ಈ ಬಾರಿ ಬಿಜೆಪಿ 2014 ಕ್ಕಿಂತ ಕಡಿಮೆ ಸ್ಥಾನ ಗೆಲ್ಲಲಿದೆ ಎಂದ ಕೇಂದ್ರ ಸಚಿವ
ನವದೆಹಲಿ, ಮೇ 14: ಬಿಜೆಪಿ 2014 ರ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದಕ್ಕಿಂತ ಕಡಿಮೆ ಕ್ಷೇತ್ರಗಳಲ್ಲಿಈ ಬಾರಿ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ.
ಮಹಾರಾಷ್ಟ್ರದ ದಲಿತ ಮುಖಂಡ, ಭಾರತೀಯ ರಿಪಬ್ಲಿಕನ್ ಪಕ್ಷದ ಮುಖಂಡ ಅಠಾವಳೆ 2019 ರ ಲೋಕಸಭೆ ಚುನಾವಣೆಯ ಫಲಿತಾಂಶದ ಕುರಿತು ಭವಿಷ್ಯ ನುಡಿದಿದ್ದಾರೆ.
ಏಳನೇ ಹಂತದ ಚುನಾವಣೆ: ಮೋದಿ ನೇತೃತ್ವದ ಬಿಜೆಪಿಗೆ ಬೆಟ್ಟದಷ್ಟು ಸವಾಲು
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ 2014 ರ ಲೋಕಸಭೆ ಚುನಾವಣೆಯಲ್ಲಿ 42(48)ಕ್ಷೇತ್ರಗಳಲ್ಲಿ ಜಯಗಳಿಸಿತ್ತು. ಆದರೆ ಈ ಬಾರಿ ಅದಕ್ಕಿಂತ ಕಡಿಮೆ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಕಳೆದ ವರ್ಷ ಗೆದ್ದಿದ್ದ ಐದು ಸ್ಥಾನಗಳಲ್ಲಿ ಈ ಬಾರಿ ಸೋಲು ಕಾಣಲಿದೆ ಎಂದಿದ್ದಾರೆ. ಇನ್ನು ಅತ್ಯಧಿಕ ಲೋಕಸಭೆ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲೂ ಬಿಜೆಪಿ ಕಡಿಮೆ ಸ್ಥಾನ ಪಡೆಯಲಿದೆ. ಇಲ್ಲಿ ಬಿಎಸಿ-ಎಸ್ಪಿ ಮತ್ತು ರಾಷ್ಟ್ರೀಯ ಲೋಕದಳ ಪಕ್ಷಗಳು ಮೈತ್ರಿ ಮಾಡಿಕೊಂಡಿರುವುದರಿಂದ ಬಿಜೆಪಿಗೆ ನಷ್ಟವಾಗಲಿದೆ ಎಂದು ಅವರು ಹೇಳಿದ್ದಾರೆ.
ಇಲ್ಲಿ ಗೆದ್ದ ಪಕ್ಷವೇ ಕೇಂದ್ರದಲ್ಲಿ ಸರ್ಕಾರ ರಚಿಸುವುದು ಗ್ಯಾರಂಟಿ!
ಇತ್ತೀಚೆಗಷ್ಟೇ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಬಿಜೆಪಿ ಮುಖಂಡ ರಾಮ್ ಮಾಧವ್ ಸಹ ಬಿಜೆಪಿ ಈ ಬಾರಿ ಬಹುಮತ ಪಡೆಯುವುದು ಅನುಮಾನ. ಆದರೆ ಎನ್ ಡಿಎ ಮೈತ್ರಿಕೂಟದೊಂದಿಗೆ ಸೇರಿ ಬಿಜೆಪಿ ಬಹುಮತಗಳಿಸಿ, ಆಡಳಿತ ನಡೆಸಲಿದೆ ಎಂದಿದ್ದನ್ನು ಇಲ್ಲಿ ಸ್ಮರಿಸಬಹುದು.