Breaking: ಜೀವ ಬೆದರಿಕೆ: ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ನೂಪುರ್ ಶರ್ಮಾ
ನವದೆಹಲಿ, ಜುಲೈ 18: ಬಿಜೆಪಿಯಿಂದ ಅಮಾನತುಗೊಂಡಿರುವ ನಾಯಕಿ ನೂಪುರ್ ಶರ್ಮಾ ಅವರು ತಮಗೆ ಅತ್ಯಾಚಾರ, ಕೊಲೆ ಯಂತಹ ಜೀವ ಬೆದರಿಕೆ ಕರೆಗಳು ಹೆಚ್ಚಾಗಿವೆ. ಜೀವಕ್ಕಿದ್ದ ಅಪಾಯ ಮತ್ತಷ್ಟು ಹೆಚ್ಚಾಗಿದೆ ಎಂದು ಸೋಮವಾರ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ತಮ್ಮ ವಿರುದ್ಧ ದಾಖಲಾಗಿರುವ ಎಲ್ಲ ಎಫ್ಐಆರ್ ಗಳನ್ನು ದೆಹಲಿಗೆ ವರ್ಗಾಯಿಸುವಂತೆ ಮನವಿ ಮಾಡಿದ್ದಾರೆ. ಅವರ ಬೇಡಿಕೆ ತಿರಸ್ಕರಿ ಕೋರ್ಟ್ ಕಟುವಾಗಿ ಟೀಕಿಸಿತ್ತು. ನೂಪುರ್ ಶರ್ಮಾ ನಾಲಿಗೆ ಹರಿಬಿಟ್ಟಿದ್ದರಿಂದಲೇ ದೇಶಕ್ಕೆ ಬೆಂಕಿ ಹತ್ತಿದೆ ಎಂದಿತ್ತು. ಇದಾದ ಬಳಿಕ ನೂಪುರ್ ಶರ್ಮಾ ಅರ್ಜಿ ಹಿಂಪಡೆದಿದ್ದರು.

ಈಗಾಗಲೇ ನೂಪುರ್ ಶರ್ಮಾ ಅವರ ವಿರುದ್ಧ ವಿವಿಧ ರಾಜ್ಯಗಳಲ್ಲಿ ದೂರು ದಾಖಲಾಗಿವೆ. ಅವರ ವಿರುದ್ಧ ಸಾಕಷ್ಟು ಕಡೆಗಳಲ್ಲಿ ಹಿಂಸಾಚಾರ, ಪ್ರತಿಭಟನೆ ನಡೆದಿತ್ತು. ಇದೀಗ ತಮಗೆ ಅತ್ಯಾಚಾರ, ಕೊಲೆ ಜೀವ ಬೆದರಿಕೆಗಳು ಹೆಚ್ಚಾಗಿವೆ. ತನ್ನ ಜೀವ ಅಪಾಯದಲ್ಲಿದೆ ಎಂದು ಹೇಳಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ರಕ್ಷಣೆ ಒದಗಿಸಿ ಎಂದು ಕೋರಿದ್ದಾರೆ ಎನ್ನಲಾಗಿದೆ.
ಸುಪ್ರೀಂ ಕೋರ್ಟ್ ರಕ್ಷಣೆ
ನೂಪುರ್ ಶರ್ಮಾ ಅವರ ಕೋರಿಕೆ ಮೇರೆಗೆ ಸುಪ್ರೀಂ ಕೋರ್ಟ್ ರಕ್ಷಣೆ ನೀಡಿದೆ. ಶರ್ಮಾ ವಿರುದ್ಧ ದಾಖಲಾಗಿರುವ ಒಂಭತ್ತು ಪ್ರಕಣಗಳಲ್ಲಿ ಅವರನ್ನು ಬಂಧಿಸುವಂತಿಲ್ಲ ಎಂದಿರುವ ನ್ಯಾಯಾಲಯ, ತಮ್ಮ ವಿರುದ್ಧ ದಾಖಲಾಗಿರುವ ಹಲವು ಎಫ್ಐಆರ್ ಗಳನ್ನು ಒಂದರಲ್ಲಿಯೇ ಸೇರಿಸುವಂತೆ ನೂಪುರ್ ಶರ್ಮಾ ಕೇಳಿದ್ದ ಮನವಿಗೆ ಸುಪ್ರೀಂ ಕರ್ನಾಟಕ, ದೆಹಲಿ, ಮಹಾರಾಷ್ಟ್ರ , ತೆಲಂಗಾಣ, ಪಶ್ಚಮ ಬಂಗಾಳ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಆಯಾ ರಾಜ್ಯಗಳಿಂದ ಪ್ರತಿಕ್ರಿಯೆ ಕೇಳಿದೆ.
ಈ ಹಿನ್ನೆಲೆಯಲ್ಲಿ ನೂಪುರ್ ಶರ್ಮಾ ಅವರ ಮನವಿಯನ್ನು ಆಗಸ್ಟ್ 10ರಂದು ಕೈಗೆತ್ತಿಕೊಳ್ಳಲಿದೆ. ಅಲ್ಲಿಯವರೆಗೆ ಅವರ ವಿರುದ್ದ ಹೊಸ ಪ್ರಕರಣಗಳನ್ನು ದಾಖಲಿಸುವಂತಿಲ್ಲ ಹಾಗೂ ಅವರನ್ನು ಬಂಧಿಸುವಂತಿಲ್ಲ ಎಂದು ತಿಳಿಸಿದೆ. ಜುಲೈ 1ರಂದು ಸುಪ್ರೀಂ ಕೋರ್ಟ್ ಹೇಳಿಕೆ ಬಳಿಕ ನೂಪುರ್ ಅವರಿಗೆ ಜೀವ ಬೆದರಿಕೆ ಕರೆಗಳು ಹೆಚ್ಚಾಗಿವೆ ಎಂದು ಅವರ ಪರ ವಕೀಲರು ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದ್ದಾರೆ. ನೂಪುರ್ ಮನವಿ ಕುರಿತು ರಾಜ್ಯಗಳು ಶೀಘ್ರವೇ ಪ್ರತಿಕ್ರಿಯಿಸುವ ಇಲ್ಲವೇ ಸುಪ್ರೀಂ ಗೆ ತಮ್ಮ ಅಭಿಪ್ರಾಯ ತಿಳಿಸಲಿದ್ದೇವೆ ಎನ್ನಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications