ಬಿಜೆಪಿ ಸಂಸದರಿಗೆ ಶಿಸ್ತಿನ ಪಾಠ: ಕಾರ್ಯಾಗಾರಕ್ಕೆ ಹಾಜರಿ ಕಡ್ಡಾಯ
ನವದೆಹಲಿ, ಆಗಸ್ಟ್ 3: ಬಿಜೆಪಿ ತನ್ನ ಸಂಸದರಿಗೆ ಎರಡು ದಿನಗಳ ಕಾಲ ಕಾರ್ಯಾಗಾರ ನಡೆಸುತ್ತಿದೆ. ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಈ ಕಾರ್ಯಾಗಾರ ಆರಂಭವಾಗಿದ್ದು, ಎರಡೂ ದಿನ ಇದರಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ.
ಈ ಕಾರ್ಯಾಗಾರದೊಳಗೆ ಮಾಧ್ಯಮ ಸೇರಿದಂತೆ ಇತರರಿಗೆ ಪ್ರವೇಶವಿಲ್ಲ. ಸದನ ಮತ್ತು ಹೊರಭಾಗದಲ್ಲಿ ನಡವಳಿಕೆಗಳು, ಸಂಸದೀಯ ಪ್ರಕ್ರಿಯೆಗಳು ಮತ್ತು ಸೈದ್ಧಾಂತಿಕ ಸಂಗತಿಗಳ ಕುರಿತು ಮುಚ್ಚಿದ ಬಾಗಿಲಿನಲ್ಲಿ ವಿವಿಧ ಉಪನ್ಯಾಸ, ತರಬೇತಿಗಳು ನಡೆಯಲಿವೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಪಕ್ಷದ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಈ ಕಾರ್ಯಕ್ರಮದ ನೇತೃತ್ವ ವಹಿಸಿದ್ದಾರೆ.

ಜೆಪಿ ನಡ್ಡಾ ಅವರು ಉದ್ಘಾಟನಾ ಭಾಷಣ ಮಾಡಲಿದ್ದಾರೆ. ಸಂಜೆ ಅಮಿತ್ ಶಾ ಅವರು ಸಂಸತ್ನಲ್ಲಿ ಸಂಸದರ ಕರ್ತವ್ಯದ ಕುರಿತು ಮಾತನಾಡಲಿದ್ದಾರೆ. ಬಿಜೆಪಿ ಸಂಸದರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾನುವಾರ ಮಾತನಾಡಲಿದ್ದಾರೆ.
ಬಿಜೆಪಿ 'ಅಭ್ಯಾಸ ವರ್ಗ' ಎಂದು ಕರೆಯಲಾಗುವ ಕಾರ್ಯಕ್ರಮದ ಫೋಟೊಗಳನ್ನು ತೆಗೆಯಲು ಮಾತ್ರ ಮಾಧ್ಯಮದವರಿಗೆ ಅವಕಾಶ ನೀಡಲಾಗುತ್ತದೆ.
ಕೆಲವು ಸಂಸದರು ಸಂಸತ್ನ ಒಳಗೆ ಮತ್ತು ಹೊರಗೆ ತಪ್ಪುಗಳನ್ನು ಎಸಗುವುದು, ವಿಪರೀತ ಹೇಳಿಕೆಗಳನ್ನು ನೀಡುವ ಮೂಲಕ ವಿವಾದ ಸೃಷ್ಟಿಸುವ ಘಟನೆಗಳನ್ನು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕಡ್ಡಾಯ ಕಾರ್ಯಾಗಾರವನ್ನು ಆಯೋಜಿಸಲಾಗುತ್ತಿದೆ.
ಎರಡನೆಯ ಅವಧಿಗೆ ಅಧಿಕಾರಕ್ಕೆ ಬಂದ ಸಂದರ್ಭದಿಂದಲೂ ಪ್ರಧಾನಿ ಮೋದಿ ಅವರು ಸಂಸದರ ಶಿಸ್ತು, ಸಮಯಪರಿಪಾಲನೆ ಮತ್ತು ಸರ್ಕಾರಕ್ಕೆ ಮುಜುಗರವಾಗುವ ರೀತಿಯಲ್ಲಿ ಮನಸಿಗೆ ಬಂದಂತೆ ಹೇಳಿಕೆಗಳನ್ನು ನೀಡುವುದರ ನಿಯಂತ್ರಣದ ಕುರಿತು ನಿರತರವಾಗಿ ಸೂಚನೆಗಳನ್ನು ನೀಡುತ್ತಿದ್ದಾರೆ. ಸಂಸತ್ ಹಾಗೂ ಪಕ್ಷದ ಸಭೆಗಳಲ್ಲಿ ಸಮಯಕ್ಕೆ ಸರಿಯಾಗಿ ಹಾಗೂ ಕಡ್ಡಾಯವಾಗಿ ಹಾಜರಾಗಬೇಕು ಎಂದು ಅವರು ನಿರ್ದೇಶಿಸಿದ್ದಾರೆ.
'ಈ ಬಾರಿ ಹೆಚ್ಚಿನ ಸಂಸದರು ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ. ಅಲ್ಲದೆ, ಬೇರೆ ರಾಜಕೀಯ ಪಕ್ಷದಿಂದ ಬಿಜೆಪಿ ಸೇರಿಕೊಂಡವರೂ ಇದ್ದಾರೆ. ಈ ರೀತಿಯ ಕಾರ್ಯಾಗಾರಗಳು ಪಕ್ಷದ ನೀತಿ ನಿಯಮಗಳ ಕುರಿತು ಅವರಿಗೆ ಪರಿಚಯ ಮಾಡಿಸುವುದು ಮಾತ್ರವಲ್ಲದೆ, ಪಕ್ಷವು ಅವರಿಂದ ಏನನ್ನು ನಿರೀಕ್ಷಿಸುತ್ತದೆ ಎಂಬುದನ್ನೂ ಮನದಟ್ಟು ಮಾಡುತ್ತದೆ' ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications