ಬ್ರೀಫ್ಕೇಸ್ ಸಂಸ್ಕೃತಿಗೆ ಅಂತ್ಯ ಹಾಡಿದ ನಿರ್ಮಲಾ ಸೀತಾರಾಮನ್
Recommended Video
ನವದೆಹಲಿ, ಜುಲೈ 5: ಇದೇ ಮೊದಲ ಬಾರಿಗೆ ಹಣಕಾಸು ಸಚಿವರಾಗಿ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಅವರು ಸುದೀರ್ಘ ಕಾಲದ ಸಂಪ್ರದಾಯಕ್ಕೆ ಅಂತ್ಯ ಹಾಡಿ ಹೊಸ ನಡೆ ಅನುಸರಿಸುವ ಮೂಲಕ ಗಮನ ಸೆಳೆದಿದ್ದಾರೆ.
ಇದುವರೆಗೆ ಬಜೆಟ್ ಮಂಡನೆ ಮಾಡುತ್ತಿದ್ದ ಸಚಿವರು ಚರ್ಮದ ಬ್ರೀಫ್ಕೇಸ್ನಲ್ಲಿ ಬಜೆಟ್ ಪ್ರತಿಗಳನ್ನು ತರುತ್ತಿದ್ದರು. ದೊಡ್ಡ ಮೊತ್ತದ ಆಯವ್ಯಯದ ಕುರಿತಾಗಿ ಬಜೆಟ್ ಮಂಡಿಸುವುದರ ಸಂಕೇತವಾಗಿ ಈ ಬ್ರೀಫ್ಕೇಸ್ಅನ್ನು ಬಳಸಲಾಗುತ್ತಿತ್ತು.
ಆದರೆ, ನಿರ್ಮಲಾ ಸೀತಾರಾಮನ್ ಅವರು ಕೆಂಪು ಬಣ್ಣದ ಪುಟಾಣಿ ಚೀಲವನ್ನು ತಂದಿದ್ದಾರೆ. ಅದರಲ್ಲಿ ರಾಷ್ಟ್ರೀಯ ಚಿಹ್ನೆಯಾದ ಅಶೋಕ ಸ್ಥಂಭದ ಲಾಂಛನವಿದೆ. ಈ ಚೀಲಕ್ಕೆ 'ಬಹಿ ಖಾತಾ' (ಲೆಡ್ಜರ್) ಎಂದು ಕರೆಯಲಾಗುತ್ತದೆ. ಈ ಮೂಲಕ ಹಳೆಯ 'ಬ್ರೀಫ್ಕೇಸ್ ಸಂಸ್ಕೃತಿ'ಯನ್ನು ಅಂತ್ಯಗೊಳಿಸಿದ್ದಾರೆ.

ನಿರ್ಮಲಾ ಅವರು ಹಿಡಿದುಕೊಂಡು ಬಂದ ಈ ಚೀಲದ ಚಿತ್ರ ಈ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಸೃಷ್ಟಿಸಿದೆ.
'ಕೆಂಪು ಬಣ್ಣದ ಚೀಲವು ಪಾಶ್ಚಿಮಾತ್ಯ ಚಿಂತನೆಗಳ ಗುಲಾಮಗಿರಿಯಿಂದ ಆಚೆ ಬಂದಿರುವುದರ ಸಂಕೇತ. ಇದು ಸೂಟ್ಕೇಸ್ ಅಲ್ಲ, ಲೆಡ್ಜರ್ ಬುಕ್' ಎಂದು ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ. ಸುಬ್ರಮಣಿಯನ್ ಹೇಳಿದ್ದಾರೆ.
1947ರಲ್ಲಿ ಮೊದಲ ಹಣಕಾಸು ಸಚಿವ ಆರ್.ಎನ್. ಷಣ್ಮುಖಂ ಚೆಟ್ಟಿ ಅವರು ದೇಶದ ಪ್ರಪ್ರಥಮ ಹಣಕಾಸು ಬಜೆಟ್ ಮಂಡಿಸುವ ಸಂದರ್ಭದಲ್ಲಿ ಚರ್ಮದ ಕಡತವನ್ನು ಕೊಂಡೊಯ್ದಿದ್ದರು.
1970ರಿಂದ ಹಣಕಾಸು ಸಚಿವರು ಚರ್ಮದ ಬ್ರೀಫ್ಕೇಸ್ ಹಿಡಿದು ಬರುವುದು ಸಂಪ್ರದಾಯವಾಗಿ ಆರಂಭವಾಗಿತ್ತು. ಇದು 1860ರಿಂದಲೂ ಬ್ರಿಟನ್ನಲ್ಲಿ ನಡೆದುಬರುತ್ತಿದ್ದ ಪದ್ಧತಿಯಾಗಿತ್ತು. ಭಾರತದಲ್ಲಿ ಬಳಸುತ್ತಿದ್ದ ಬ್ರೀಫ್ಕೇಸ್ನ ಬಣ್ಣ ಮತ್ತು ಆಕಾರ ಮಾತ್ರ ಬದಲಾಗಿತ್ತು.
ನಿರ್ಮಲಾ ಸೀತಾರಾಮನ್ ಅವರು 1970ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರು ಬಜೆಟ್ ಮಂಡಿಸಿದ ನಂತರ 49 ವರ್ಷದ ಬಳಿಕ ಕೇಂದ್ರದಲ್ಲಿ ಬಜೆಟ್ ಮಂಡಿಸುತ್ತಿರುವ ಮೊದಲ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications