Breaking News: ರಾಜ್ಯಸಭೆಯಿಂದ ಟಿಎಂಸಿ ಸಂಸದ ಸಂತಾನು ಸೇನ್ ಅಮಾನತು
ನವದೆಹಲಿ, ಜುಲೈ 22: ರಾಜ್ಯಸಭೆಯ ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯ ಸಂತಾನು ಸೇನ್ ರನ್ನು ಅಮಾನತುಗೊಳಿಸಲಾಗಿದೆ. ಆಗಸ್ಟ್ 13ರವರೆಗೂ ನಡೆಯಲಿರುವ ಮುಂಗಾರು ಅಧಿವೇಶನದಿಂದ ದೂರ ಇರುವಂತೆ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಸೂಚನೆ ನೀಡಿದ್ದಾರೆ.
ಕಳೆದ ಗುರುವಾರ ರಾಜ್ಯಸಭೆಯಲ್ಲಿ ಇಸ್ರೇಲಿನ ಬೇಹುಗಾರಿಕೆ ತಂತ್ರಾಂಶ ಪೆಗಾಸಸ್ ಕುರಿತು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಉತ್ತರ ನೀಡುತ್ತಿದ್ದರು. ಈ ವೇಳೆ ಸಚಿವರ ಕೈಯಲ್ಲಿದ್ದ ಪತ್ರಗಳನ್ನು ಕಸಿದುಕೊಂಡ ಸಂಸದ ಸಂತಾನು ಸೇನ್ ಅದನ್ನು ಹರಿದು ಹಾಕಿದ್ದರು.
"ಸದನದಲ್ಲಿ ನಡೆದ ಘಟನೆಗಳ ಬಗ್ಗೆ ನನಗೆ ತುಂಬಾ ನೋವಾಗುತ್ತದೆ. ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ಸಚಿವರ ಕೈಯಲ್ಲಿರುವ ಪತ್ರಗಳನ್ನು ಕಸಿದು ಹರಿದು ಹಾಕುವಷ್ಟು ಕೆಳಮಟ್ಟಕ್ಕೆ ಇಳಿದಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಇಂಥ ನಡುವಳಿಕೆಯು ಸಂಸದೀಯ ಪ್ರಜಾಪ್ರಭುತ್ವದ ಮೇಲಿನ ದಾಳಿ ಆಗಿರುತ್ತದೆ," ಎಂದು ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಮಧ್ಯಾಹ್ನ 12.30ಕ್ಕೆ ಸಂಸತ್ ಕಲಾಪ ಮುಂದೂಡಿಕೆ:
ಟಿಎಂಸಿ ಸಂಸದ ದೆರೆಕ್ ಒಬ್ರಿಯನ್ ಗುರುವಾರದ ಘಟನೆ ಬಗ್ಗೆ ರಾಜ್ಯಸಭೆಯಲ್ಲಿ ಉಲ್ಲೇಖಿಸುತ್ತಿದ್ದಂತೆ ಗದ್ದಲ ಗಲಾಟೆ ಶುರುವಾಯಿತು. ಸಂತಾನು ಸೇನ್, ದಯವಿಟ್ಟು ಸದನದಿಂದ ಹೊರ ನಡೆದು, ಸುಗಮವಾಗಿ ಕಲಾಪ ನಡೆಸುವುದಕ್ಕೆ ಅವಕಾಶ ನೀಡಿ ಎಂದು ರಾಜ್ಯಸಭೆ ಸಭಾಪತಿಗಳು ಹೇಳಿದರು. ಮಧ್ಯಾಹ್ನ 12 ಗಂಟೆಗೆ ಸದನವನ್ನು ಮುಂದೂಡಲಾಯಿತು. ಇದರ ಬೆನ್ನಲ್ಲೇ ಮೇಲ್ಮನೆ ಕಲಾಪ ಆರಂಭವಾಗುತ್ತಿದ್ದಂತೆ ಉಪ ಸಭಾಪತಿ ಹರಿವಂಶ್ ಕೂಡಾ ಕಲಾಪದಿಂದ ಹೊರ ನಡೆಯುವಂತೆ ಟಿಎಂಸಿ ಸಂಸದ ಸಂತಾನು ಸೇನ್ ರಿಗೆ ಸೂಚನೆ ನೀಡಿದರು. ಗದ್ದಲ ಗಲಾಟೆ ಹೆಚ್ಚಾದ ಹಿನ್ನೆಲೆ ಮತ್ತೆ ಸದನವನ್ನು ಅರ್ಧಗಂಟೆಗಳ ಕಾಲ ಮುಂದೂಡಲಾಯಿತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications