ಸೈನಿಕರ ಬಲಿದಾನವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಬಿಜೆಪಿ: ರಾಹುಲ್ ಗಾಂಧಿ
ನವದೆಹಲಿ, ಪೆಭ್ರವರಿ 27: ಸೈನಿಕರ ಬಲಿದಾನವನ್ನು ಬಿಜೆಪಿ ನಾಯಕರು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿದೆ.
21 ವಿರೋಧ ಪಕ್ಷಗಳ ಮುಖಂಡರು ಇಂದು ದೆಹಲಿಯಲ್ಲಿ ಸಭೆ ನಡೆಸಿದರು. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿಯು ಪರಿಸ್ಥಿತಿಯನ್ನು ರಾಜಕೀಯ ಲಾಭಕ್ಕೆ ಬಳಸುತ್ತಿರುವುದನ್ನು ವಿರೋಧ ಪಕ್ಷಗಳು ವಿರೋಧಿಸುತ್ತವೆ ಎಂದು ಹೇಳಿದರು.
ಸಭೆಯಲ್ಲಿ ನಡೆದ ಚರ್ಚೆಗಳ ಮಾಹಿತಿ ನೀಡಿದ ಅವರು, ಮೋದಿ ಅವರು ಪ್ರಧಾನಿಯಾಗಿ ಸರ್ವಪಕ್ಷಗಳ ಸಭೆ ಕರೆಯಬೇಕಿತ್ತು, ಈ ರೀತಿಯ ತುರ್ತು ಸನ್ನಿವೇಶದಲ್ಲಿ ಹಿಂದಿನಿಂದಲೂ ಇದನ್ನು ಆಡಳಿತಾತ್ಮಕವಾಗಿಯೇ ಮಾಡಿಕೊಂಡು ಬರಲಾಗಿದೆ ಆದರೆ ಅದನ್ನು ಅವರು ಮಾಡಲಿಲ್ಲ ಎಂದು ರಾಹುಲ್ ಹೇಳಿದರು.

ಚಂದ್ರಬಾಬು ನಾಯ್ಡು, ಶರದ್ ಪವಾರ್, ಮಮತಾ ಬ್ಯಾನರ್ಜಿ ಸೇರಿ 21 ಪಕ್ಷಗಳು ಭಾಗವಹಿಸಿದ್ದ ಸಭೆಯಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ನಾಪತ್ತೆ ಆಗಿರುವ ವಾಯು ಸೇನೆಯ ವಿಂಗ್ ಕಮಾಂಡರ್ ಅವರು ಶೀಘ್ರವಾಗಿ ಮರಳಿ ಬರಲಿ ಎಂದು ಸಭೆಯಲ್ಲಿ ಪ್ರಾರ್ಥಿಸಲಾಯಿತು. ಹಾಗೂ ಪಾಕ್ ಮೇಲೆ ದಾಳಿ ನಡೆಸಿದ ವಾಯುಪಡೆಯ ಸೈನಿಕರ ಶೌರ್ಯಕ್ಕೆ ಅಭಿನಂದನೆ ಸಲ್ಲಿಸಲಾಯಿತು ಎಂದು ರಾಹುಲ್ ಹೇಳಿದರು.
ಭಯೋತ್ಪಾದನೆಯ ವಿರುದ್ಧ ಕೇಂದ್ರ ತೆಗೆದುಕೊಳ್ಳುವ ನಿರ್ಣಯಕ್ಕೆ ವಿರೋಧಪಕ್ಷಗಳು ಬೆಂಬಲ ವ್ಯಕ್ತಪಡಿಸುತ್ತವೆ ಎಂದು ರಾಹುಲ್ ಮೋದಿ ಅವರು ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜತಾಂತ್ರಿಕ ನಿರ್ಣಯ ಕೈಗೊಳ್ಳಬೇಕು ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications