ಬಿಜೆಪಿಯೇತರ ಸರ್ಕಾರಗಳನ್ನು ಉರುಳಿಸಲು 6,300 ಕೋಟಿ ಖರ್ಚು ಮಾಡಲಾಗಿದೆ: ಕೇಜ್ರಿವಾಲ್
ನವದೆಹಲಿ, ಆಗಸ್ಟ್ 27: ದೇಶದಲ್ಲಿ ಇತರ ಪಕ್ಷಗಳ ಸರ್ಕಾರಗಳನ್ನು ಉರುಳಿಸಲು ಬಿಜೆಪಿ 6,300 ಕೋಟಿ ಖರ್ಚು ಮಾಡಿದೆ. ಈ ಕೆಲಸ ಮಾಡದಿದ್ದರೆ ಆಹಾರ ಪದಾರ್ಥಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿಧಿಸುವ ಅಗತ್ಯ ಇರಲಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ವ್ಯಂಗ್ಯವಾಡಿದ್ದಾರೆ.
ಕೇಜ್ರಿವಾಲ್ ಅವರು ಬಿಜೆಪಿಯನ್ನು ರಾಜ್ಯ ಸರ್ಕಾರಗಳ ಸರಣಿ ಕೊಲೆಗಾರ ಎಂದು ಕರೆದ ಒಂದು ದಿನದ ನಂತರ ಈ ಆರೋಪವನ್ನು ಶನಿವಾರ ಮಾಡಿದ್ದಾರೆ. ದೆಹಲಿಯ ವಿಧಾನಸಭೆಯಲ್ಲಿ ತಮ್ಮ ಭಾಷಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಜಿಎಸ್ಟಿ ಮತ್ತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಹೆಚ್ಚಳದ ಮೂಲಕ ಸಂಗ್ರಹಿಸಿದ ಹಣವನ್ನು ಶಾಸಕರನ್ನು ಬೇಟೆ ಮಾಡಲು ಬಿಜೆಪಿ ಬಳಸುತ್ತಿದೆ ಎಂದು ಆರೋಪಿಸಿದರು.
ಬಿಜೆಪಿಯು ಇತರ ಪಕ್ಷಗಳ ಶಾಸಕರನ್ನು ಬೇಟೆಯಾಡಲು ಮತ್ತು ರಾಜ್ಯಗಳಲ್ಲಿ ಅವರ ಸರ್ಕಾರಗಳನ್ನು ಬೀಳಿಸಲು ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಈ ಬೆಲೆ ಏರಿಕೆಯ ಭಾರವನ್ನು ಜನರು ಎದುರಿಸುತ್ತಿದ್ದಾರೆ. ಮೊಸರು, ಮಜ್ಜಿಗೆ, ಜೇನುತುಪ್ಪ, ಗೋಧಿ, ಅಕ್ಕಿ ಇತ್ಯಾದಿಗಳ ಮೇಲೆ ವಿಧಿಸಲಾಗಿರುವ ಜಿಎಸ್ಟಿಯಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 7,500 ಕೋಟಿ ಆದಾಯ ಬರಲಿದೆ ಎಂದು ಹಿಂದಿಯಲ್ಲಿಯೂ ಟ್ವೀಟ್ ಮಾಡಿ ಕೇಜ್ರಿವಾಲ್ ಹೇಳಿದ್ದಾರೆ.
ಬೇರೆ ಪಕ್ಷದ ಸರ್ಕಾರಗಳನ್ನು ಉರುಳಿಸಲು ಬಿಜೆಪಿಯವರು ಇಲ್ಲಿಯವರೆಗೆ 6,300 ಕೋಟಿ ಖರ್ಚು ಮಾಡಿದ್ದಾರೆ. ಅವರು ಸರ್ಕಾರಗಳನ್ನು ಉರುಳಿಸದಿದ್ದರೆ ಗೋಧಿ, ಅಕ್ಕಿ, ಮಜ್ಜಿಗೆ ಇತ್ಯಾದಿಗಳ ಮೇಲೆ ಜಿಎಸ್ಟಿ ವಿಧಿಸಬೇಕಾಗಿರಲಿಲ್ಲ. ಜನರು ಹಣದುಬ್ಬರವನ್ನು ಎದುರಿಸಬೇಕಾಗಿಲ್ಲ ಎಂದು ಕೇಜ್ರಿವಾಲ್ ಅವರು ವಾಗ್ದಾಳಿ ನಡೆಸಿದರು.
ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರ ಶಿಫಾರಸಿನ ಮೇರೆಗೆ ದೆಹಲಿ ಸರ್ಕಾರದ ಅಬಕಾರಿ ನೀತಿಯ ಅನುಷ್ಠಾನದಲ್ಲಿನ ನಡೆದಿರುವ ಅಕ್ರಮಗಳ ಆರೋಪದ ಮೇಲೆ ಸಿಬಿಐ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ ನಂತರ ಎಎಪಿ ಮತ್ತು ಬಿಜೆಪಿ ನಡುವಿನ ರಾಜಕೀಯ ಜಗಳ ತೀವ್ರಗೊಂಡಿದೆ.

ನಕಲಿ ಪ್ರಕರಣದಲ್ಲಿ ಸಿಲುಕಿಸುವ ಯತ್ನ
ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 19ರಂದು ತನಿಖಾ ಸಂಸ್ಥೆ ಸಿಬಿಐ ರಾಜಧಾನಿಯಲ್ಲಿರುವ ಮನೀಶ್ ಸಿಸೋಡಿಯಾ ಅವರ ನಿವಾಸ ಮತ್ತು ದೇಶದ ಇತರ 30 ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರ ಹೆಚ್ಚುತ್ತಿರುವ ಜನಪ್ರಿಯತೆ ಮತ್ತು ಅವರ ಆಡಳಿತದ ಮಾದರಿಯಿಂದ ಬಿಜೆಪಿಯು ಸಿಟ್ಟಾಗಿರುವ ಕಾರಣ, ಸಿಸೋಡಿಯಾ ಅವರನ್ನು ನಕಲಿ ಪ್ರಕರಣದಲ್ಲಿ ಸಿಲುಕಿಸುವ ಮೂಲಕ ಅವರ ಇಮೇಜ್ ಅನ್ನು ಕೆಡಿಸಲು ಕೇಂದ್ರವು ಸಿಬಿಐ ಅನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಎಎಪಿ ಆರೋಪಿಸಿದೆ.

ಸಿಸೋಡಿಯಾಗೆ ದೆಹಲಿಯ ಮುಖ್ಯಮಂತ್ರಿ ಆಫರ್
ಸಿಬಿಐ ದಾಳಿಯ ಒಂದು ದಿನದ ನಂತರ ಮನೀಶ್ ಸಿಸೋಡಿಯಾ ಅವರು, ತಮ್ಮ ವಿರುದ್ಧದ ಎಲ್ಲಾ ಭ್ರಷ್ಟಾಚಾರ ಆರೋಪಗಳನ್ನು ಕೈಬಿಡಲು ಮತ್ತು ಅವರು ಎಎಪಿ ಪಕ್ಷವನ್ನು ಬದಲಿಸಿ ಬಿಜೆಪಿಗೆ ಸೇರಿದರೆ ಅವರನ್ನು ದೆಹಲಿಯ ಮುಖ್ಯಮಂತ್ರಿಯಾಗಿ ನೇಮಿಸುವ ಪ್ರಸ್ತಾಪದೊಂದಿಗೆ ಬಿಜೆಪಿಯು ತನ್ನನ್ನು ಸಂಪರ್ಕಿಸಿದೆ ಎಂದು ಹೇಳಿಕೊಂಡಿದ್ದಾರೆ.

ಎಎಪಿಯ 40 ಶಾಸಕರಿಗೆ ಇಂತಹ ಆಫರ್
ಮುಂದುವರಿದು ಎಎಪಿ ನಾಲ್ವರು ಶಾಸಕರು, ಬಿಜೆಪಿಗೆ ಸೇರಿದರೆ ತಲಾ 20 ಕೋಟಿ ನೀಡುವುದಾಗಿ ಬಿಜೆಪಿ ನಾಯಕರು ತಮ್ಮನ್ನು ಸಂಪರ್ಕಿಸಿದ್ದಾರೆ. ಇಲ್ಲದಿದ್ದರೆ ಅವರು ಸಹ ನಕಲಿ ಪ್ರಕರಣಗಳು, ಸಿಬಿಐ ಮತ್ತು ಇಡಿಯನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿಕೊಂಡರು. ಅಲ್ಲದೆ ಬಿಜೆಪಿಯು ತನ್ನ 40 ಶಾಸಕರನ್ನು ಇಂತಹ ಆಫರ್ಗಳೊಂದಿಗೆ ಸಂಪರ್ಕಿಸಿದೆ. ದೆಹಲಿಯಲ್ಲಿ ಕೇಜ್ರಿವಾಲ್ ಸರ್ಕಾರವನ್ನು ಉರುಳಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನಿಸುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಎಎಪಿ ಸುಳ್ಳು
ದೆಹಲಿ ಅಸೆಂಬ್ಲಿಯಲ್ಲಿ ತಮ್ಮ ಭಾಷಣದಲ್ಲಿ, ಕೇಜ್ರಿವಾಲ್ ಅವರು ಬಿಜೆಪಿಯು ದೇಶಾದ್ಯಂತ ಇದುವರೆಗೆ 277 ಶಾಸಕರನ್ನು ಖರೀದಿಸಿದೆ ಎಂದು ಆರೋಪಿಸಿದರು. ಆದರೆ ಇದಕ್ಕೆ ಬಿಜೆಪಿ ಮನೀಶ್ ಸಿಸೋಡಿಯಾ ವಿರುದ್ಧದ ಭ್ರಷ್ಟಾಚಾರ ಆರೋಪಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಎಎಪಿ ಸುಳ್ಳು ಹೇಳಿಕೆಗಳನ್ನು ಮಾಡಿದೆ ಎಂದು ಬಿಜೆಪಿ ಆರೋಪ ಮಾಡಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications