ಬಿಜೆಪಿ ದೇವರನ್ನಲ್ಲ, ಗೋಡ್ಸೆಯನ್ನು ಪ್ರೀತಿಸುತ್ತೆ : ರಾಹುಲ್ ವ್ಯಂಗ್ಯಭರಿತ ಹಾಸ್ಯ
ನವದೆಹಲಿ, ಮೇ 17 : "ಕಡೆಗೂ ನನಗೆ ಅರ್ಥವಾಗಿದೆ. ಬಿಜೆಪಿ ಮತ್ತು ಆರೆಸ್ಸೆಸ್ ದೇವರನ್ನು ಪ್ರೀತಿಸುವುದಿಲ್ಲ (Are not God-Ke Lovers). ಅವರು ಗೋಡ್ಸೆಯನ್ನು ಪ್ರೀತಿಸುತ್ತಾರೆ (They are God-Se Lovers)" ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ವ್ಯಂಗ್ಯವಾಡಿದ್ದಾರೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಮಹಾತ್ಮಾ ಗಾಂಧಿಯನ್ನು ಕೊಂಡಿದ್ದ ನಾಥೂರಾಮ್ ಗೋಡ್ಸೆಯನ್ನು, ಮಧ್ಯ ಪ್ರದೇಶದ ಭೋಪಾಲದಿಂದ ಸ್ಪರ್ಧಿಸುತ್ತಿರುವ ಪ್ರಗ್ಯಾ ಸಿಂಗ್ ಠಾಕೂರ್ ಅವರು 'ದೇಶಭಕ್ತ' ಎಂದು ಬಣ್ಣಿಸಿದ್ದು ವಿವಾದದ ಬಿರುಗಾಳಿಯನ್ನೇ ಎಬ್ಬಿಸಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಮೇಲಿನಂತೆ ವರ್ಣಿಸಿ ಹಾಸ್ಯಪ್ರಜ್ಞೆ ಮೆರೆದಿದ್ದಾರೆ.
ಪ್ರಗ್ಯಾ ಸಿಂಗ್ ಠಾಕೂರ್ ಅವರ ಈ ಹೇಳಿಕೆಗೆ ಪ್ರತಿರೋಧ ವ್ಯಕ್ತವಾಗುತ್ತಿದ್ದಂತೆ, ಬಿಜೆಪಿ ಕೂಡ ಪ್ರಗ್ಯಾ ಸಿಂಗ್ ರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಕೂಡ, ನಾನು ಪ್ರಗ್ಯಾ ಸಿಂಗ್ ರನ್ನು ಯಾವತ್ತೂ ಕ್ಷಮಿಸುವುದಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಆದರೂ, ಕಾಂಗ್ರೆಸ್ಸಿನ ಆಕ್ರೋಶ ತಣಿದಂತೆ ಕಾಣಿಸುತ್ತಿಲ್ಲ. ದೇಶದ ಜನರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಮತ್ತು ಅಸಲಿ ದೇಶಭಕ್ತರನ್ನು ಅವಮಾನ ಮಾಡಿದ ಪ್ರಗ್ಯಾ ಸಿಂಗ್ ರನ್ನು ಪಕ್ಷದಿಂದಲೇ ಕಿತ್ತುಹಾಕಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇಂಥ ವ್ಯಕ್ತಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಅವಕಾಶ ಮಾಡಿಕೊಟ್ಟಿದೆ ಎಂದು ಟೀಕಾಪ್ರಹಾರ ಮಾಡುತ್ತಿದೆ.
ನಾಥೂರಾಮ್ ಗೋಡ್ಸೆಯ ಬಗ್ಗೆ ಚರ್ಚೆ ಆರಂಭವಾಗಿದ್ದು, ತಮಿಳುನಾಡಿನ ನಟ ಕಮಲ್ ಹಾಸನ್ ಅವರು ಪ್ರಚಾರ ಸಭೆಯೊಂದರಲ್ಲಿ, ಮಹಾತ್ಮಾ ಗಾಂಧಿಯನ್ನು ಕೊಂದಿದ್ದ ನಾಥೂರಾಮ್ ಗೋಡ್ಸೆ ಅವರು ಸ್ವತಂತ್ರ ಭಾರತದ ಪ್ರಥಮ ಹಿಂದೂ ಭಯೋತ್ಪಾದಕ ಎಂದು ಬಣ್ಣಿಸಿದ ನಂತರ. ಪ್ರಜಾಪ್ರಭುತ್ವಕ್ಕೆ ಮಾನ್ಯತೆ ಇರುವ ಭಾರತದಲ್ಲಿ ಯಾರು ಏನು ಬೇಕಾದರೂ ಹೇಳಲು ಅವಕಾಶವಿದೆ.
ಈ ಹೇಳಿಕೆ ಹೊರಬಿದ್ದ ನಂತರ, ಪ್ರಬಲ ಹಿಂದೂತ್ವವಾದಿಯಾಗಿದ್ದ ನಾಥೂರಾಮ್ ಗೋಡ್ಸೆ ಭಯೋತ್ಪಾದಕನಾ ಅಥವಾ ಕೊಲೆಗಾರನಾ ಅಥವಾ ದೇಶಭಕ್ತನಾ ಇತ್ಯಾದಿ ಚರ್ಚೆಗಳು ಆರಂಭವಾದವು. ಗೋಡ್ಸೆ ಗಾಂಧಿಯನ್ನು ಕೊಂದಿರಬಹುದು ಆದರೆ ಆತ ಹಿಂದೂ ಉಗ್ರನಾಗಲು ಹೇಗೆ ಸಾಧ್ಯ ಎಂದು ಹಲವಾರು ಜನರು ವ್ಯಾಖ್ಯಾನ ನೀಡಲು ಶುರುಮಾಡಿದರು.
ನಾಥೂರಾಮ್ ಗೋಡ್ಸೆ ದೇಶಭಕ್ತನೆಂದು ಸಾಧ್ವಿ ಪ್ರಗ್ಯಾ ಠಾಕೂರ್ ಮಾತ್ರವಲ್ಲ, ಕರ್ನಾಟಕದ ಸಂಸದರಾದ ಉತ್ತರ ಕನ್ನಡದ ಎಂಪಿ ಅನಂತ್ ಕುಮಾರ್ ಹೆಗಡೆ ಮತ್ತು ದಕ್ಷಿಣ ಕನ್ನಡದ ಎಂಪಿ ನಳಿನ್ ಕುಮಾರ್ ಕಟೀಲ್ ಅವರು ಕೂಡ ಟ್ವೀಟ್ ಮಾಡಿ ವಿವಾದಕ್ಕೆ ಸಿಲುಕಿದ್ದರೆ. ಅವರಿಬ್ಬರಿಗೂ ಬಿಜೆಪಿ ತರಾಟೆಗೆ ತೆಗೆದುಕೊಂಡ ನಂತರ ಇಬ್ಬರೂ ಕ್ಷಮೆ ಕೋರಿದ್ದು, ತಮ್ಮ ಟ್ವಿಟ್ಟರ್ ಖಾತೆಯನ್ನು ಯಾರೋ ಹ್ಯಾಕ್ ಮಾಡಿದ್ದರು ಎಂದು ಸ್ಪಷ್ಟನೆ ನೀಡಿದ್ದರು.
ಲೋಕಸಭೆ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ನಾಥೂರಾಮ್ ಗೋಡ್ಸೆ ವಿಷಯಕ್ಕೆ ಸಂಬಂಧಿಸಿದಂತೆ ಅನಗತ್ಯವಾದ ಚರ್ಚೆಗಳು ಆರಂಭವಾಗಿವೆ. ಇಂಥ ವಿಷಯಗಳನ್ನು ಬಿಟ್ಟು ಹಲವಾರು ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕಿರುವುದು ಉತ್ತಮ ಅಲ್ಲವೆ?
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications