''ಕಾಶ್ಮೀರ ಫೈಲ್ ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಲು ಬಿಜೆಪಿ ಅಗ್ನಿಹೋತ್ರಿಯರನ್ನು ಕೇಳಬೇಕು'': ಅರವಿಂದ್ ಕೇಜ್ರಿವಾಲ್
ನವದೆಹಲಿ ಮಾರ್ಚ್ 25: "ಕೆಲವರು ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೋಟಿಗಟ್ಟಲೆ ಸಂಪಾದಿಸಿದ್ದಾರೆ ಮತ್ತು ನಿಮಗೆ ಕೇವಲ ಪೋಸ್ಟರ್ಗಳನ್ನು ಹಾಕುವ ಕೆಲಸವನ್ನು ನೀಡಲಾಗಿದೆ" ಎಂದು ವಿಧಾನಸಭೆಯಲ್ಲಿ ಬಿಜೆಪಿ ವಿರುದ್ಧ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಶ್ಮೀರಿ ಪಂಡಿತರ ವಲಸೆಯ ನೋವನ್ನು ತೋರಿಸುವ ಚಿತ್ರ 'ದಿ ಕಾಶ್ಮೀರ್ ಫೈಲ್ಸ್' ಮಾರ್ಚ್ 11ರಂದು ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಬಾಕ್ಸ್ ಆಫೀಸ್ನಲ್ಲಿ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಮಧ್ಯೆ, ಅನೇಕ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಈ ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸಲಾಗಿದೆ. ಇವುಗಳಲ್ಲಿ ಬಿಹಾರ, ಮಧ್ಯಪ್ರದೇಶ, ಹರಿಯಾಣ, ಉತ್ತರ ಪ್ರದೇಶ, ಗುಜರಾತ್, ತ್ರಿಪುರಾ, ಗೋವಾ ಮತ್ತು ಉತ್ತರಾಖಂಡ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸಲಾಗಿದೆ.
ಬಿಜೆಪಿ ಶಾಸಕರು ಬುಧವಾರ ನಡೆಯುತ್ತಿರುವ ವಿಧಾನಸಭೆ ಅಧಿವೇಶನಕ್ಕೆ ಅಡ್ಡಿಪಡಿಸಿ ಕಾಶ್ಮೀರ ಫೈಲ್ಗಳನ್ನು ತೆರಿಗೆ ಮುಕ್ತಗೊಳಿಸುವಂತೆ ಒತ್ತಾಯಿಸಿದ್ದರು. ಇದರ ಬೆನ್ನಲ್ಲೆ ಗುರುವಾರ ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಾಶ್ಮೀರ ಫೈಲ್ಗಳನ್ನು ರಾಜ್ಯದಲ್ಲಿ ತೆರಿಗೆ ಮುಕ್ತಗೊಳಿಸಬೇಕೆಂಬ ಭಾರತೀಯ ಜನತಾ ಪಕ್ಷ (ಬಿಜೆಪಿ) ಅವರ ಬೇಡಿಕೆಯ ವಿರುದ್ಧ ವಾಗ್ದಾಳಿ ನಡೆಸಿದರು. ಅದನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಲು ಬಿಜೆಪಿಯು ವಿವೇಕ್ ಅಗ್ನಿಹೋತ್ರಿ ಅವರನ್ನು ಕೇಳಬೇಕು ಮತ್ತು ಪ್ರತಿಯೊಬ್ಬರೂ ಅದನ್ನು ಉಚಿತವಾಗಿ ನೋಡುತ್ತಾರೆ. ಕೆಲವರು ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೋಟಿಗಟ್ಟಲೆ ಸಂಪಾದಿಸಿದ್ದಾರೆ ಮತ್ತು ನಿಮಗೆ (ಪಂಡಿತರು) ಕೇವಲ ಪೋಸ್ಟರ್ಗಳನ್ನು ಹಾಕುವ ಕೆಲಸವನ್ನು ನೀಡಿದ್ದಾರೆ ಎಂದು ಕೇಜ್ರಿವಾಲ್ ವಾಗ್ದಾಳಿ ಮಾಡಿದ್ದಾರೆ.
"ನಮ್ಮನ್ನು ತೆರಿಗೆಮುಕ್ತಗೊಳಿಸುವಂತೆ ಏಕೆ ಕೇಳುತ್ತಿದ್ದೀರಿ? ನಿಮಗೆ ಅಷ್ಟು ಉತ್ಸುಕವಾಗಿದ್ದರೆ, ವಿವೇಕ್ ಅಗ್ನಿಹೋತ್ರಿಯವರಿಗೆ ಕಾಶ್ಮೀರ ಫೈಲ್ ಸಿನಿಮಾವನ್ನು ಯೂಟ್ಯೂಬ್ನಲ್ಲಿ ಹಾಕಲು ಹೇಳಿ. ಆಗ ಎಲ್ಲಾ ಉಚಿತವಾಗಿರುತ್ತದೆ. ಎಲ್ಲರೂ ಅದನ್ನು ಒಂದು ದಿನದಲ್ಲಿ ನೋಡಬಹುದು'' ಎಂಬ ಕೇಜ್ರಿವಾಲ್ ಅವರ ಮಾತು ದೆಹಲಿ ವಿಧಾನಸಭೆ ಸದಸ್ಯರ ನಗು ಮತ್ತು ಡೆಸ್ಕ್ಗಳ ಬಡಿತಕ್ಕೆ ಕಾರಣವಾಯಿತು.

ಚಿತ್ರವೊಂದನ್ನು ತೆರಿಗೆ ಮುಕ್ತ ಮಾಡೋದರಿಂದ ಯಾರಿಗೆ ಲಾಭ ಆಗಲಿದೆ? ತೆರಿಗೆ ಮುಕ್ತ ಮಾಡುವುದು ಏಕೆ? ಇಂತಹ ಅನೇಕ ಪ್ರಶ್ನೆಗಳು ಉದ್ಭವಿಸುತ್ತವೆ. 2017ರಲ್ಲಿ ಜಿಎಸ್ಟಿ ಜಾರಿಗೆ ಬರುವವರೆಗೆ ರಾಜ್ಯ ಸರ್ಕಾರಗಳು ಚಿತ್ರಮಂದಿರಗಳಿಂದ ಮನರಂಜನಾ ತೆರಿಗೆ ಸಂಗ್ರಹ ಮಾಡುತ್ತಿದ್ದವು. ಆದರೆ ಹೊಸ ತೆರಿಗೆ ಜಾರಿಯ ಬಳಿಕ ದೇಶದ ಪ್ರತಿ ರಾಜ್ಯಗಳಲ್ಲಿ ಚಲನಚಿತ್ರ ಟಿಕೆಟ್ಗಳ ಮೇಲೆ ಶೇಕಡಾ 28ರಷ್ಟು ಜಿಎಸ್ಟಿ ವಿಧಿಸಲಾಗುವುದು ಎಂದು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿತು. ಅಲ್ಲದೆ, ಈ ತೆರಿಗೆಯಿಂದ ಬರುವ ಆದಾಯದ ಅರ್ಧದಷ್ಟು ಹಣವನ್ನು ರಾಜ್ಯ ಹಾಗೂ ಕೇಂದ್ರ ಸರಕಾರಗಳು ಹಂಚಿಕೊಳ್ಳಲು ಒಪ್ಪಿಕೊಂಡವು.ಈ ಹೊಸ ನೀತಿಯಿಂದಾಗಿ ನಮ್ಗೆ ಪರಿಹಾರ ಬೇಕು.. ಸಡಿಲಿಕೆ ಬೇಕು ಎಂದು ಚಿತ್ರರಂಗ ಧ್ವನಿ ಎತ್ತಿತು. ಟಿಕೆಟ್ಗೆ ಶೇ.28ರಷ್ಟು ತೆರಿಗೆ ಕಟ್ಟೋದು ತುಂಬಾ ಕಷ್ಟ ಎಂದು ಸರಕಾರಗಳ ಮೇಲೆ ಒತ್ತಡ ಹೇರಿದರು. ಕೇಂದ್ರ ಸರಕಾರ ಈ ಒತ್ತಡಕ್ಕೆ ಮಣಿದು, ಎರಡು ಭಾಗಗಳಾಗಿ ವಿಂಗಡಿಸಿ ತೆರಿಗೆ ಹಾಕುವುದಾಗಿ ಹೇಳಿತು.
ಮೊದಲನೆಯದು: ಥಿಯೇಟರ್ಗಳಲ್ಲಿ ಟಿಕೆಟ್ ದರ 100 ರೂ.ಗಿಂತ ಕಡಿಮೆಯಿದ್ದರೆ 12 ರಷ್ಟು ಜಿಎಸ್ಟಿ
ಎರಡನೆಯದು: ಥಿಯೇಟರ್ ಗಳಲ್ಲಿ ಟಿಕೆಟ್ ಬೆಲೆ 100 ರೂ.ಗಿಂತ ಹೆಚ್ಚಾಗಿದ್ದರೆ ಶೇ.18ರಷ್ಟು ಜಿಎಸ್ಟಿ
ಉದಾಹರಣೆಗೆ ಕರ್ನಾಟಕದಲ್ಲಿ ಯಾವುದೇ ಚಿತ್ರದ ಟಿಕೆಟ್ಗೆ 18 ಪ್ರತಿಶತ ಜಿಎಸ್ಟಿ ವಿಧಿಸಲಾಗುತ್ತಿದೆ ಎಂದು ಇಟ್ಟುಕೊಳ್ಳೋಣ. ರಾಜ್ಯ ಸರಕಾರ ಸಿನೆಮಾವೊಂದಕ್ಕೆ ತೆರಿಗೆ ಮುಕ್ತ ಘೋಷಿಸಿದ ಬಳಿಕ ತೆರಿಗೆ ವ್ಯಾಪ್ತಿಯಿಂದ ತನ್ನ ಪಾಲಿನ ಶೇಕಡಾ 9ರಷ್ಟು ವಿನಾಯಿತಿ ನೀಡಲಾಗಿದೆ ಎಂದು ಅರ್ಥ. ಶೇ. 18ರ ಜಿಎಸ್ಟಿ ಬದಲಿಗೆ 9ರಷ್ಟು ತೆರಿಗೆ ವಿಧಿಸಲಾಗುತ್ತದೆ. ಹಾಗಾಗಿ ವಿಧಿಸುತ್ತಿರುವ ಶೇ.9ರಷ್ಟು ತೆರಿಗೆಯೂ ಕೇಂದ್ರದ ಪಾಲಾಗಿರುತ್ತದೆ. ಸರಳ ಭಾಷೆಯಲ್ಲಿ ಹೇಳೋದಾದ್ರೆ, ರಾಜ್ಯವು ತನ್ನ ಪಾಲಿನ ತೆರಿಗೆಯ ಶೇಕಡಾ 50 ರಷ್ಟು ಮಾತ್ರ ಮನ್ನಾ ಮಾಡುವ ಹಕ್ಕು ಹೊಂದಿದೆ. ಹೀಗಾಗಿ, ಈ ತೆರಿಗೆ ಲಾಭ ಪ್ರೇಕ್ಷಕರಿಗೆ ದೊರೆಯಲಿದೆ. ಸಾಮಾನ್ಯವಾಗಿ ಸ್ಪೂರ್ತಿದಾಯಕ, ಸ್ವಾತಂತ್ರ್ಯ ಹೋರಾಟಗಾರರು, ಕೋಮು ಸೌಹಾರ್ದತೆ ಉತ್ತೇಜಿಸುವ, ಸಮಾಜದ ಮೇಲೆ ಉತ್ತಮ ಪರಿಣಾಮ ಬೀರುವ ಚಲನಚಚಿತ್ರಗಳಿಗೆ ತೆರಿಗೆ ಮುಕ್ತ ಘೋಷಿಸುವ ಅಧಿಕಾರ ರಾಜ್ಯ ಸರಕಾರಕ್ಕೆ ಬಿಟ್ಟದ್ದು.
Recommended Video
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ಕಾಶ್ಮೀರ್ ಫೈಲ್ಸ್' ಬಿಡುಗಡೆಯಾದ ದಿನದಿಂದ ದೇಶದ ಗಮನ ಸೆಳೆದಿದೆ. ಬಾಕ್ಸಾಫೀಸ್ನಲ್ಲಿ ನಿರೀಕ್ಷೆಗೂ ಮೀರಿ ಅತ್ಯುತ್ತಮ ಗಳಿಕೆ ಮಾಡುತ್ತಿರುವ ಚಿತ್ರದ ಒಟ್ಟಾರೆ ಕಲೆಕ್ಷನ್ 190 ಕೋಟಿ ರೂ ದಾಟಿದೆ. 1990ರಲ್ಲಿ ಕಾಶ್ಮೀರದಲ್ಲಿ ನಡೆದ ಘಟನೆಗಳು, ಕಾಶ್ಮೀರಿ ಪಂಡಿತರ ವಲಸೆ ಮೊದಲಾದ ಘಟನೆಗಳನ್ನು ಆಧರಿಸಿ ಚಿತ್ರ ತಯಾರಾಗಿದೆ. ಅನುಪಮ್ ಖೇರ್, ಪಲ್ಲವಿ ಜೋಶಿ, ಮಿಥುನ್ ಚಕ್ರವರ್ತಿ, ದರ್ಶನ್ ಕುಮಾರ್, ಪ್ರಕಾಶ್ ಬೆಳವಾಡಿ ಮೊದಲಾದ ತಾರೆಯರು ಚಿತ್ರದಲ್ಲಿ ಬಣ್ಣಹಚ್ಚಿದ್ದಾರೆ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ತೀವ್ರ ಚರ್ಚೆಯನ್ನೂ ಹುಟ್ಟುಹಾಕಿದೆ. ರಾಜಕೀಯ ನೇತಾರರೂ ಸೇರಿದಂತೆ ಅಧಿಕಾರಿಗಳು, ಸಿನಿಮಾ ಪ್ರೇಮಿಗಳು ಚಿತ್ರವನ್ನು ಬಗೆಬಗೆಯಲ್ಲಿ ವ್ಯಾಖ್ಯಾನಿಸುತ್ತಿದ್ದಾರೆ.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications