ಸರ್ಕಾರ ಬಿಜೆಪಿಯದು, ರಾಜ್ಯಗಳ ಮೇಲೆ ಗೂಬೆಕೂರಿಸುವುದೇಕೆ?: ಚಿದಂಬರಂ
ನವದೆಹಲಿ, ಜನವರಿ 11: "ಕೇಂದ್ರದಲ್ಲಿ ಮತ್ತು ಹಲವು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವೇ ಇದೆ. ಆದರೂ ಇಂಧನ ದರವನ್ನು ಕಡಿಮೆ ಮಾಡಲು ರಾಜ್ಯಗಳಿಂದಾಗಿ ತಡೆಯಾಗುತ್ತಿದೆ ಎನ್ನುತ್ತಿರುವುದೇಕೆ?" ಎಂದು ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಪ್ರಶ್ನಿಸಿದ್ದಾರೆ.
ತೈಲ ಬೆಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿರುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪೆಟ್ರೋಲ್ -ಡೀಸೆಲ್ ಅನ್ನು ಜಿಎಸ್ಟಿ ಅಡಿಯಲ್ಲಿ ತಂದರೆ ದರ ಇಳಿಕೆಯಾಗುತ್ತದೆ. ಆದರೆ ಬಿಜೆಪಿ ಅದನ್ನು ಮಾಡಲು ಮೀನಮೇಷ ಎಣಿಸುತ್ತಿದೆ ಎಂದರು.

ಇಂಧನ ಬೆಲೆಯನ್ನು ಜಿಎಸ್ಟಿ ಅಡಿಯಲ್ಲಿ ತರುವುದಕ್ಕೆ ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂದು ಬಿಜೆಪಿ ಹೇಳುತ್ತಿದೆ, ಆದರೆ ಕೇಂದ್ರದಲ್ಲಿರುವುದೂ ಬಿಜೆಪಿ ಸರ್ಕಾರ ಮತ್ತು ರಾಷ್ಟ್ರದ ಹಲವು ರಾಜ್ಯಗಳಲ್ಲಿರುವುದೂ ಬಿಜೆಪಿ ಸರ್ಕಾರ. ಹೀಗಿರುವಾಗ ತೈಲ ಬೆಲೆಯನ್ನು ಇಳಿಸುವ ಸಲುವಾಗಿ ಮಹತ್ವದ ನಿರ್ಣಯ ತೆಗೆದುಕೊಳ್ಳಲು ಈ ಸರ್ಕಾರಕ್ಕೆ ಸಾಧ್ಯವಿಲ್ಲವೇ ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ.
ಹಣದುಬ್ಬರ ಹೆಚ್ಚುತ್ತಿರುವ ಕುರಿತೂ ಕಳವಳ ವ್ಯಕ್ತಪಡಿಸಿದ ಅವರು, ಇದು ಕೇಂದ್ರ ಸರ್ಕಾರದ ವೈಫಲ್ಯ ಎಂದು ದೂರಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications