Get Updates
Get notified of breaking news, exclusive insights, and must-see stories!

ಉಪಚುನಾವಣೆ ಸೋಲು ಬಿಜೆಪಿಗೆ ಎಚ್ಚರಿಕೆಯ ಪಾಠ: ಸ್ವಾಮಿ

ನವದೆಹಲಿ, ಜೂನ್ 01: "ಉಪಚುನಾವಣೆಯಲ್ಲಿನ ಹೀನಾಯ ಸೋಲು ಬಿಜೆಪಿಗೆ ಎಚ್ಚರಿಕೆಯ ಪಾಠ" ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

4 ಲೋಕಸಭಾ ಮತ್ತು 10 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಕ್ರಮಾವಾಗಿ ಒಂದು-ಒಂದು ಸ್ಥಾನಗಳಲ್ಲಿ ಮಾತ್ರ ಜಯಗಳಿಸಿತ್ತು. ಬಿಜೆಪಿ ಆಡಳಿತದಲ್ಲಿರುವ ಉತ್ತರ ಪ್ರದೇಶದಲ್ಲು ಬಿಜೆಪಿ ಉಪಚುನಾವಣೆಯಲ್ಲಿ ಹೀನಾಯ ಪ್ರದರ್ಶನ ತೋರಿದ್ದು ಚರ್ಚೆಗೆ ಗ್ರಾಸವಾಗಿತ್ತು.

"ಬಿಜೆಪಿ ಸೋಲಿನಿಂದಾಗಿ ಪಕ್ಷದ ಕಾರ್ಯಕರ್ತರು ಬೇಸರಪಡುವ ಅಗತ್ಯವಿಲ್ಲ. ಪಕ್ಷ ಎಲ್ಲ ಕಾರ್ಯಕರ್ತರಿಗೂ ಗೌರವ ನೀಡಬೇಕು. ಪಕ್ಷವನ್ನು ಕಾರ್ಪೋರೇಟ್ ಆಫೀಸ್ ರೀತಿಯಲ್ಲಿ ನಡೆಸುವುದು ಸರಿಯಲ್ಲ. ಈ ಫಲಿತಾಂಶ ನಮಗೆ ಎಚ್ಚರಿಕೆಯ ಪಾಠ" ಎಮದು ಸ್ವಾಮಿ ಹೇಳಿದ್ದಾರೆ.

By election results wakeup call for BJP: Swamy

ಒಟ್ಟು 14 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಉತ್ತರಾಖಂಡ್ ನ ತರಾಲಿ ವಿಧಾನಸಭಾ ಕ್ಷೇತ್ರ ಮತ್ತು ಮಹಾರಾಷ್ಟ್ರದ ಪಲ್ಘರ್ ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಜಯ ಸಾಧಿಸಿತ್ತು. ಉಳಿದೆಲ್ಲ ಕಡೆ ಆಯಾ ರಾಜ್ಯದ ಪ್ರಾದೇಶಿಕ ಪಕ್ಷಗಳೇ ಮೇಲುಗೈ ಸಾಧಿಸಿದ್ದವು. ಮೇ 28 ರಂದು ನಡೆದಿದ್ದ ಉಪಚುನಾವಣೆಗಳ ಫಲಿತಾಂಶ ಮೇ 31 ರಂದು ಹೊರಬಿದ್ದಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+