ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐದು ರಾಜ್ಯಗಳಲ್ಲಿ ಮುಂದೇನು ಎಂಬ ಚರ್ಚೆಯಲ್ಲಿ ತೊಡಗಿದ ಅಮಿತ್ ಶಾ

By ವಿನೋದ್ ಕುಮಾರ್ ಶುಕ್ಲಾ
|
Google Oneindia Kannada News

Recommended Video

ಐದು ರಾಜ್ಯಗಳಲ್ಲಿ ಮುಂದೇನು ಎಂಬ ಚರ್ಚೆಯಲ್ಲಿ ತೊಡಗಿದ ಅಮಿತ್ ಶಾ | Oneindia Kannada

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ವಿಧಾನಸಭಾ ಚುನಾವಣೆ ನಡೆದ ಐದು ರಾಜ್ಯಗಳಲ್ಲಿನ ಪಕ್ಷದ ಪ್ರಧಾನ ಕಾರ್ಯದರ್ಶಿಗಳನ್ನು ಭೇಟಿ ಮಾಡಿದ್ದಾರೆ. ಚುನಾವಣೋತ್ತರ ಸಮೀಕ್ಷೆಯು ಬಿಜೆಪಿಗೆ ಪೂರಕವಾಗಿಲ್ಲ. ಆ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಮಹತ್ವದ ಜವಾಬ್ದಾರಿ ವಹಿಸಿದ್ದ ಪಕ್ಷದ ಪ್ರಧಾನ ಕಾರ್ಯದರ್ಶಿಗಳನ್ನು ಭೇಟಿ ಮಾಡಿದ್ದಾರೆ.

ಆದರೆ, ಈಗಲೂ ಬಿಜೆಪಿಯು ಈ ರಾಜ್ಯಗಳಲ್ಲಿ ಉತ್ತಮ ಸಾಧನೆ ಮಾಡಲಿದೆ ಎಂಬ ನಂಬಿಕೆಯಲ್ಲೇ ಇದೆ. ಸಮೀಕ್ಷೆಗೆ ಹತ್ತಿರಲ್ಲೇ ಫಲಿತಾಂಶ ಬಂದರೂ ಬಹುತೇಕ ಕಡೆ ಬಿಜೆಪಿಯೇ ಸರಕಾರ ರಚನೆಗೆ ಹತ್ತಿರ ಇರುತ್ತದೆ ಎಂಬ ಆತ್ಮವಿಶ್ವಾಸದಲ್ಲಿದೆ.

ಐದು ರಾಜ್ಯಗಳ ಎಕ್ಸಿಟ್ ಪೋಲ್ ಫಲಿತಾಂಶ : ರಾಜಸ್ಥಾನದಲ್ಲಿ ಬಿಜೆಪಿಗೆ ಮುಖಭಂಗ?ಐದು ರಾಜ್ಯಗಳ ಎಕ್ಸಿಟ್ ಪೋಲ್ ಫಲಿತಾಂಶ : ರಾಜಸ್ಥಾನದಲ್ಲಿ ಬಿಜೆಪಿಗೆ ಮುಖಭಂಗ?

ಇನ್ನು ಸಭೆಯಲ್ಲಿದ್ದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನಾ) ರಾಮ್ ಲಾಲ್ ಮತ್ತು ಇತರ ಪ್ರಧಾನ ಕಾರ್ಯದರ್ಶಿಗಳಾದ ಭೂಪೇಂದ್ರ ಯಾದವ್, ಅರುಣ್ ಸಿಂಗ್ ಹಾಗೂ ಅರುಣ್ ಜೈನ್ ಪ್ರತಿ ರಾಜ್ಯದಲ್ಲಿ ಬಿಜೆಪಿ ಸ್ಥಿತಿ ಬಗ್ಗೆ ಚರ್ಚಿಸಿದ್ದಾರೆ.

Amit Shah

ಇದೇ ವೇಳೆ ಆಯಾ ರಾಜ್ಯಗಳಲ್ಲಿ ಸರಕಾರ ರಚನೆಗೆ ಕೇಸರಿ ಪಕ್ಷಕ್ಕೆ ಅಲ್ಪ ಮತದ ಅಗತ್ಯ ಬಂದಲ್ಲಿ ಯಾರ ಜತೆಗೆ ಮೈತ್ರಿ ಮಾಡಿಕೊಳ್ಳಬಹುದು ಎಂಬ ಸಾಧ್ಯತೆಯನ್ನು ಕೂಡ ಚರ್ಚಿಸಲಾಗಿದೆ. ಮಾಧ್ಯಮಗಳ ಸಮೀಕ್ಷೆಗಳ ಪ್ರಕಾರ ಐದೂ ರಾಜ್ಯಗಳಲ್ಲಿ ಬಿಜೆಪಿಗೆ ಯಾವುದೇ ಅನುಕೂಲ ಸ್ಥಿತಿ ಇಲ್ಲದ ಹಿನ್ನೆಲೆಯಲ್ಲಿ ಅಮಿತ್ ಶಾ ಈ ಸಭೆಯನ್ನು ಕರೆದು ಚರ್ಚೆ ನಡೆಸಿದ್ದಾರೆ.

ಗುಜರಾತ್, ಕರ್ನಾಟಕ ಚುನಾವಣೆಯ ಎಕ್ಸಿಟ್ ಪೋಲ್ ಹೇಳಿದ್ದೇನು, ಫಲಿತಾಂಶ ಬಂದಿದ್ದೇನು?ಗುಜರಾತ್, ಕರ್ನಾಟಕ ಚುನಾವಣೆಯ ಎಕ್ಸಿಟ್ ಪೋಲ್ ಹೇಳಿದ್ದೇನು, ಫಲಿತಾಂಶ ಬಂದಿದ್ದೇನು?

ತಳ ಮಟ್ಟದಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ನೆರವಿನೊಂದಿಗೆ ಐದು ರಾಜ್ಯಗಳ ಬೂತ್ ಮಟ್ಟದ ನಿರ್ವಹಣೆ ಮಾಡಿದ್ದವರು ರಾಮ್ ಲಾಲ್. ಇನ್ನು ಪಕ್ಷದ ಅಧ್ಯಕ್ಷರ ಚುನಾವನೆ ಸಭೆಗಳ ಉಸ್ತುವಾರಿಯನ್ನು ನಿರ್ವಹಿಸಿದವರು ಅನಿಲ್ ಜೈನ್. ಭೂಪೇಂದ್ರ ಯಾದವ್ ಅವರು ಅಮಿತ್ ಶಾ ವಿಶ್ವಾಸಿಗಳಲ್ಲಿ ಒಬ್ಬರು. ಆದ್ದರಿಂದ ಸಭೆಯಲ್ಲಿ ಹಾಜರಿದ್ದರು.

ಈ ಚುನಾವಣೆಯಲ್ಲಿ ಬಿಜೆಪಿಗೆ ಇಂಥ ಸ್ಥಿತಿ ಬರಲು ಕಾರಣ ಏನು ಎಂದು ಕ್ಷೇತ್ರವಾರು ಮಾಹಿತಿಯನ್ನು ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಸಮೀಕ್ಷೆಗಳಲ್ಲಿ ಬಿಜೆಪಿಗೆ ಪ್ರತಿಕೂಲವಾದ ಪರಿಸ್ಥಿತಿ ಉದ್ಭವ ಆಗಬಹುದು ಎಂದು ಬಂದಿದ್ದರೂ ಸರಕಾರ ರಚನೆ ಬಗ್ಗೆ ಅಮಿತ್ ಶಾ ಅವರು ಸಭೆಯಲ್ಲಿ ವಿಶ್ವಾಸ ವ್ಯಕ್ತಪಡಿದ್ದಾರೆ.

English summary
Bharatiya Janata Party (BJP) national president Amit Shah has met with some of the party general secretaries to take stock of the situation post election in five state especially in view of exit polls showing the BJP in a poor shape. The BJP president met with those general secretaries.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X