Breaking: ಮಂಕಿಪಾಕ್ಸ್: ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ
ನವದೆಹಲಿ ಜುಲೈ 18: ವಿದೇಶಗಳಿಂದ ಬಂದವರ ಭಾರತ ಇಬ್ಬರಲ್ಲಿ ಮಂಕಿಫಾಕ್ಸ್ ವೈರಸ್ ದೃಢಪಟ್ಟ ಹಿನ್ನೆಲೆ ಕೇಂದ್ರ ಸರ್ಕಾರ ಮುಂಜಾಗೃತಾ ದೃಷ್ಟಿಯಿಂದ ದೇಶಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪಯಾಣಿಕರನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸುವಂತೆ ಸೂಚಿಸಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬಂದರುಗಳು ಸೇರಿದಂತೆ ವಿದೇಶಗಳಿಂದ ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಬೇಕು ಎಂದು ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಗೆ ಸೋಮವಾರ ಸೂಚಿಸಲಾಗಿದೆ.

ಈಗಾಗಲೇ ವಿದೇಶದಿಂದ ಕರ್ನಾಟಕದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಕೇರಳದ ತಿರುವನಂತಪುರಕ್ಕೆ ತೆರಳಿದ್ದ ವ್ಯಕ್ತಿಗೆ ಮೊದಲ ಬಾರಿಗೆ ಮಂಕಿಫಾಕ್ಸ ಕಾಣಿಸಿಕೊಂಡಿತ್ತು. ಇದು ದೇಶದ ಮೊದಲ ಪ್ರಕರಣವೂ ಆಗಿದೆ. ಅಲ್ಲದೇ ಸೋಮವಾರ ಮತ್ತೆ ಕೇರಳದಲ್ಲೇ ಮತ್ತೊಬ್ಬರಿಗೆ ಮಂಕಿಫಾಕ್ಸ ದೃಢಪಟ್ಟಿದ್ದು, ಇದು ಜನರ ಆತಂಕಕ್ಕೆ ಕಾರಣವಾಗಿದೆ.

ಈ ಕಾರಣದಿಂದ ಕೇಂದ್ರ ಸರ್ಕಾರ ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಪರೀಕ್ಷಿಸುವಂತೆ ತಾಕೀತು ಮಾಡಿದೆ. ಈ ಮೂಲಕ ಭಾರತ ಮಂಕಿಫಾಕ್ಸ್ ಅನ್ನು ಆರಂಭದಲ್ಲೇ ನಿಯಂತ್ರಿಸಲು ಸಜ್ಜಾಗಿದೆ ಎಂದು ತಿಳಿದು ಬಂದಿದೆ.
ಪ್ರಯಾಣಿಕರ ತಪಾಸಣೆ ಮಾರ್ಗಸೂಚಿಗಳು ಏನೇನು?
ಮಂಕಿಫಾಕ್ಸ್ ಹೆಚ್ಚಾಗುತ್ತಿದ್ದಂತೆ ಸರ್ಕಾರ ಅಂತಾರಾಷ್ಟ್ರೀಯ ಪ್ರಯಾಣಿಕರ ಆರೋಗ್ಯ ತಪಾಸಣೆ ಕುರಿತು ಕಟ್ಟುನಿಟ್ಟಿನ ಸೂಚನೆ ಮಾಡುವ ಜತೆಗೆ ಒಂದಷ್ಟು ಮಾರ್ಗಸೂಚಿಗಳನ್ನು ಹೊರಡಿಸಿದೆ.
ಅಂತಾರಾಷ್ಟ್ರೀಯ ಪ್ರಯಾಣಿಕರು ಅನಾರೋಗ್ಯವಿರುವ ಪ್ರಯಾಣಿಕರ ಜತೆಗೆ ನಿಕಟ ಸಂಬಂಧ ಹೊಂದಿರಬಾರದು. ಇಲಿಗಳು, ಅಳಿಲುಗಳು, ಮಂಗಗಳು ಮತ್ತು ಸ್ತನಿಗಳ ಸೇರಿದಂತೆ ಅಥವಾ ಸತ್ತ ಹಾಗೂ ಜೀವಂತ ಪ್ರಾಣಿಗಳಿಂದ ದೂರವಿರಬೇಕು. ಆಫ್ರಿಕಾ ಸೇರಿದಂತೆ ಇತರ ದೇಶಗಳ ಕಾಡು ಪ್ರಾಣಿಗಳಿಂದ ಉತ್ಪಾದಿಸಿ ಉತ್ಪನಗಳಾದ ಕ್ರೀಮ್, ಲೋಷನ್ ಗಳನ್ನು ಬಳಸಬಾರದು, ಅಲ್ಲಿಂದ ತರಬಾರದು ಎಂದು ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೇ ಯಾರಿಗಾದರೂ ಮಂಕಿಫಾಕ್ಸ್ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಹತ್ತಿರದ ಆಸ್ಪತ್ರೆಗೆ ತೆರಳಿ ಔಷಧಿ ಪಡೆಯಿರಿ ಮತ್ತು ಈ ಬಗ್ಗೆ ಸರಿಯಾಗಿ ಮಾಹಿತಿ ನೀಡಿ. ಜತೆಗೆ ತಮ್ಮ ಸಂಪರ್ಕಿತರ ಕುರಿತು ಆರೋಗ್ಯ ಕೇಂದ್ರ ಇಲ್ಲವೇ ಇಲಾಖೆ ತಿಳಿಸಿದೆ. ಅಲ್ಲದೇ ಈ ರೋಗ ಸಿಡುಬು ರೋಗಿಗಳಲ್ಲಿ ಕಂಡು ಬರುವ ಲಕ್ಷಣಗಳನ್ನು ಹೊಂದಿದ್ದು, ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications