ಭೂಗತ ಪಾತಕಿ ಛೋಟಾ ರಾಜನ್ಗೆ 8 ವರ್ಷ ಜೈಲು ಶಿಕ್ಷೆ
ನವದೆಹಲಿ, ಆಗಸ್ಟ್ 20: ಹೋಟೆಲ್ ಮಾಲಿಕ ಬಿಆರ್ ಶೆಟ್ಟಿ ಬಳಿ ಸುಲಿಗೆ ಹಾಗೂ ಕೊಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಛೋಟಾ ರಾಜನ್ಗೆ 8 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
ಮಹಾರಾಷ್ಟ್ರದ ಎಂಸಿಓಸಿಎ ನ್ಯಾಯಾಲಯವು ತೀರ್ಪು ಪ್ರಕಟಿಸಿದ್ದು ಛೋಟಾ ರಾಜನ್ ಜೊತೆಗೆ ಇನ್ನೂ ಐವರಿಗೂ ಶಿಕ್ಷೆ ವಿಧಿಸಲಾಗಿದೆ.
ಮೂರನೇ ಪ್ರಕರಣದಲ್ಲಿ ಇದೀಗ ಆತನಿಗೆ ಶಿಕ್ಷೆಯಾಗಿದೆ. ಆತನನ್ನು ಕೆಲವೇ ದಿನಗಳ ಹಿಂದೆ ತಿಹಾರ್ ಜೈಲಿಗೆ ಕಳುಹಿಸಲಾಗಿತ್ತು. ಆತನ ಮೇಲೆ ಕೊಲೆ, ಸುಲಿಗೆ ಸೇರಿದಂತೆ ಹತ್ತಾರು ಪ್ರಕರಣಗಳಿವೆ.

55 ವರ್ಷದ ಭೂಗತ ಪಾತಕಿ ಛೋಟಾ ರಾಜನ್ ಅಲಿಯಾಸ್ ರಾಜೇಂದ್ರ ಸದಾಶಿವ, ನೂರಾರು ಹತ್ಯಾ ಪ್ರಕರಣಗಳಲ್ಲಿ ಆರೋಪಿಯಾಗಿದ್ದ, ಭಾರತೀಯ ಪೊಲೀಸರಿಂದ ರೆಡ್ ಕಾರ್ನರ್ ನೋಟಿಸ್ ಪಡೆದಿದ್ದ, ವಿವಿಧ ವೇಷ ಧರಿಸಿ ತಲೆಮರೆಸಿಕೊಂಡಿದ್ದ ರಾಜನ್ ನಾನಾ ದೇಶಗಳಿಗೆ ಪರಾರಿಯಾಗಿ ಪೊಲೀಸರಿಗೆ ತಲೆನೋವಾಗಿದ್ದ.
ಕೊನೆಗೆ ಸಿಡ್ನಿಯಿಂದ ಬಾಲಿ ಬೀಚ್ ರೆಸಾರ್ಟ್ ಗೆ ರಾಜನ್ ಆಗಮಿಸಿರುವ ಕುರಿತು ಮಾಹಿತಿ ಪಡೆದ ಇಂಡೋನೇಷ್ಯಾ ಪೊಲೀಸರು ಕೂಡಲೇ ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು. ನಂತರ ಆತನನ್ನು ಭಾರತಕ್ಕೆ ಹಸ್ತಾಂತರಿಸಲಾಗಿತ್ತು.
ಅಪರೂಪದ ತನಿಖಾ ಪತ್ರಕರ್ತ ಜ್ಯೋತಿರ್ಮಯ್ ಡೇ ಅಲಿಯಾಸ್ ಜೇ ಡೇ ಹತ್ಯೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್ ದೋಷಿ ಎಂದು ಮುಂಬೈನ ಎಂಕೋಕಾ ನ್ಯಾಯಾಲಯ ತೀರ್ಪು ನೀಡಿತ್ತು.
ದೇಶದ ಮಾಧ್ಯಮ ರಂಗವನ್ನೇ ಬೆಚ್ಚಿ ಬೀಳಿಸಿದ್ದ ಪ್ರಕರಣದಲ್ಲಿ ಪತ್ರಕರ್ತರಾದ ಜಿಗ್ನಾ ವೋರಾ ಮತ್ತು ಜೋಸೆಫ್ ಪೌಲ್ಸೆನ್ ರನ್ನು ಮಾತ್ರ ನ್ಯಾಯಾಲಯ ಖುಲಾಸೆಗೊಳಿಸಿತ್ತು. ಮುಂಬೈನ ಭೂಗತ ಲೋಕದ ಆಳ ಅಗಲಗಳನ್ನು ಅರಿತಿದ್ದ ಜೇ ಡೇ ಹತ್ಯೆ ಪ್ರಕರಣ ಕಳೆದ 7 ವರ್ಷಗಳಿಂದ ತನಿಖಾ ಸಂಸ್ಥೆಗಳಿಗೆ ಕಗ್ಗಂಟಾಗಿಯೇ ಉಳಿದಿತ್ತು. ಇದೀಗ ಮುಂಬೈ ನ್ಯಾಯಾಲಯದ ತೀರ್ಪಿನೊಂದಿಗೆ ಡೇ ಕೊಂದವರು ಯಾರು ಎಂಬುದಕ್ಕೆ ಉತ್ತರ ಸಿಕ್ಕಿತ್ತು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications