'ದೇವರು ದಯಾಮಯಿ', ಕ್ಯಾನ್ಸರ್ ಗೆದ್ದ ರಿಷಿ ಕಪೂರ್
ನವದೆಹಲಿ, ಮೇ 03: ಬಾಲಿವುಡ್ ನ ಹಿರಿಯ, ಪ್ರಸಿದ್ಧ ನಟ ರಿಷಿ ಕಪೂರ್ ಅವರು ಕ್ಯಾನ್ಸರ್ ರೋಗದಿಂದ ಗುಣಮುಖರಾಗಿದ್ದಾರೆ ಎಂದು ಸ್ವತಃ ಅವರೇ ತಿಳಿಸಿದ್ದಾರೆ.
ಅವರು ಕಳೆದ ಒಂದು ವರ್ಷದಿಂದ ಅಮೆರಿಕದ ನ್ಯೂಯಾರ್ಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದುವರೆಗೂ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ಎಲ್ಲಿಯೂ ಅವರಾಗಲೀ, ಕುಟುಂಬದ ಇತರರಾಗಲೀ ಅಧಿಕೃತವಾಗಿ ಹೇಳಿಕೆ ನೀಡಿರಲಿಲ್ಲ.
ಆದರೆ ರೋಗ ಗುಣಮುಖವಾದ ನಂತರ ಇದೀಗ ರಿಷಿ ಕಪೂರ್ ಅವರೇ ತಮಗೆ ಕ್ಯಾನ್ಸರ್ ಇದ್ದಿದ್ದು ನಿಜ ಎಂದಿದ್ದಾರೆ. ದಿನಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.

"ಕಳೆದ ಎಂಟು ತಿಂಗಳಿನಿಂದ ನಾನು ಚಿಕಿತ್ಸೆ ಪಡೆಯುತ್ತಿದ್ದೆ. ದೇವರು ದಯಾಮಯಿ. ನಾನೀಗ ಕ್ಯಾನ್ಸರ್ ನಿಂದ ಮುಕ್ತಿ ಪಡೆದಿದ್ದೇನೆ" ಎಂದು ಅವರು ಹೇಳಿದ್ದಾರೆ.
"ನಾನು ಇನ್ನೆರಡು ತಿಂಗಳಿನಲ್ಲಿ ಬೋನ್ ಮ್ಯಾರೋ ಕಸಿ ಚಿಕಿತ್ಸೆಗೆ ಒಳಪಡಬೇಕಿದೆ. ಕ್ಯಾನ್ಸರ್ ಚಿಕಿತ್ಸೆಯ ಸಮಯದಲ್ಲಿ ನನ್ನೊಂದಿಗಿದ್ದ ನನ್ನ ಕುಟುಂಬ ಮತ್ತು ನನಗಾಗಿ ಪ್ರಾರ್ಥಿಸಿದ ಎಲ್ಲಾ ಅಭಿಮಾನಿಗಳಿಗೂ, ಸ್ನೇಹಿತರಿಗೂ ನಾನು ಕೃತಜ್ಞ. ನಾನು ಗುಣಮುಖವಾಗಿದ್ದಕ್ಕೆ ನಿಮ್ಮ ಪ್ರಾರ್ಥನೆಯೇ ಕಾರಣ" ಎಂದು ರಿಷಿ ಕಪೂರ್ ಹೇಳಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬಾಲಿವುಡ್ ನಟಿ ಸೋನಾಲಿ ಬೇಂದ್ರೆ ಇತ್ತೀಚೆಗಷ್ಟೇ ನ್ಯೂಯಾರ್ಕ್ ನಲ್ಲಿ ಚಿಕಿತ್ಸೆ ಮುಗಿಸಿ ವಾಪಸ್ಸಾಗಿರುವುದನ್ನು ಇಲ್ಲಿ ಸ್ಮರಿಸಬಹುದು.
-
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Monalisa: ಕುಂಭಮೇಳ ವೈರಲ್ ಸುಂದರಿ ಮೊನಾಲಿಸಾ ದಂಪತಿಗೆ ಬಿಗ್ ರಿಲೀಫ್: ಬಂಧನಕ್ಕೆ ತಡೆ ನೀಡಿದ ಕೇರಳ ಹೈಕೋರ್ಟ್ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್












Click it and Unblock the Notifications