'ರಂಜಾನ್ನಲ್ಲಿ ಮುಸ್ಲಿಂ ಸಿಬ್ಬಂದಿಗೆ ಬ್ರೇಕ್' ಆದೇಶವನ್ನು ಹಿಂಪಡೆದ ದೆಹಲಿ ಜಲಮಂಡಳಿ
ನವದೆಹಲಿ ಏಪ್ರಿಲ್ 6: ರಂಜಾನ್ ಸಮಯದಲ್ಲಿ ಎಲ್ಲಾ ಮುಸ್ಲಿಂ ಉದ್ಯೋಗಿಗಳಿಗೆ ಪ್ರತಿದಿನ ಎರಡು ಗಂಟೆಗಳ ಕಾಲ ವಿರಾಮ ನೀಡಿರುವುದನ್ನು ಹಿಂಪಡೆಯಲಾಗಿದೆ. ಜೊತೆಗೆ ಇದನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ದೆಹಲಿ ಜಲ ಮಂಡಳಿ ಮಂಗಳವಾರ ಆದೇಶವನ್ನು ಮಾಡಿದೆ.
ತನ್ನ ಆದೇಶದಲ್ಲಿ ಜನಮಂಡಳಿ ರಂಜಾನ್ ದಿನಗಳಲ್ಲಿ ಮುಸ್ಲಿಂ ಉದ್ಯೋಗಿಗಳಿಗೆ ಅಲ್ಪ ರಜೆ (ದಿನಕ್ಕೆ ಸರಿಸುಮಾರು ಎರಡು ಗಂಟೆಗಳ ಕಾಲ) ನೀಡಿರುವುದನ್ನು ಹಿಂಪಡೆದಿರುವುದಾಗಿ ಏಪ್ರಿಲ್ 4, 2022 ರಂದು ಸುತ್ತೋಲೆ ಹೊರಡಿಸಿದೆ. ಮಾತ್ರವಲ್ಲದೆ ಸುತ್ತೋಲೆ ತಕ್ಷಣವೇ ಜಾರಿಗೆ ಬರುವಂತೆ ಆದೇಶಿಸಿದೆ.
ಸೋಮವಾರ DJB ಮುಸ್ಲಿಂ ಉದ್ಯೋಗಿಗಳಿಗೆ "ರಂಜಾನ್ ಸಮಯದಲ್ಲಿ ಅಂದರೆ ಏಪ್ರಿಲ್ 3 ರಿಂದ ಮೇ 2 ರವರೆಗೆ ಅಥವಾ ರಂಜಾನ್ ಉಪವಾಸದ ದಿನಗಳಲ್ಲಿ ಘೋಷಿಸಿರುವ ಅಲ್ಪ ರಜೆಯನ್ನು (ದಿನಕ್ಕೆ ಸರಿಸುಮಾರು ಎರಡು ಗಂಟೆಗಳ ಕಾಲ) ಅನುಮತಿಸದಂತೆ ನಿರ್ಧರಿಸಿದೆ ಎಂದು ಹೇಳಿದೆ. ಕಚೇರಿ ಕೆಲಸವು ತೊಂದರೆಯಾಗದಂತೆ ನೋಡಿಕೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ. ಜೊತೆಗೆ ಈ ಸಮಯದಲ್ಲಿ ಅವರು ತಮ್ಮ ಕೆಲಸವನ್ನು ಪೂರೈಸುತ್ತಾರೆ ಎಂಬ ಷರತ್ತಿನೊಂದಿಗೆ ಇದನ್ನು ಹಿಂಪಡೆಯಲಾಗಿದೆ" ಎಂದು ಡಿಜೆಬಿ ಹೇಳಿದೆ.

ರಂಜಾನ್ ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ, ಇಸ್ಲಾಂ ಧರ್ಮದ ಅನುಯಾಯಿಗಳು ಮುಂಜಾನೆ ಮತ್ತು ಸೂರ್ಯಾಸ್ತದ ನಡುವೆ ಉಪವಾಸ ಮಾಡುತ್ತಾರೆ, ಶಾಂತಿ ಮತ್ತು ಮಾರ್ಗದರ್ಶನಕ್ಕಾಗಿ ಪ್ರಾರ್ಥಿಸುತ್ತಾರೆ. ದಾನ ಅಥವಾ ಹಿಂದುಳಿದವರಿಗೆ ಆಹಾರ ನೀಡುವಂತಹ ಮಾನವೀಯ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಈ ಮೂಲಕ ಅವರು ಆತ್ಮಾವಲೋಕನ ಮಾಡಿಕೊಳ್ಳುತ್ತಾರೆ. ಈ ಸಂದರ್ಭದಲ್ಲಿ ಅವರಿಗೆ ನೀಡಲಾಗಿದ್ದ ಎರಡು ಗಂಟೆಗಳ ಬಿಡುವಿನ ಸಮಯವನ್ನು ಜಲಮಂಡಳಿ ಹಿಂಪಡೆದುಕೊಂಡಿದೆ.

ದೇಶದಲ್ಲಿ ಹಿಜಾಬ್, ಹಲಾಲ್ ಕಟ್, ಮಸ್ಲಿಂಮರಿಗೆ ಆರ್ಥಿಕ ನಿರ್ಬಂಧ, ಮಸೀದ್ಗಳಲ್ಲಿ ಧ್ವನಿವರ್ಧಕ ನಿಷೇಧದಂತಹ ಬೆಳವಣಿಗಳ ನಡುವೆ ಡಿಜೆಬಿ ಈ ಆದೇಶವನ್ನು ಹೊರಡಿಸಿರುವುದು ಭಾರೀ ಕುತೂಹಲವನ್ನು ಮೂಡಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications