ಪ್ರಧಾನಿ ಮೋದಿ ಭದ್ರತಾ ಲೋಪ: ಸುಪ್ರೀಂನಲ್ಲಿ ಇಂದು ವಿಚಾರಣೆ
ನವದೆಹಲಿ, ಜನವರಿ 10: ಪ್ರಧಾನಿಯವರ 'ಭದ್ರತಾ ಲೋಪ' ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು(ಜನವರಿ 10) ನಡೆಸಲಿದೆ.
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಕೈಗೊಂಡ ಭದ್ರತಾ ಕ್ರಮಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುರಕ್ಷಿತವಾಗಿರಿಸಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ಗೆ ಸುಪ್ರೀಂಕೋರ್ಟ್ ಶುಕ್ರವಾರ ನಿರ್ದೇಶನ ನೀಡಿತ್ತು.
Breaking: ಭದ್ರತಾ ಲೋಪ:15 ನಿಮಿಷ ಫ್ಲೈಓವರ್ನಲ್ಲಿ ಸಿಲುಕಿದ ಪ್ರಧಾನಿ ಮೋದಿ
'ಲಾಯರ್ಸ್ ವಾಯ್ಸ್' ಎಂಬ ಸಂಘಟನೆ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸುತ್ತಿದೆ.
ಸುಪ್ರೀಂಕೋರ್ಟ್ನ ತ್ರಿಸದಸ್ಯ ಪೀಠವು ಪ್ರಧಾನಿ ಭೇಟಿಯ ವೇಳೆಯಲ್ಲಾದ ಭದ್ರತಾ ಲೋಪದ ಸಾಕ್ಷ್ಯಗಳನ್ನು ಸಂರಕ್ಷಿಸಲು ಮತ್ತು ತಪ್ಪು ಮಾಡಿದ ಪಂಜಾಬ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ, ಈ ಆದೇಶ ನೀಡಿದೆ.
ಪ್ರಧಾನಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಕೈಗೊಂಡ ಭದ್ರತಾ ಕ್ರಮಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುರಕ್ಷಿತವಾಗಿರಿಸಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ಗೆ ಸುಪ್ರೀಂಕೋರ್ಟ್ ಶುಕ್ರವಾರ ನಿರ್ದೇಶನ ನೀಡಿತ್ತು. ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಪ್ರತ್ಯೇಕವಾಗಿ ರಚಿಸಿರುವ ವಿಚಾರಣಾ ಸಮಿತಿಗಳಿಗೆ ಮುಂದಿನ ವಿಚಾರಣೆವರೆಗೆ ತನಿಖೆ ಮುಂದುವರಿಸದಂತೆ ಸೂಚನೆ ನೀಡಿತ್ತು.
ಪ್ರಧಾನಿ ಮೋದಿಯವರು ಜನವರಿ 5ರಂದು ಪಂಜಾಬ್ ರಾಜ್ಯದಲ್ಲಿ ಓಡಾಡಿದ ಎಲ್ಲಾ ಸ್ಥಳಗಳ ದಾಖಲೆ ಮತ್ತು ಪ್ರಧಾನಿ ಓಡಾಡಲು ಇದ್ದ ಸೌಕರ್ಯಗಳ ದಾಖಲೆಗಳನ್ನು ಸಂಗ್ರಹಿಸುವಂತೆ ಪಂಜಾಬ್ ಹೈಕೋರ್ಟ್ನ ಉನ್ನತ ಅಧಿಕಾರಿಯೊಬ್ಬರಿಗೆ ಸೂಚನೆ ಸಹ ನೀಡಿದೆ.
ಮೋದಿ ಬರುವ ಕುರಿತು ಪಂಜಾಬ್ ಸರ್ಕಾರಕ್ಕೆ ಮೊದಲೇ ತಿಳಿಸಲಾಗಿತ್ತು. ಆದರೂ ಈ ರೀತಿ ಘಟನೆ ನಡೆದಿದೆ, ಈ ಕುರಿತು ಗೃಹ ಸಚಿವಾಲಯ ಪಂಜಾಬ್ ಸರ್ಕಾರದ ಬಳಿ ವರದಿ ಕೇಳಿದೆ.ಹವಾಮಾನ ಸ್ಥಿತಿ ಸುಧಾರಿಸದ ಕಾರಣ, ಅವರು ರಸ್ತೆ ಮೂಲಕವೇ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ನಿರ್ಧರಿಸಿದರು, ಅದಕ್ಕೆ ಸುಮಾರು 2 ಗಂಟೆಗೂ ಅಧಿಕ ಸಮಯ ಹಿಡಿಯುತ್ತಿತ್ತು.ಪಂಜಾಬ್ ಪೊಲೀಸ್ ಡಿಜಿಪಿ ಅವರಿಂದ ಅಗತ್ಯ ಭದ್ರತಾ ಏರ್ಪಾಡುಗಳನ್ನು ಖಾತ್ರಿಪಡಿಸಿಕೊಂಡ ನಂತರ ಅವರು ರಸ್ತೆ ಮೂಲಕ ಪ್ರಯಾಣ ಆರಂಭಿಸಿದರು.
ಆದರೆ ಹುಸ್ಸೈನಿವಾಲಾದ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಸುಮಾರು 30 ಕಿಲೋಮೀಟರ್ ದೂರ ಇದೆ ಎನ್ನುವಾಗ ಪ್ರಧಾನಮಂತ್ರಿಗಳ ಬೆಂಗಾವಲು ವಾಹನ ಮೇಲುಸೇತುವೆ ತಲುಪಿದಾಗ, ಕೆಲವು ಪ್ರತಿಭಟನಾಕಾರರು ರಸ್ತೆಯನ್ನು ಅಡ್ಡಗಟ್ಟಿದ್ದು ( ಬ್ಲಾಕ್ ಮಾಡಿದ್ದು) ಕಂಡು ಬಂದಿತು.
ಪ್ರಧಾನಮಂತ್ರಿ ಸುಮಾರು 15-20 ನಿಮಿಷಗಳ ಕಾಲ ಮೇಲುಸೇತುವೆಯ ಮೇಲೆ ಸಿಲುಕಿಕೊಂಡರು. ಇದು ಪ್ರಧಾನಿಯವರ ಭದ್ರತೆಯಲ್ಲಿ ದೊಡ್ಡ ಲೋಪವಾಗಿದೆ. ಪ್ರಧಾನಮಂತ್ರಿಯವರ ವೇಳಾಪಟ್ಟಿ ಮತ್ತು ಪ್ರಯಾಣ ಯೋಜನೆಯನ್ನು ಮುಂಚಿತವಾಗಿಯೇ ಪಂಜಾಬ್ ಸರ್ಕಾರಕ್ಕೆ ತಿಳಿಸಲಾಗಿತ್ತು. ನಿಗದಿಯಂತೆ, ಅವರು ಪ್ರಯಾಣಕ್ಕೆ,ಭದ್ರತೆಗೆ ಅಗತ್ಯ ಏರ್ಪಾಡುಗಳನ್ನು ಮಾಡಬೇಕಿತ್ತು ಮತ್ತು ಸಂಕಷ್ಟ ಯೋಜನೆಯನ್ನೂ ಸಹ ಸಿದ್ಧಪಡಿಸಿಕೊಳ್ಳಬೇಕಿತ್ತು.
Recommended Video
ಸಂಕಷ್ಟ ಯೋಜನೆಯ ದೃಷ್ಟಿಯಿಂದ ಪಂಜಾಬ್ ಸರ್ಕಾರ ರಸ್ತೆ ಮೂಲಕ ಸುರಕ್ಷಿತ ಸಂಚಾರಕ್ಕೆ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕಿತ್ತು, ಆದರೆ ಆ ರೀತಿ ನಿಯೋಜನೆ ಮಾಡದಿದ್ದುದು ಸ್ಪಷ್ಟವಾಗಿ ಕಂಡುಬಂದಿತು.