Breaking: ಮಂಕಿಪಾಕ್ಸ್: ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ
ನವದೆಹಲಿ ಜುಲೈ 18: ವಿದೇಶಗಳಿಂದ ಬಂದವರ ಭಾರತ ಇಬ್ಬರಲ್ಲಿ ಮಂಕಿಫಾಕ್ಸ್ ವೈರಸ್ ದೃಢಪಟ್ಟ ಹಿನ್ನೆಲೆ ಕೇಂದ್ರ ಸರ್ಕಾರ ಮುಂಜಾಗೃತಾ ದೃಷ್ಟಿಯಿಂದ ದೇಶಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪಯಾಣಿಕರನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸುವಂತೆ ಸೂಚಿಸಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬಂದರುಗಳು ಸೇರಿದಂತೆ ವಿದೇಶಗಳಿಂದ ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಬೇಕು ಎಂದು ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಗೆ ಸೋಮವಾರ ಸೂಚಿಸಲಾಗಿದೆ.

ಈಗಾಗಲೇ ವಿದೇಶದಿಂದ ಕರ್ನಾಟಕದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಕೇರಳದ ತಿರುವನಂತಪುರಕ್ಕೆ ತೆರಳಿದ್ದ ವ್ಯಕ್ತಿಗೆ ಮೊದಲ ಬಾರಿಗೆ ಮಂಕಿಫಾಕ್ಸ ಕಾಣಿಸಿಕೊಂಡಿತ್ತು. ಇದು ದೇಶದ ಮೊದಲ ಪ್ರಕರಣವೂ ಆಗಿದೆ. ಅಲ್ಲದೇ ಸೋಮವಾರ ಮತ್ತೆ ಕೇರಳದಲ್ಲೇ ಮತ್ತೊಬ್ಬರಿಗೆ ಮಂಕಿಫಾಕ್ಸ ದೃಢಪಟ್ಟಿದ್ದು, ಇದು ಜನರ ಆತಂಕಕ್ಕೆ ಕಾರಣವಾಗಿದೆ.

ಈ ಕಾರಣದಿಂದ ಕೇಂದ್ರ ಸರ್ಕಾರ ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಪರೀಕ್ಷಿಸುವಂತೆ ತಾಕೀತು ಮಾಡಿದೆ. ಈ ಮೂಲಕ ಭಾರತ ಮಂಕಿಫಾಕ್ಸ್ ಅನ್ನು ಆರಂಭದಲ್ಲೇ ನಿಯಂತ್ರಿಸಲು ಸಜ್ಜಾಗಿದೆ ಎಂದು ತಿಳಿದು ಬಂದಿದೆ.
ಪ್ರಯಾಣಿಕರ ತಪಾಸಣೆ ಮಾರ್ಗಸೂಚಿಗಳು ಏನೇನು?
ಮಂಕಿಫಾಕ್ಸ್ ಹೆಚ್ಚಾಗುತ್ತಿದ್ದಂತೆ ಸರ್ಕಾರ ಅಂತಾರಾಷ್ಟ್ರೀಯ ಪ್ರಯಾಣಿಕರ ಆರೋಗ್ಯ ತಪಾಸಣೆ ಕುರಿತು ಕಟ್ಟುನಿಟ್ಟಿನ ಸೂಚನೆ ಮಾಡುವ ಜತೆಗೆ ಒಂದಷ್ಟು ಮಾರ್ಗಸೂಚಿಗಳನ್ನು ಹೊರಡಿಸಿದೆ.
ಅಂತಾರಾಷ್ಟ್ರೀಯ ಪ್ರಯಾಣಿಕರು ಅನಾರೋಗ್ಯವಿರುವ ಪ್ರಯಾಣಿಕರ ಜತೆಗೆ ನಿಕಟ ಸಂಬಂಧ ಹೊಂದಿರಬಾರದು. ಇಲಿಗಳು, ಅಳಿಲುಗಳು, ಮಂಗಗಳು ಮತ್ತು ಸ್ತನಿಗಳ ಸೇರಿದಂತೆ ಅಥವಾ ಸತ್ತ ಹಾಗೂ ಜೀವಂತ ಪ್ರಾಣಿಗಳಿಂದ ದೂರವಿರಬೇಕು. ಆಫ್ರಿಕಾ ಸೇರಿದಂತೆ ಇತರ ದೇಶಗಳ ಕಾಡು ಪ್ರಾಣಿಗಳಿಂದ ಉತ್ಪಾದಿಸಿ ಉತ್ಪನಗಳಾದ ಕ್ರೀಮ್, ಲೋಷನ್ ಗಳನ್ನು ಬಳಸಬಾರದು, ಅಲ್ಲಿಂದ ತರಬಾರದು ಎಂದು ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೇ ಯಾರಿಗಾದರೂ ಮಂಕಿಫಾಕ್ಸ್ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಹತ್ತಿರದ ಆಸ್ಪತ್ರೆಗೆ ತೆರಳಿ ಔಷಧಿ ಪಡೆಯಿರಿ ಮತ್ತು ಈ ಬಗ್ಗೆ ಸರಿಯಾಗಿ ಮಾಹಿತಿ ನೀಡಿ. ಜತೆಗೆ ತಮ್ಮ ಸಂಪರ್ಕಿತರ ಕುರಿತು ಆರೋಗ್ಯ ಕೇಂದ್ರ ಇಲ್ಲವೇ ಇಲಾಖೆ ತಿಳಿಸಿದೆ. ಅಲ್ಲದೇ ಈ ರೋಗ ಸಿಡುಬು ರೋಗಿಗಳಲ್ಲಿ ಕಂಡು ಬರುವ ಲಕ್ಷಣಗಳನ್ನು ಹೊಂದಿದ್ದು, ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications