಷ್ಟಿಸಿದ ಬಿಜೆಪಿ ಸಂಸದ ಸನ್ನಿ ಡಿಯೋಲ್
ನವದೆಹಲಿ, ಜುಲೈ 2: ಪಂಜಾಬ್ನ ಗುರುದಾಸ್ಪುರ ಕ್ಷೇತ್ರದಿಂದ ಮೊದಲ ಬಾರಿಗೆ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿರುವ ಬಾಲಿವುಡ್ ನಟ, ಬಿಜೆಪಿ ಸಂಸದ ವಿವಾದ ಸೃಷ್ಟಿಸಿದ್ದಾರೆ.
ತಾವು ಪ್ರತಿನಿಧಿಸುವ ಕ್ಷೇತ್ರದಲ್ಲಿ ಸನ್ನಿ ಡಿಯೋಲ್ ಪ್ರತಿನಿಧಿಯೊಬ್ಬರನ್ನು ನೇಮಿಸಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ.
ತಮ್ಮ ಲೆಟರ್ಹೆಡ್ನಲ್ಲಿ ಹೇಳಿಕೆ ಹೊರಡಿಸಿರುವ ಸನ್ನಿ ಡಿಯೋಲ್, ಸಿನಿಮಾ ಚಿತ್ರಕಥೆಗಾರನಾಗಿರುವ ಗುರುಪ್ರೀತ್ ಸಿಂಗ್ ಪಲ್ಹೇರಿ ಅವರನ್ನು ತಮ್ಮ ಪ್ರತಿನಿಧಿಯನ್ನಾಗಿ ನೇಮಿಸಿದ್ದಾರೆ. 'ಗುರುಪ್ರೀತ್ ಅವರು ನನ್ನ ಸಂಸದೀಯ ಕ್ಷೇತ್ರದಲ್ಲಿ ಸಭೆಗಳಲ್ಲಿ ಭಾಗವಹಿಸಲಿದ್ದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಹತ್ವದ ಸಂಗತಿಗಳ ಕುರಿತು ಗಮನ ಹರಿಸಲಿದ್ದಾರೆ' ಎಂದು ಸನ್ನಿ ಹೇಳಿದ್ದರು.
ಸನ್ನಿ ಅವರ ನಡೆ ಅವರಿಗೆ ಹೆಚ್ಚಿನ ಮತ ನೀಡಿ ಗೆಲ್ಲಿಸಿದ ಮತದಾರರಿಗೆ ಮಾಡಿರುವ ದ್ರೋಹ ಎಂದು ಕಾಂಗ್ರೆಸ್ ಟೀಕಿಸಿದೆ.

ಸಂಸದನೊಬ್ಬ ತನ್ನ ಪ್ರತಿನಿಧಿಯನ್ನು ನೇಮಿಸಲು ಹೇಗೆ ಸಾಧ್ಯ? ಮತದಾರರು ಸನ್ನಿ ಡಿಯೋಲ್ ಅವರನ್ನು ಸಂಸದರನ್ನಾಗಿ ಆಯ್ಕೆ ಮಾಡಿದ್ದಾರೆ. ಅವರ ಪ್ರತಿನಿಧಿಯನ್ನಲ್ಲ. ತನ್ನ ಪ್ರತಿನಿಧಿಯನ್ನು ಆಯ್ಕೆ ಮಾಡುವ ಮೂಲಕ ಸನ್ನಿ ಡಿಯೋಲ್ ಗುರುದಾಸಪುರ ಕ್ಷೇತ್ರದ ಮತದಾರರಿಗೆ ದ್ರೋಹ ಎಸಗಿದ್ದಾರೆ ಎಂದು ಪಂಜಾಬ್ ಸಚಿವ ಸುಖ್ಜಿಂದರ್ ಸಿಂಗ್ ರಾಂಧವ ಟೀಕಿಸಿದ್ದಾರೆ.
ಏನೂ ಇಲ್ಲದೆ ಇದ್ದರೂ ವಿನಾಕಾರಣ ವಿವಾದ ಸೃಷ್ಟಿಸಲಾಗಿದೆ ಎಂದು ಸನ್ನಿ ಡಿಯೋಲ್ ಹೇಳಿದ್ದಾರೆ.
'ಗುರುದಾಸಪುರದಲ್ಲಿ ನನ್ನ ಕಚೇರಿಯನ್ನು ಪ್ರತಿನಿಧಿಸಲು ಆಪ್ತ ಸಹಾಯಕನನ್ನು ನೇಮಿಸಿದ್ದೇನೆ. ಸಂಸತ್ ಕಲಾಪದಲ್ಲಿ ಭಾಗವಹಿಸಲು ಅಥವಾ ಕೆಲಸ ಮೇಲೆ ಗುರುದಾಸಪುರದಿಂದ ಹೊರಕ್ಕೆ ನಾನು ತೆರಳಿದ್ದಾಗ ಕಾರ್ಯಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುವ ಸಲುವಾಗಿ ಈ ನೇಮಕ ಮಾಡಿದ್ದೇನೆ' ಎಂದು ಸನ್ನಿ ಸ್ಪಷ್ಟೀಕರಣ ನೀಡಿದ್ದಾರೆ.
ತಾವು ಸನ್ನಿ ಅವರ ಬದಲು ಕಾರ್ಯನಿರ್ವಹಿಸುವುದಿಲ್ಲ. ಅವರ ಆಪ್ತ ಸಹಾಯಕನಾಗಿರುವುದಾಗಿ ಗುರುಪ್ರೀತ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. 'ಸಂಸದರ ಅನುಪಸ್ಥಿತಿಯಲ್ಲಿ ಬಿಜೆಪಿಯ ಇತರೆ ಮುಖಂಡರೊಂದಿಗೆ ಅಧಿಕೃತ ಸಭೆಗಳಿಗೆ ಹಾಜರಾಗುತ್ತೇನೆ ಅಷ್ಟೇ. ಗುರುದಾಸಪುರದ ಸಮಸ್ಯೆಗಳ ಕುರಿತು ಗಮನ ಹರಿಸುವ ಸಲುವಾಗಿ ನನ್ನ ಸಿನಿಮಾ ವೃತ್ತಿಯಿಂದ ವಿರಾಮ ತೆಗೆದುಕೊಳ್ಳುತ್ತಿದ್ದೇನೆ' ಎಂದು ಹೇಳಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications